ಬೇಡಿಕೆ ಈಡೇರಿಕೆಗೆ ಆಗ್ರಹ
Team Udayavani, Feb 5, 2019, 12:14 PM IST
ಸುರಪುರ: ದಲಿತರಿಗೆ ಮೀಸಲಿಟ್ಟ ಅಭಿವೃದ್ಧಿ ಹಣ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ದೇಶದಲ್ಲಿ ದಲಿತರ ಮೇಲೆ ದೌರ್ಜನ್ಯ ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದಲಿತ ಹಕ್ಕುಗಳ ಸಮಿತಿ ಕಾರ್ಯಕರ್ತರು ತಾಪಂ ಕಚೇರಿ ಎದುರು ಪ್ರತಿಭಟಿಸಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದರು.
ಸಮಿತಿ ತಾಲೂಕು ಅಧ್ಯಕ್ಷ ಪ್ರಕಾಶ ಆಲ್ಹಾಳ ಮಾತನಾಡಿ, ದಲಿತರಿಗೆ ಮೀಸಲಿಟ್ಟ ಅಭಿವೃದ್ಧಿ ಹಣ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ. 5 ವರ್ಷಗಳ ಅವಧಿಯಲ್ಲಿ ದೇಶದಲ್ಲಿ ನಡೆಯುತ್ತಿರುವ ದಲಿತರ ಮೇಲಿನ ಹಲ್ಲೆ ದೌರ್ಜನ್ಯ ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ರೈತ ಸಂಘದ ಮುಖಂಡ ಯಲ್ಲಪ್ಪ ಚಿನ್ನಕಾರ ಮಾತನಾಡಿ, ಪ್ರತಿ ವರ್ಷ ಐದು ನೂರು ಎಕರೆ ಭೂಮಿ ಖರೀದಿಸಿ ಭೂ ರಹಿತ ದಲಿತರಿಗೆ ಭೂಮಿ ನೀಡಬೇಕು. ನಿವೇಶನ ರಹಿತ ದಲಿತರಿಗೆ ನಿವೇಶನ ನೀಡಬೇಕು. ದಲಿತರಿಗೆ ಪ್ರತೇಕ ಸ್ಮಶಾನ ಭೂಮಿ ಮಂಜೂರು ಮಾಡಬೇಕು. 200 ಮಾನವ ದಿನ ನಿರ್ಮಿಸಿ ಖಾತ್ರಿ ಯೋಜನೆ ಅಡಿ ಕೂಲಿ ಹೆಚ್ಚಿಸಿ ಕಾರ್ಮಿಕರಿಗೆ ಕೆಲಸ ನೀಡಬೇಕು. ದೌರ್ಜನ್ಯಕೊಳಗಾದ ದಲಿತ ಕಟುಂಬಗಳ ಪರಿಹಾರ ಧನ ಹೆಚ್ಚಿಸಬೇಕು. ದೌರ್ಜನ್ಯ ತಡೆಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ದಲಿತ ಜನಸಂಖ್ಯೆಗನುಗುಣವಾಗಿ ಪರಿಶಿಷ್ಟ ಯೋಜನೆಗೆ ಅನುದಾನ ನೀಡಬೇಕು. ಸ್ಮಶಾನ ನಿರ್ವಹಣೆಗೆ ದಲಿತರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಗೆ ಬರೆದ 17 ಬೇಡಿಕೆಗಳ ಮನವಿಯನ್ನು ಗ್ರೇಡ್-2 ತಹಶೀಲ್ದಾರ್ ಸೊಫಿಯಾ ಸುಲ್ತಾನ್ ಅವರಿಗೆ ಸಲ್ಲಿಸಿದರು. ಸಮಿತಿ ಮುಂಖಡರಾದ ಭೀಮರಾಯ, ಪರುಶುರಾಮ ಮುದ್ನೂರ, ಬೀರಲಿಂಗ ಗೌಡಗೇರಿ, ಅಶೋಕ ಹದ್ನೂರ, ಮಲ್ಲು ಜೈನಾಪುರ, ಮೂರ್ತಿ ಬೊಮ್ಮನಳ್ಳಿ, ಶರಣು, ವಿನೋದ, ಬಸವರಾಜ, ವೆಂಕಟೇಶ, ರಮೇಶ, ನಾಗಣ್ಣ ಕಲ್ಲದೇವನಳ್ಳಿ, ಮಾಳಪ್ಪ ಕಿರದಳ್ಳಿ, ರಮೇಶ ಅರಕೇರಿ, ಶಿವಶಂಕರ ಹೊಸ್ಮನಿ, ನಿಂಗಣ್ಣ ಗೋನಾಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?