ಮೂರು ಶಾಲೆ ಸೌಕರ್ಯಕ್ಕೆ 80 ಲಕ್ಷ ನಿಗದಿ

ಕರ್ನಾಟಕ ಪಬ್ಲಿಕ್‌ ಶಾಲೆಯ ಸಮಸ್ಯೆಗಳು ನೀಗಲಿ,ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ

Team Udayavani, Dec 20, 2020, 4:04 PM IST

ಮೂರು ಶಾಲೆ ಸೌಕರ್ಯಕ್ಕೆ  80 ಲಕ್ಷ  ನಿಗದಿ

ಯಾದಗಿರಿ: ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕ ನರಸಿಂಹ ನಾಯಕ ಜುಮಾಲಪುರ ದೊಡ್ಡ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಏದಲ್‌ಬಾವಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ರಂಗಂಪೇಟೆಯ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ದತ್ತು ಪಡೆದು ಮೂರು ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು 80.35 ಲಕ್ಷ ರೂ. ನಿಗದಿಯಾಗಿದೆ.

ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಜಟಿಲ ಸಮಸ್ಯೆಗಳು ಬೇರೂರಿದ್ದು, ಪ್ರಮುಖವಾಗಿ ಒಂದರಿಂದ ದ್ವಿತೀಯ ಪಿಯುವರೆಗೆ ತರಗತಿಗಳು ನಡೆಯುತ್ತದೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯು ಕನ್ನಡ, ಉರ್ದು ಹಾಗೂ ಇಂಗ್ಲಿಷ್‌ ಮಾಧ್ಯಮ ವ್ಯಾಸಂಗ ವ್ಯವಸ್ಥೆಯಿದ್ದು, ಕಾಲೇಜು ಹಂತದಲ್ಲಿ ವಿಜ್ಞಾನ ಮತ್ತು ಕಲಾ ವಿಭಾಗಗಳಲ್ಲಿ ಸುಮಾರು 1400ರಷ್ಟು ವಿದ್ಯಾರ್ಥಿಗಳ ದಾಖಲಾತಿಯಿದೆ.

ಪ್ರಮುಖವಾಗಿ ಒಂದೇ ಒಂದು ಶೌಚಾಲಯವಿದ್ದು, ಇತ್ತ ಮಕ್ಕಳಿಗೆ ಇನ್ನೊಂದೆಡೆ ಶಿಕ್ಷಕ, ಉಪನ್ಯಾಸಕ ವೃಂದಕ್ಕೂ ತೊಂದರೆಯಾಗಿದೆ. ಕೆಲವು ವರ್ಷಗಳ ಹಿಂದೆ 16 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶೌಚಾಲಯಕ್ಕೆ ಅ ಧಿಕಾರಿಗಳು ನೀರಿನ  ಸಂಪರ್ಕವೇ ನೀಡದಿರುವುದು ನಿರುಪಯುಕ್ತವಾಗಿದೆ.

ಶೌಚಾಲಯ ಸಮಸ್ಯೆಯಿಂದ ಮಕ್ಕಳು ಪರಿತಪಿಸುವಂತಾಗಿದ್ದು, ಶಾಸಕರು ಮೊದಲ ಆದ್ಯತೆಯಾಗಿ ಪರಿಗಣಿಸಿದ್ದಾರೆ. ಪ್ರಾಥಮಿಕಶಾಲೆಯ ಕೊಠಡಿಗಳು ಚಿಕ್ಕದಾಗಿದ್ದು, ಮಕ್ಕಳಿಗೆಬೋಧನೆ ಕೊಠಡಿಗಳ ಸಮಸ್ಯೆಯುಂಟಾಗಿದೆ.ಅಭ್ಯಾಸಕ್ಕೆ ಹೆಚ್ಚಿನ ಕೊಠಡಿಗಳ ಅಗತ್ಯವೂ ಇದೆ. ಇನ್ನು ಕುಡಿಯುವ ನೀರಿನ ಸಮಸ್ಯೆಯೂ ಕಾಡುತ್ತಿದ್ದು, ಅದಕ್ಕೂ ಪರಿಹಾರ ಕಲ್ಪಿಸಬೇಕಿದೆ.

ಜುಮಾಲಪುರ ದೊಡ್ಡ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಮಾರು 20ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದ್ದು, ಜೂನ್‌-ಜುಲೈ ತಿಂಗಳು ಬಂತೆಂದರೆನೀರಿಗಾಗಿ ಅಲೆಯುವ ಪರಿಸ್ಥಿತಿಯಿದೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರು ಕಾಳಜಿ ವಹಿಸಬೇಕಿದೆ. ಇಲ್ಲಿಯೂ ಮಕ್ಕಳಿಗೆ ಶೌಚಾಲಯ, ಗ್ರಂಥಾಲಯ, ಕಾಂಪೌಂಡ್‌ ಹೆಚ್ಚುವರಿ ಕೊಠಡಿಗಳ ಅಗತ್ಯವಿದೆ. ಸಾಕಷ್ಟು ಅನಾನುಕೂಲಗಳ ಮಧ್ಯೆಯೇ ಮಕ್ಕಳು ಪಾಠಕೇಳುವ ಅನಿವಾರ್ಯತೆಎದುರಾಗಿದೆ.

ಏದಲಬಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಶೈಕ್ಷಣಿಕವಾಗಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಮಕ್ಕಳಿಗೆ ಬೋಧಿ ಸಲು ಸಿದ್ಧತೆ ನಡೆಸಿದ್ದು, ಇಲ್ಲಿ ಅಗತ್ಯವಿರುವ ಕಂಪ್ಯೂಟರ್‌, ಪ್ರೊಜೆಕ್ಟರ್‌ ಜತೆ ಸ್ಕ್ರೀನ್‌, ಯುಪಿಎಸ್‌ ಬ್ಯಾಟರಿ,ರಂಗಮಂದಿರ, ಶುದ್ಧ ನೀರು ಹಾಗೂ ಹೈಟೆಕ್‌ ಶೌಚಾಲಯ , ಟೇಬಲ್‌, ಕುರ್ಚಿ ಸೇರಿದಂತೆ ಮೂಲಸೌಕರ್ಯ ಒದಗಿಸಲಾಗುತ್ತಿದೆ.

ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರು ದತ್ತು ಪಡೆದ ಶಾಲೆಗಳಿಗೆ ಶೀಘ್ರವೇ ಅಭಿವೃದ್ಧಿ ಕಾಮಗಾರಿ ಕೈಗೊಂಡು ಮಕ್ಕಳ ಕಲಿಕೆಗೆ ಪ್ರೋತ್ಸಾಹವಾಗುವ ವಾತಾವರಣ ನಿರ್ಮಾಣವಾಗಲಿ ಎನ್ನುವುದು ಶಿಕ್ಷಣ ಪ್ರೇಮಿಗಳ ಮಾತು

ಶಾಲೆಗೆ ಕಂಪ್ಯೂಟರ್‌, ಟೇಬಲ್‌ ಕುರ್ಚಿ, ರಂಗಮಂದಿರ ಸೇರಿದಂತೆ ಪ್ರಯೋಗಾಲಯದ ಬೇಡಿಕೆಯಿದೆ. ಇನ್ವರ್ಟರ್‌ ಸೇರಿದಂತೆ ನೀರಿನ ಸಿಂಟೆಕ್ಸ್‌ ಟ್ಯಾಂಕ್‌ ಅಳವಡಿಸಿದರೆ ಮಕ್ಕಳಿಗೆ ಸಾಕಷ್ಟು ಅನುಕೂಲವಾಗಲಿದೆ. – ಸಂಗಪ್ಪ ಡಿ.ವಿಶ್ವಕರ್ಮ, ಮುಖ್ಯಗುರು, ಏದಲಭಾವಿ.

ಶಾಲೆಗೆ ಹೆಚ್ಚಿನ ಕೊಠಡಿಗಳ ಅಗತ್ಯವಿತ್ತು. ಶಾಸಕರು ಬೇಡಿಕೆಗೆ ಸ್ಪಂದಿಸಿದ್ದರಿಂದ ಈಗಾಗಲೇ 4 ಕೊಠಡಿಗಳು ಮುಕ್ತಾಯ ಹಂತದಲ್ಲಿದೆ. ಗ್ರಂಥಾಲಯದ ಅಗತ್ಯವಿದೆ. ನೀರಿನ ಸಮಸ್ಯೆ ವಿಪರೀತವಾಗಿದ್ದು, ಶಾಶ್ವತ ಪರಿಹಾರ ಅಗತ್ಯವಾಗಿದೆ. ಕಾಂಪೌಂಡ್‌ ಗೋಡೆ ನಿರ್ಮಿಸಬೇಕಿದೆ.  -ಅಚ್ಚಪ್ಪ ಗೌಡ, ಮುಖ್ಯಗುರು ಜುಮಾಲಪುರ ದೊಡ್ಡ ತಾಂಡಾ.

ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ 1400ರಷ್ಟು ಮಕ್ಕಳಿದ್ದಾರೆ. ಶೌಚಾಲಯ ಸಮಸ್ಯೆ ಕಾಡುತ್ತಿದ್ದು, ಕೇವಲ ಒಂದು ಶೌಚಗೃಹವಿದೆ. ಕೆಲವು ವರ್ಷಗಳ ಹಿಂದೆ ನಿರ್ಮಾಣವಾಗಿದ್ದು, ನೀರಿನ ಸಂಪರ್ಕವಿಲ್ಲದೇ ಉಪಯೋಗಕ್ಕೆ ಬಾರದೆ ಉಳಿದಿದೆ. ಹೆಚ್ಚಿನ ಕೊಠಡಿಗಳ ಅಗತ್ಯ ಸೇರಿದಂತೆ ಬೇಡಿಕೆ ಸಲ್ಲಿಸಲಾಗಿದೆ. – ಬಸವರಾಜ ಕೊಡೇಕಲ್‌, ಪ್ರಾಚಾರ್ಯರು, ಕರ್ನಾಟಕ ಪಬ್ಲಿಕ್‌ ಶಾಲೆ

 

-ಅನೀಲ ಬಸೂದೆ

Ad

ಟಾಪ್ ನ್ಯೂಸ್

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

Maha-CM–MLA-Canteen

ಕ್ಯಾಂಟೀನ್‌ ಸಿಬ್ಬಂದಿಗೆ ಹಲ್ಲೆ: ಜನಪ್ರತಿನಿಧಿಗಳು ಹೊಡೆಯುವುದು ಸರಿಯಲ್ಲ: ಸಿಎಂ ಫಡ್ನವೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Hunasagi: ಧುಮ್ಮಿಕ್ಕುತ್ತಿದೆ ಆಮಲಿಂಗೇಶ್ವರ ಜಲಪಾತ

Yadagiri: Bhoyal Harshal appointed as new DC

Yadagiri: ನೂತನ ಡಿಸಿಯಾಗಿ ಭೋಯಲ್ ಹರ್ಷಲ್ ನಿಯೋಜನೆ

ಕಲುಷಿತ ನೀರು ಸೇವನೆಯಿಂದ ಒಂದೇ ಗ್ರಾಮದ ಮೂರು ಜನ ಸಾವು!

Surapura: ಕಲುಷಿತ ನೀರು ಸೇವನೆಯಿಂದ ಒಂದೇ ಗ್ರಾಮದ ಮೂರು ಜನ ಸಾವು!

1-dess-JDS

Congress; ಮೊದಲು ತಮ್ಮ ಶಾಸಕರನ್ನು ಉಳಿಸಿಕೊಳ್ಳಿ…:ಶಾಸಕ ಉದಯ್ ಗೆ ನಿಖಿಲ್ ತಿರುಗೇಟು

ರಾಜ್ಯವನ್ನಾಳುವವರು ಜೆಡಿಎಸ್ ಪ್ರಾಡಕ್ಟ್ ಗಳೆ: ನಿಖಿಲ್ ಕುಮಾರಸ್ವಾಮಿ

ಪ್ರಸ್ತುತ ರಾಜ್ಯವನ್ನಾಳುವವರು ಜೆಡಿಎಸ್ ಪ್ರಾಡಕ್ಟ್ ಗಳೆ… ನಿಖಿಲ್ ಕುಮಾರಸ್ವಾಮಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.