ಗೋಹತ್ಯೆ ನಿಷೇಧ ಕಾಯ್ದೆಗೆ ವಿರೋಧ
ಕಾಯ್ದೆ ಮತ್ತು ಸುಗ್ರೀವಾಜ್ಞೆ ವಿರೋಧಿಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ
Team Udayavani, Jan 19, 2021, 6:49 PM IST
ಸುರಪುರ: ಗೋ ಸಂರಕ್ಷಣೆ ಮತ್ತು ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಜಾರಿ ವಿರೋಧಿಸಿ ರಾಜ್ಯ ಸರಕಾರ ಹೊರಡಿಸುತ್ತಿರುವ ಸುಗ್ರೀವಾಜ್ಞೆ ಕೈ ಬಿಡುವಂತೆ ಒತ್ತಾಯಿಸಿ ಪ್ರಗತಿಪರ ಹಾಗೂ ಅಲ್ಪಸಂಖ್ಯಾತ ಮುಸ್ಲಿಂ ಸಂಘ ಸಂಘಟನೆಗಳು ಜಂಟಿಯಾಗಿ ಸೋಮವಾರ ನಗರದಲ್ಲಿ ಪ್ರತಿಭಟಿಸಿದರು.
ತಥಾಗತ್ ಗೌಥಮಬುದ್ದ ವೃತ್ತದಿಂದ ಅರಮನೆ ಮಾರ್ಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ಮಹಾತ್ಮಾ ಗಾಂಧಿಧೀಜಿ ವೃತ್ತದಲ್ಲಿ ಸಮಾವೇಶಗೊಂಡು ಪ್ರತಿಭಟಿಸಿದರು. ಕಾಯ್ದೆ ಮತ್ತು ಸುಗ್ರೀವಾಜ್ಞೆ ವಿರೋಧಿಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಬೆಂಬಲಿಸಿ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.
ದಲಿತ ಸಂಘಟನೆ ಕ್ರಾಂತಿಕಾರಿ ಬಣದ ಜಿಲ್ಲಾ ಸಂಚಾಲಕ ಮಲಿಕಾರ್ಜುನ ಕ್ರಾಂತಿ ಮಾತನಾಡಿ, ಪ್ರಧಾನಿ ಮೋ ದಿ ನೇತೃತ್ವದ ಕೇಂದ್ರ ಸರಕಾರ
ಇದೊಂದು ಜನವಿರೋಧಿ ಸರಕಾರವಾಗಿದೆ. ಕಾಯ್ದೆಯ ಸಾಧಕ-ಬಾಧಕಗಳ ಕುರಿತು ಸಂಸತ್ತಿನಲ್ಲಿ ಚರ್ಚಿಸದೆ ಯಾವುದೇ ದೂರದೃಷ್ಟಿ ಇಲ್ಲದೆ ತರಾತರುಯಲ್ಲಿ ಜಾರಿ ಮಾಡುವ ಮೂಲಕ ಅಲ್ಪಸಂಖ್ಯಾತರ ಆಹಾರ ಪದ್ಧತಿಗೆ ಕಡಿವಾಣ ಹಾಕುವ ಹುನ್ನಾರು ನಡೆಸಿದೆ ಎಂದು ಆರೋಪಿಸಿದರು.
ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಮೂಲಕ ಸಲ್ಲಿಸಿದರು. ರಾಜಾ ವೇಣುಗೋಪಾಲ ನಾಯಕ, ಮಲ್ಲಿಕಾರ್ಜುನ ಸತ್ಯಂಪೇಟ, ವೆಂಕೋಬ ದೊರೆ, ಮಲ್ಲಯ್ಯ ಕಮತಗಿ, ದೇವಿಂದ್ರಪ್ಪ ಪತ್ತಾರ, ರಾಹುಲ್ ಹುಲಿಮನಿ ಮಾತನಾಡಿದರು. ತಿಪ್ಪಣ್ಣ ಶೆಳ್ಳಗಿ, ಜಟ್ಟೆಪ್ಪ ನಾಗರಾಳ, ಗಂಗಾದರ ನಾಯಕ, ರಮೇಶ ದೊರೆ, ಅಹ್ಮದ ರಿಯಾಜ್, ಶೇಖ ದಾವುದ್, ಮಹಮದ್ ಹುಸ್ಮಾನ, ಬಸೀರ್ ತಾಳಿಕೋಟಿ, ಮಹಮದ್ ಉಸ್ಮಾನ, ರಾಜು ಕಟ್ಟಿಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್