ನೌಕರರ ಕೋವಿಡ್ ಚಿಕಿತ್ಸಾ ವೆಚ್ಚ ಭರಿಸುವ ಕ್ರಮಕ್ಕೆ ಅಭಿನಂದನೆ
Team Udayavani, Aug 10, 2020, 2:02 PM IST
ಯಾದಗಿರಿ: ಕೋವಿಡ್ ಕರ್ತವ್ಯದ ವೇಳೆ ಸೋಂಕಿಗೆ ಗುರಿಯಾದ ನೌಕರರಿಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಯಾದಗಿರಿ ಜಿಲ್ಲಾ ಶಾಖೆ ಅಭಿನಂದನೆ ಸಲ್ಲಿಸಿದೆ.
ಈ ಕುರಿತು ಹೇಳಿಕೆ ನೀಡಿರುವ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮಾಲಿ ಪಾಟೀಲ್, ಕೋವಿಡ್ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಮನವಿಗೆ ಸ್ಪಂದಿಸಿದ ಸರ್ಕಾರ ಕೋವಿಡ್ ಕರ್ತವ್ಯಕ್ಕೆ ನಿಯೋಜನೆಗೊಂಡ ಸರ್ಕಾರದ ಎಲ್ಲ ಇಲಾಖೆಗಳ ನೌಕರರು ಹಾಗೂ ಅವರ ಕುಟುಂಬಕ್ಕೆ ಮನೋಸ್ಥೈರ್ಯ ತುಂಬುವ ಸಲುವಾಗಿ ಕೋವಿಡ್ ಕರ್ತವ್ಯದ ಸಂದರ್ಭದಲ್ಲಿ ಮೃತಪಟ್ಟ ಸರ್ಕಾರಿ ನೌಕರರ ಕುಟುಂಬದವರಿಗೆ 30 ಲಕ್ಷ ಪರಿಹಾರ ಘೋಷಿಸಿತ್ತು.
ಈಗ ಕೋವಿಡ್ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಕೋವಿಡ್ ಸೋಂಕಿಗೆ ಒಳಗಾಗದ ನೌಕರರ ಸಂಪೊರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿದ್ದು ಸಿಎಂಗೆ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಹಾಗೂ ಪದಾಧಿಕಾರಿಗಳಿಗೆ ಯಾದಗಿರಿ ಜಿಲ್ಲಾ ಘಟಕದ ರಾಜ್ಯ ಪರಷತ್ ಸದಸ್ಯ ಸಂತೋಷ ನೀರೆಟಿ ಅಭಿನಂದನೆ ಸಲ್ಲಿಸಿದ್ದಾರೆ.
ಯಾದಗಿರಿ 91 ಜನರಿಗೆ ವೈರಸ್ ಕಾಟ : ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ತಗುಲಿದವರ ಸಂಖ್ಯೆ ಮೂರು ಸಾವಿರದ ಗಡಿ ದಾಟಿದೆ. ಸೋಂಕಿನ ಮೂಲವೇ ಪತ್ತೆಯಾಗದವರಲ್ಲಿ ವೈರಸ್ ವ್ಯಾಪಕವಾಗಿ ಹರುಡುತ್ತಿದ್ದು ಸೋಂಕಿನಿಂದ ಆ.1ರಂದು ಆಸ್ಪತ್ರೆಗೆ ದಾಖಲಾಗಿದ್ದ 35 ವರ್ಷದ ಪುರುಷ ಪಿ-136374 ಆ.8ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇಂದಿಗೆ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರವಿವಾರವೂ ವೈರಸ್ ಅಟ್ಟಹಾಸ ಮುಂದುವರಿದಿದ್ದು ಮತ್ತೆ 91 ಜನರಿಗೆ ವೈರಸ್ ವಕ್ಕರಿಸಿದ್ದು, ಸೋಂಕಿತರ ಸಂಖ್ಯೆ 3061ಕ್ಕೆ ಏರಿಕೆಯಾಗಿದೆ. ಒಟ್ಟು 2119 ಜನರು ಸೋಂಕಿನಿಂದ ಗುಣಮುಖವಾಗಿದ್ದು, 925 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ