ದಲಿತ ಮುಖಂಡರ ಬಂಧನ ಖಂಡಿಸಿ ಮನವಿ ಸಲ್ಲಿಕೆ
Team Udayavani, Jan 19, 2018, 3:39 PM IST
ಶಹಾಪುರ: ಕಲಬುರಗಿ ನಗರಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಪ್ರವೇಶಕ್ಕೆ ತಡೆಯೊಡ್ಡಿ ಪ್ರತಿಭಟನೆ ನಡೆಸಿದ ದಲಿತ ಮುಖಂಡರ ಬಂಧನ ಖಂಡಿಸಿ, ಇಲ್ಲಿನ ದಲಿತ ಸೇನೆ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿತು.
ಮುಖಂಡ ಶರಣರಡ್ಡಿ ಹತ್ತಿಗೂಡೂರ ಮಾತನಾಡಿ, ಕೇಂದ್ರ ಸಚಿವರು ಈಚೆಗೆ ನೀಡಿದ ಸಂವಿಧಾನ ಬದಲಾವಣೆ ಹೇಳಿಕೆಗೆ ಸಂಬಂಧಿ ಸಿದಂತೆ ಕಲಬುರಗಿಗೆ ಆಗಮಿಸಿದ ಅನಂತಕುಮಾರ ಹೆಗಡೆ ಅವರ ವಿರುದ್ಧ ಪ್ರತಿಭಟನೆ ನಡೆಸಿದ ದಲಿತ ಮುಖಂಡರನ್ನು ಬಂಧಿಸಿದ್ದು, ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು. ಸಚಿವ ಹೆಗಡೆ ಅವರ ವಿರುದ್ಧ ಕಪ್ಪು ಪಟ್ಟಿ ಪ್ರದರ್ಶನ ಮಾಡಿರುವುದು ಮಹಾ ಅಪರಾಧವಲ್ಲ. ಅವರ ಹೇಳಿಕೆ ಮಹಾ ಅಪರಾಧವಾಗಿದೆ. ಅದರ ಅರಿವು ಸಚಿವ ಹೆಗಡೆ ಅವರಿಗೆ ಇರಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ವಿಠ್ಠಲ್ ದೊಡ್ಡಮನಿ, ದಲಿತಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ಜನವಾದಿ ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ಕೆ.ನೀಲಾ ಅವರನ್ನು ಬಂಧಿಸಿದ್ದು, ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಅನಸೂರ, ಮರಿಲಿಂಗ ಅನವಾರ, ಬಸವರಾಜ ಅಗಸ್ತಿಹಾಳ, ನಿಂಗಪ್ಪ ಭಂಡಾರಿ, ಪರಶುರಾಮ ಹೈಯಾಳ (ಕೆ), ಬಸಪ್ಪ ಭಂಡಾರಿ, ನಿಂಗಣ್ಣ ಕರಡಿ, ಯಲ್ಲಪ್ಪ ವಡಗೇರಾ, ಪರಶುರಾಮ ತುಮಕೂರ,
ರೆಡ್ಡಿ ಯಕ್ಷಂತಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ