ಜಲಪಾತ ಅಭಿವೃದ್ಧಿಗೆ ನಿರುತ್ಸಾಹ


Team Udayavani, Jun 11, 2018, 11:46 AM IST

yad-1.jpg

ಯಾದಗಿರಿ: ಗಿರಿ ಜಿಲ್ಲೆಯ ಏಕೈಕ ನಜರಾಪುರ ಜಲಪಾತವನ್ನು ಅಭಿವೃದ್ಧಿಗೊಳಿಸಲು ಜಿಲ್ಲಾಡಳಿತ ನಿರುತ್ಸಾಹ ತೋರುತ್ತಿದ್ದು, ಇಲ್ಲಿ ಹಲವು ಮೂಲ ಸೌಲಭ್ಯಗಳ ಕೊರತೆಯಿದೆ. ಬಿಸಿಲ ನಾಡಿನಲ್ಲೂ ನೈಸರ್ಗಿಕ ಸೌಂದರ್ಯದ
ನಡುವೆ ಗುಡ್ಡಗಾಡು ಪ್ರದೇಶದಲ್ಲಿರುವ ನಜರಾಪುರ ಫಾಲ್ಸ್‌ ಪ್ರವಾಸಿಗರನ್ನು ಆಕರ್ಷಿಸುವ ಸ್ಥಳವಾಗಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ದೂರದಲ್ಲಿರುವ ಫಾಲ್ಸ್‌ ಈ ಭಾಗದ ಒಳ್ಳೆಯ ಪ್ರವಾಸಿ ತಾಣ.

ಮಳೆಗಾಲ ಬಂತೆಂದರೆ ಈ ತಾಣ ಮಲೆನಾಡಿನ ಸೋಬಗನ್ನೇ ಮರೆಸುತ್ತದೆ. ಇತ್ತೀಚೆಗೆ ಸುರಿದ ಮಳೆಯಿಂದ ಮೈತುಂಬಿ ಹರಿಯುತ್ತಿರುವ ಇಲ್ಲಿನ ಫಾಲ್ಸ್‌ ವೀಕ್ಷಣೆಗೆ ಜಿಲ್ಲೆಯಲ್ಲದೇ ಕಲಬುರಗಿ, ಬೀದರ, ತೆಲಂಗಾಣ ಸೇರಿದಂತೆ ಹಲವೆಡೆಯಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ನೈಸರ್ಗಿಕ ತಾಣವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. 

ಬೇಸಿಗೆಯಲ್ಲಿ ನೀರಿಲ್ಲದೇ ಸೊರಗಿದ್ದ ಫಾಲ್ಸ್‌ಗೆ ಇತ್ತೀಚೆಗೆ ಸುರಿದ ಧಾರಾಕಾರ ಮಳೆ ಜೀವಕಳೆ ತುಂಬಿದೆ. ಸುತ್ತಲು ಹಚ್ಚ ಹಸಿರಿನಿಂದ ಕೂಡಿದ ಗುಡ್ಡಗಳು ಮನಸ್ಸಿಗೆ ಮುದ ನೀಡುತ್ತಿವೆ. ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ವನ ಭೋಜನಕ್ಕಾಗಿ ಇಲ್ಲಿಗೆ ಆಗಮಿಸುತ್ತಾರೆ. ಈ ಜಲಪಾತ ವೀಕ್ಷಿಸಲು ಸಾಕಷ್ಟು ಬಾರಿ ಬಂದಿದ್ದೇವೆ. ಪುನಃ ಪುನಃ ಮನಸ್ಸು ಇಲ್ಲಿಗೆ ಎಳೆಯುತ್ತದೆ. 

ಆದರೆ ಜಲಪಾತ ವೀಕ್ಷಣೆಗೆ ಸೂಕ್ತ ವ್ಯವಸ್ಥೆಯಿಲ್ಲ. ಮಕ್ಕಳು ಮತ್ತು ಮಹಿಳೆಯರಿಗೆ ತೊಂದರೆಯಾಗುತ್ತದೆ. ಇದನ್ನು ಅಭಿವೃದ್ಧಿಪಡಿಸಿದರೆ ಅನುಕೂಲವಾಗುತ್ತದೆ ಎನ್ನುತ್ತಾರೆ ಪ್ರವಾಸಿಗರಾದ ಭೀಮರಾಯ, ಅಭಿಮನ್ಯು, ಮಹಮೂದ, ಶಿವು, ತಾಯಪ್ಪ, ಮಲ್ಲು ಹಾಗೂ ಬಸಂತು.

ಪ್ರವಾಸಿಗರ ಜೀವಕ್ಕಿಲ್ಲ ಗ್ಯಾರಂಟಿ: ಜಿಲ್ಲೆಯ ಜಲಪಾತದ ಅಭಿವೃದ್ಧಿಯನ್ನು ಜಿಲ್ಲಾಡಳಿತ ಮರೆತಿದೆ. ಇಲ್ಲಿಗೆ ಬರುವ ಪ್ರವಾಸಿಗರ ಜೀವಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ. ರಸ್ತೆ ಪಕ್ಕದ ಆಳದಲ್ಲಿರುವ ಫಾಲ್ಸ್‌ ವೀಕ್ಷಣೆಗೆ ಸೂಕ್ತ ವ್ಯವಸ್ಥೆಯಿಲ್ಲ. ಸುತ್ತಲೂ ದಟ್ಟ ಗುಡ್ಡಗಳಿಂದ ಕೂಡಿದ್ದು, ಅಪಾಯದಲ್ಲಿ ಜನರು ಸಮಯ ಕಳೆಯುವಂತಾಗಿದೆ.

ಜಲಪಾತಕ್ಕೆ ಈ ಹಿಂದೆ ಯಾದಗಿರಿಯ ಜಿಲ್ಲಾಧಿಕಾರಿಯಾಗಿದ್ದ ಎಫ್‌.ಆರ್‌. ಜಮಾದಾರ, ಮನೋಜ್‌ ಜೈನ್‌, ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ್‌ ಚಿಂಚನಸೂರ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಜಲಪಾತಕ್ಕೆ ಭೇಟಿ ನೀಡಿ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದರು. ಸುಮಾರು ವರ್ಷಗಳು ಉರುಳಿದರೂ ಭರವಸೆ ಇನ್ನೂ ಕನಸಾಗಿಯೇ ಉಳಿದಿದೆ. ಜಲಪಾತದ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯಿಂದ ಹಣ ಬಿಡುಗಡೆಯಾಗಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಜಲಪಾತ ಮಾತ್ರ ಅಭಿವೃದ್ಧಿಯಾಗಿಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಉತ್ತರಿಸಬೇಕಿದೆ.

ಜಿಲ್ಲೆಯ ಏಕೈಕ ಪ್ರವಾಸಿ ತಾಣವಾಗಿರುವ ನಜರಾಪುರ ಫಾಲ್ಸ್‌ ಅಭಿವೃದ್ಧಿಗೆ ಜಿಲ್ಲಾಡಳಿತ ಮುಂದಾಗಬೇಕು. ಜಲಪಾತ ವೀಕ್ಷಣೆಗೆ ಸೂಕ್ತ ವ್ಯವಸ್ಥೆಯಿಲ್ಲ. ಈ ಕುರಿತು ಕ್ರಮ ಕೈಗೊಳ್ಳಬೇಕು. 
ಅಭಿಮನ್ಯು, ಪ್ರವಾಸಿಗ

ಅನೀಲ ಬಸೂದೆ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.