ಈವರೆಗೂ ಸಿಸಿ ರಸ್ತೆ ಕಾಣದ ಚೆನ್ನೂರು!
ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು
Team Udayavani, Sep 24, 2020, 7:17 PM IST
ಹುಣಸಗಿ: ಗ್ರಾಮೀಣ ಪ್ರದೇಶದಲ್ಲಿ ಸಿಸಿ ರಸ್ತೆ, ಚರಂಡಿ ಹಾಗೂ ಮೂಲ ಸೌಕರ್ಯ ಕಲ್ಪಿಸಲು ಸರಕಾರ ಸಾಕಷ್ಟು ಯೋಜನೆಗಳು ಜಾರಿಗೆ ತಂದರೂ ಕೂಡ ತಾಲೂಕಿನ ಚೆನ್ನೂರು ಗ್ರಾಮ ಈವರೆಗೆ ಸಿಸಿ ರಸ್ತೆ, ಚರಂಡಿ ಕಂಡಿಲ್ಲ. ಹೀಗಾಗಿ ಗ್ರಾಮದ ಪ್ರತಿ ವಾರ್ಡ್, ಓಣಿಗಳ ಮುಖ್ಯ ರಸ್ತೆಯಲ್ಲೇ ಕೊಳಚೆ ನೀರು ಹರಿಯುತ್ತಿದ್ದು, ಇದರಲ್ಲೇ ಜನ ಸಂಚರಿಸಲು ಹರಸಾಹಸ ಪಡಬೇಕಿದೆ.
ವಜ್ಜಲ್ ಗ್ರಾಪಂ ವ್ಯಾಪ್ತಿಯ ಚೆನ್ನೂರು ಗ್ರಾಮದಲ್ಲಿ ಸುಮಾರು 1600 ಜನಸಂಖ್ಯೆ ಇದೆ. ಇಬ್ಬರು ಗ್ರಾಪಂ ಸದಸ್ಯರಿದ್ದಾರೆ. ಈಗಷ್ಟೇ ಒಂದು ಸ್ಥಾನ ಹೆಚ್ಚಿಗೆ ಆಗಿದ್ದು, ಮೂವರು ಸದಸ್ಯರನ್ನು ಹೊಂದಿದೆ. ಆದರೆ ಗ್ರಾಮದ ಅಭಿವೃದ್ಧಿ ಮಾತ್ರ ಶೂನ್ಯ ಎಂದು ಗ್ರಾಮಸ್ಥರು ಅಸಮಾಧಾನ ತೋಡಿಕೊಂಡಿದ್ದಾರೆ.
ಗ್ರಾಮದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಸಿಸಿ ರಸ್ತೆ ಕೊರತೆಯಿಂದ ಪ್ರತಿ ಮನೆಯ ಮೋರೆ ನೀರು ಹಾಗೂ ಮಳೆ ನೀರು ರಸ್ತೆಯಲ್ಲೇ ಹರಿಯುತ್ತದೆ. ಇನ್ನು ತಗ್ಗು ಪ್ರದೇಶದಲ್ಲಿ ಕೊಳಚೆ ನೀರು ನಿಂತು ರಸ್ತೆ ಕೆಸರುಗದ್ದೆಯಂತಾಗುತ್ತದೆ. ದುರ್ವಾಸನೆಯಿಂದ ವಾತಾವರಣ ಕಲುಷಿತಗೊಂಡಿದೆ. ಸೊಳ್ಳೆ ಕಾಟ ಹೆಚ್ಚಿದೆ. ಇಂತಹ ರಸ್ತೆಯಲ್ಲಿ ಮಕ್ಕಳು, ವೃದ್ಧರು ಸಂಚರಿಸಲು ಸಮಸ್ಯೆ ಎದುರಿಸುವಂತಾಗಿದೆ. ಕಾಲು ಜಾರಿ ಬಿದ್ದರೆ ಕೈ-ಕಾಲು ಮುರಿದುಕೊಳ್ಳುವಂತಿದೆ. ಮುಸ್ಲಿಂ ವಾರ್ಡ್ನಲ್ಲಿಯೇ ಹೆಚ್ಚು ಸಮಸ್ಯೆ ಇದೆ ಎಂದು ಇಲ್ಲಿನ ಜನರು ಹೇಳುತ್ತಾರೆ. ಮುಖ್ಯರಸ್ತೆ ಅಧೋಗತಿಯಿಂದಾಗಿ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ. ಮಹಿಳೆಯರಿಗೆ ಶೌಚಾಲಯ ಇಲ್ಲದೇ ಸಮಸ್ಯೆ ಎದುರಿಸು ವಂತಾಗಿದೆ. ಸೊಳ್ಳೆಗಳ ಹಾವಳಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.
ಕನಿಷ್ಠ ಪಕ್ಷ ಗ್ರಾಮ ಪಂಚಾಯಿತಿಯವರು ಬ್ಲಿಚಿಂಗ್ ಪೌಡರ್ ಸಿಂಪಡಿಸುವ ಕಾರ್ಯಕ್ಕೂ ಮುಂದಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿ, ಶೌಚಾಲಯ, ಬೀದಿ ದೀಪದಂತಹ ಸೌಲಭ್ಯ ಕಲ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ರಸ್ತೆ ಅವ್ಯವಸ್ಥೆಯಿಂದ ಭಾರೀ ಸಮಸ್ಯೆ ಆಗಿದೆ. ಸಂಚಾರಕ್ಕೆ ತೊಂದರೆಯಾಗಿದೆ. ಸಿಸಿ ರಸ್ತೆ, ಚರಂಡಿ ನಿರ್ಮಿಸಲು ಜನಪ್ರತಿನಿಧಿಗಳು ಗಮನಹರಿಸಬೇಕು.- ಮಶಾಕ ಎಚ್.ಮುಲ್ಲಾ, ಚೆನ್ನೂರು ಗ್ರಾಮದ ನಿವಾಸಿ
ಬಾಲಪ್ಪ.ಎಂ.ಕುಪ್ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…