ಅರ್ಜಿ ತ್ವರಿತ ಇತ್ಯರ್ಥಕ್ಕೆ ಡಿಸಿ ಸೂಚನೆ
Team Udayavani, Dec 11, 2020, 5:41 PM IST
ಯಾದಗಿರಿ: ಬರುವ 2021ರ ಜನವರಿ ಒಂದಕ್ಕೆ ಸಂಬಂಧಿ ಸಿದ ಮತದಾರರ ಪರಿಷ್ಕರಣೆಗೆ ಕುರಿತಂತೆ ನಮೂನೆ 6, 7, 8 ಹಾಗೂ 8ಎ ಅರ್ಜಿ ತ್ವರಿತವಾಗಿ ಪರಿಶೀಲಿಸಿ ಇತ್ಯರ್ಥ ಪಡಿಸುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್. ಶಹಾಪುರ ತಹಶೀಲ್ದಾರ್ಗೆ ನಿರ್ದೇಶನ ನೀಡಿದರು.
ಶಹಾಪುರ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಗ್ರಾಪಂಗಳಿಗೆಚುನಾವಣೆ ಘೋಷಣೆಯಾಗಿದೆ. ಈ ದಿಸೆಯಲ್ಲಿ ಚುನಾವಣೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಸಬೇಕು. ಶಹಾಪುರ ತಾಲೂಕು ವ್ಯಾಪ್ತಿಯ ಎಲ್ಲ ಗ್ರಾಪಂ ವ್ಯಾಪ್ತಿಯ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆ ಗುರುತಿಸಬೇಕು. ಆ ಮತಗಟ್ಟೆಗಳಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಎಂದರು.
ಅರ್ಹ ವಿಕಲಚೇತನ ಮತದಾರರ ಮಾಹಿತಿ ಸಂಗ್ರಹಿಸಬೇಕು. ಮತದಾನಕ್ಕೆ ಆಗಮಿಸುವ ವಿಕಲಚೇತನ ಮತದಾರರು ಮತಗಟ್ಟೆಗೆಬಂದು ಮತದಾನ ಮಾಡಲು ವ್ಹೀಲ್ಚೇರ್ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸುವಂತೆ ತಿಳಿಸಿದರು.
ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಡಿ.15ರಂದುಪಿಆರ್ಒ ತರಬೇತಿ ಏರ್ಪಡಿಸಲಾಗಿದೆ. ಆ ತರಬೇತಿಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಮುಖ್ಯವಾಗಿ ಚುನಾವಣೆ ನೀತಿಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು. ನೀತಿಸಂಹಿತೆ ಉಲ್ಲಂಘಿಸುವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಚುನಾವಣೆ ಪ್ರಕ್ರಿಯೆಯಲ್ಲಿ ವಿದ್ಯುತ್ ಅಡಚಣೆಯಾಗಬಾರದು, ಡಾಟಾ ಎಂಟ್ರಿ ಆಪರೇಟರ್, ಆಸನಗಳು, ಕುಡಿಯುವ ನೀರು ಪೂರೈಕೆ, ಟೇಬಲ್ಗಳು ಸೇರಿದಂತೆ ಅಗತ್ಯ ಸಕಲ ವ್ಯವಸ್ಥೆ ಅಚ್ಚುಕಟ್ಟಾಗಿ ಕಲ್ಪಿಸುವಂತೆ ತಾಪಂ ಇಒ ಜಗನ್ನಾಥ ಮೂರ್ತಿಗೆ ಸೂಚಿಸಿದರು.
ಈ ವೇಳೆ ಶಹಾಪುರ ತಹಶೀಲ್ದಾರ್ ಮೆಹಬೂಬ್ಬಿ,ಶಿರಸ್ತೇದಾರ್ ವೆಂಕಟೇಶ್, ಸಿಬ್ಬಂದಿ ರಮೇಶ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ