ಕುರಿಗಾಹಿ ಹತ್ಯಾಚಾರ: ಆರೋಪಿತನ ಬಂಧನಕ್ಕೆ ಆಗ್ರಹ
Team Udayavani, Feb 25, 2022, 11:54 AM IST
ಸುರಪುರ: ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು. ನೊಂದ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘ ತಾಲೂಕು ಘಟಕದ ಕಾರ್ಯಕರ್ತರು ಗುರುವಾರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟಿಸಿದರು.
ಸಂಘದ ತಾಲೂಕು ಅಧ್ಯಕ್ಷ ಕಾಳಪ್ಪ ಕವಾತಿ ಮಾತನಾಡಿ, ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ಈ ಕೃತ್ಯಯಲ್ಲಿ ಇನ್ನು ಹಲವರು ಭಾಗಿಯಾಗಿದ್ದಾರೆ ಎಂದು ಲಕ್ಷ್ಮೀ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಸೂಕ್ತ ತನಿಖೆ ನಡೆಸಬೇಕು. ಲಕ್ಷ್ಮೀಗೆ ಮೂವರು ಚಿಕ್ಕ ಮಕ್ಕಳಿದ್ದು, ಕುಟುಂಬವು ಕುರಿ ಸಾಕಾಣಿಕೆ ಮೇಲೆ ಅವಲಂಬಿತವಾಗಿದೆ. ಆಕೆಯ ಕುಟುಂಬಕ್ಕೆ ಸರಕಾರದಿಂದ ಕನಿಷ್ಟ 10 ಲಕ್ಷ ರೂ. ಪರಿಹಾರ ಧನ ಘೋಷಿಸಬೇಕು. ರಾಜ್ಯದ ಎಲ್ಲ ವಲಸೆ ಕುರಿಗಾರರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು.
ನಂತರ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಗಂಗಾಮತ ಸಮಾಜದ ತಾಲೂಕು ಅಧ್ಯಕ್ಷ ಭಂಡಾರೆಪ್ಪ ನಾಟೇಕಾರ, ಕುರುಬ ಸಮಾಜದ ಮುಖಂಡರಾದ ಮಲ್ಲು ದಂಡಿನ್, ಭೀಮರಾಯ ಮೂಲಿಮನಿ, ಬೀರಲಿಂಗ ಮಗ್ಗದ, ಕೃಷ್ಣಾ ಬಾದ್ಯಾಪುರ, ಸಿದ್ರಾಮ ಎಲಿಗಾರ, ಬೀರಪ್ಪ ಪೂಜಾರಿ, ಹನುಮಂತ್ರಾಯ ಕಡ್ಡಿ, ಭೀಮಣ್ಣ ಕುರಿ, ಮಂಜುನಾಥ ತಿಂಥಣಿ, ವೆಂಕಿ ಕೊಳ್ಳಿ, ವಾಸು ಕವಾತಿ, ಚೆನ್ನಬಸವ ವಾಗಣಗೇರಾ, ಮಹಾರಾಜ ಬಬಲಾದಿ, ಬಲಭೀಮ ಬೈರಿಮಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು