ಸ್ವ-ಸಹಾಯ ಸಂಘ ರಚಿಸಿ ಆರ್ಥಿಕ ಪ್ರಗತಿ ಹೊಂದಿ


Team Udayavani, Jun 20, 2018, 5:03 PM IST

yadagiri2.jpg

ನಾರಾಯಣಪುರ: ಮಹಿಳೆಯರ ಸಬಲಿಕರಣಕ್ಕೆ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ರಚಿಸಿ ಸ್ವಯಂ ಉದ್ಯೋಗಕ್ಕೆ ಪೂರಕವಾದ ಯೋಜನೆ ರೂಪಿಸಿ ತರಬೇತಿನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಾರ್ಯ ಶ್ಲಾಘನೀಯವಾಗಿದೆ ಎಂದು ಪಿಎಸ್‌ಐ ಕೆ.ಎಚ್‌. ಶಿರೋಮಣಿ ಹೇಳಿದರು.

ಪಟ್ಟಣದ ಹನುಮದೇವರ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ
ಮಂಗಳವಾರ ನಡೆದ ನೂತನ ಮಹಾಲಕ್ಷ್ಮೀ ಮಹಿಳಾ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ ಹಾಗೂ ದಾಖಲಾತಿ ಹಸ್ತಾಂತರ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರದಂತೆ ಎನ್ನುವಂತೆ ಪ್ರತಿ ಮಹಿಳೆ ಶಿಕ್ಷಣವಂತರಾಗುವುದು
ಅವಶ್ಯವಿದೆ. ಈ ನಿಟ್ಟಿನಲ್ಲಿ ಮಹಿಳೆಯರು ಶಿಕ್ಷಣ ಪಡೆದು ಸ್ವ-ಸಹಾಯ ಗುಂಪುಗಳಲ್ಲಿ ಭಾಗಿಯಾಗಿ ಸರ್ಕಾರ
ವಿವಿಧ ಯೋಜನೆಗಳಡಿಯಲ್ಲಿ ದೊರೆಯುವ ಆರ್ಥಿಕ ನೆರವಿನ ಸಹಾಯದೊಂದಿಗೆ ಸ್ವಯಂ ಉದ್ಯೋಗ ಹೊಂದಿ
ಆರ್ಥಿಕವಾಗಿ ಸದೃಢರಾಗಿ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುರಪುರ ಸಮನ್ವಯಾಧಿಕಾರಿ ವಿಶಾಲಾ ಪ್ರಾಸ್ಥಾವಿಕವಾಗಿ
ಮಾತನಾಡಿ, ಇಲ್ಲಿನ 75 ಸ್ವ-ಸಹಾಯ ಗುಂಪುಗಳಲ್ಲಿ ಐದು ಗುಂಪುಗಳನ್ನು ಆಯ್ಕೆ ಮಾಡಿ, ಆರೋಗ್ಯ, ಶಿಕ್ಷಣ, ಸ್ವಯಂ
ಉದ್ಯೋಗ, ಪ್ರತಿಭೆ, ಸರ್ಕಾರದ ಸೌಲಭ್ಯ ಸೇರಿದಂತೆ ಇತರೆ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಸಮಗ್ರ
ಮಾಹಿತಿ ಒದಗಿಸಿ ತರಬೇತಿಗೊಳಿಸಲಾಗುತ್ತದೆ. ಈ ಎಲ್ಲಾ ಯೋಜನೆಗಳ ಸದುಪಯೋಗವನ್ನು ಗುಂಪಿನ ಸದಸ್ಯೆಯರು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ರೇಣುಕಾ ವಹಿಸಿದ್ದರು. ಎಎಸೈ ಕೃಷ್ಣಮೂರ್ತಿ, ನಾಗರಾಜ
ಜೂಗುರ ವೇದಿಕೆ ಮೇಲಿದ್ದರು. ಭೀಮಾಬಾಯಿ ಸಂಗಡಿಗರು ಪ್ರಾರ್ಥಿಸಿದರು. ಸೇವಾ ಪ್ರತಿನಿಧಿ  ಸವಿತಾ
ಸ್ವಾಗತಿಸಿದರು. ಕೊಡೇಕಲ್‌ ವಲಯದ ಮೇಲ್ವಿಚಾರಕ ಶ್ರೀನಿವಾಸ ನಿರೂಪಿಸಿ, ವಂದಿಸಿದರು. ಮಹಿಳಾ ಸ್ವ-ಸಹಾಯ
ಗುಂಪುಗಳ ಸದಸ್ಯೆಯರು ಇದ್ದರು.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.