ಕೊಳಗೇರಿ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಆಗ್ರಹ
Team Udayavani, Jan 26, 2022, 1:43 PM IST
ಯಾದಗಿರಿ: ರಾಜ್ಯಾದ್ಯಂತ ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಕುರಿತು ಸರ್ಕಾರದ ಆದೇಶದಂತೆ ನಗರ ಸ್ಥಳೀಯ ಸಂಸ್ಥೆಗಳ ಮಾಲೀಕತ್ವದಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳ ಜಮೀನುಗಳನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಮಾರ್ಗಸೂಚಿಯನ್ವಯ ಕ್ರಮಬದ್ಧವಾಗಿ ನಿಗದಿತ ಅವಧಿಯಲ್ಲಿ ಹಸ್ತಾಂತರ ಮಾಡುವಂತೆ ಮದನಪುರ ಸ್ಲಂ ನಿವಾಸಿಗಳ ಸಂಘ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮದನಪುರ ಸ್ಲಂ ನಿವಾಸಿಗಳ ಸಂಘ ಅಧ್ಯಕ್ಷ ಆನಂದ ನಾಟೇಕಾರ, ಯಾದಗಿರಿ ನಗರಸಭೆ ವ್ಯಾಪ್ತಿಯ ಕೊಳಚೆ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವ ಕುರಿತು ಘೋಷಿತ ಕೊಳಚೆ ಪ್ರದೇಶಗಳ ಜಮೀನುಗಳನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಹಸ್ತಾಂತರಿಸಲು ಪತ್ರ ಬರೆಯಲಾಗಿದೆ. ಶಾಸ್ತ್ರಿ ನಗರ ಕೊಳಗೇರಿ ಪ್ರದೇಶ ತಕ್ಷಣ ಕೊಳಚೆ ಮಂಡಳಿ ರಾಯಚೂರು ಅವರಿಗೆ ಹಸ್ತಾಂತರಗೊಂಡರೆ ನಮಗೆ ತಕ್ಷಣ ನ್ಯಾಯ ಸಿಗುತ್ತದೆ ಎಂದು ವಿವರಿಸಿದರು.
ನಗರಸಭೆ ಈಗಾಗಲೇ ನಗರದ 15 ಘೋಷಿತ ಕೊಳಚೆ ಪ್ರದೇಶ ಹಸ್ತಾಂತರಿಸಿದೆ. ಆದರೆ ಘೋಷಿತ ಸ್ಲಂ ಆಗಿರುವ ಶಾಸ್ತ್ರಿ ನಗರ ಕೊಳಚೆ ಪ್ರದೇಶವಾದ ಸರ್ವೇ ನಂ. 389/1 ರಲ್ಲಿನ 1 ಎಕರೆ ಜಮೀನಿನಲ್ಲಿ ವಾಸಿಸುತ್ತಿರುವವರಿಗೆ ಹಕ್ಕುಪತ್ರ ವಿತರಿಸಿಲ್ಲ. ಈಗಾಗಲೇ ಹಕ್ಕುಪತ್ರ ವಿತರಿಸುವಂತೆ ಹೈಕೋರ್ಟ್ ಆದೇಶಿಸಿದೆ. ಮಾಸಾಂತ್ಯಕ್ಕೆ ಕ್ರಮ ಜರುಗಿಸದಿದ್ದರೆ ಹೈಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಕಲಬುರ್ಗಿ ಹೈಕೋರ್ಟ್ನಲ್ಲಿ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
ಈ ವೇಳೆ ಸಂಘದ ಗೌರವ ಸಲಹೆಗಾರಾದ ವೈಜನಾಥಸ್ವಾಮಿ ಹಿರೇಮಠ, ಗೌರವಾಧ್ಯಕ್ಷ ಸ್ವಾಮಿನಾಥನ್ ಅಪ್ಪುಕುಟನ್, ಅಧ್ಯಕ್ಷ ಆನಂದ ನಾಟೇಕರ್, ಜಯಕೃಷ್ಣ, ಮಹಮ್ಮದ್, ಬಾಬು, ಅಕºರ್, ಗಫೂರ, ಅಬ್ಟಾಸ್, ವಿಜಯಲಕ್ಷ್ಮೀ, ಈರಮ್ಮ, ಗೌರಮ್ಮ, ಚಾಂದಬಿ, ಮಹೆಬೂಬಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ