ಮಲ್ಲಯ್ಯನ ಜಾತ್ರೆ ರದ್ದಾದ್ರೂ ಭಕ್ತಿ ಪರಾಕಾಷ್ಠೆ ಮೆರೆದ ಭಕ್ತರು

ನಿರೀಕ್ಷೆಯಂತೆ ಭಕ್ತರು ತಂದ ಕುರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Team Udayavani, Jan 15, 2021, 6:39 PM IST

ಮಲ್ಲಯ್ಯನ ಜಾತ್ರೆ ರದ್ದಾದ್ರೂ ಭಕ್ತಿ ಪರಾಕಾಷ್ಠೆ ಮೆರೆದ ಭಕ್ತರು

ಯಾದಗಿರಿ: ಕಲ್ಯಾಣ ಕರ್ನಾಟಕದ ಐತಿಹಾಸಿಕ ಮೈಲಾಪುರ ಮಲ್ಲಯ್ಯನ ಜಾತ್ರೆ ಕೋವಿಡ್‌ ಹಿನ್ನೆಲೆ ರದ್ದುಗೊಂಡಿದ್ದರೂ ಭಕ್ತರು ಮಾತ್ರ ಕೋವಿಡ್‌ ನಿಯಮಗಳನ್ನು ಗಾಳಿಗೆ ತೂರಿ ಭಕ್ತಿಯ ಪರಾಕಾಷ್ಠೆ ಮೆರೆದರು. ತಾಲೂಕಿನ ಮೈಲಾಪುರ ಮಲ್ಲಯ್ಯ ಜಾತ್ರೆ ಪ್ರತಿವರ್ಷವೂ ಸಂಕ್ರಮಣ ದಿನದಿಂದ ಸುಮಾರು 5 ದಿನದ ವರೆಗೆ ನಡೆಯುತ್ತದೆ.

ಸಂಕ್ರಮಣ ದಿನ ದೇವಸ್ಥಾನದಿಂದ ಮಲ್ಲಯ್ಯ ಗಂಗಾಸ್ನಾನ, ಭವ್ಯ ಪಲ್ಲಕ್ಕಿ ಉತ್ಸವ ನಡೆಯುವ ವೇಳೆ ಅಸಂಖ್ಯಾತ ಭಕ್ತರು ಪಲ್ಲಕ್ಕಿ ಮೇಲೆ ಭಂಡಾರ ಹಾಕುವ ಮೂಲಕ ಶ್ರದ್ಧಾ ಭಕ್ತಿಯಿಂದ ನಮಿಸುವುದು ವಾಡಿಕೆ. ಈ ಬಾರಿ ಕೋವಿಡ್‌ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಜಿಲ್ಲಾಡಳಿತ ಗ್ರಾಮದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿತ್ತು.

ಜನರು ಒಬ್ಬೊಬ್ಬರಾಗಿ ಕಾಲ್ನಡಿಗೆ ಮೂಲಕ ಬಂದು ಭಕ್ತಿಭಾವ ಪ್ರದರ್ಶಿಸಿದರು. ಪ್ರತಿವರ್ಷವೂ ಮಧ್ಯಾಹ್ನ 12ರ ಸುಮಾರಿಗೆ ಗಂಗಾ ಸ್ನಾನ, ಪಲ್ಲಕ್ಕಿ ಉತ್ಸವ ಜರುಗುತ್ತಿತ್ತು. ಈ ಬಾರಿ ದೇವಸ್ಥಾನ ಮಂಡಳಿ ಬೆಳಿಗ್ಗೆಯೇ ಗಂಗಾ ಸ್ನಾನ ಮತ್ತು ಪಲ್ಲಕ್ಕಿ ಉತ್ಸವಗಳನ್ನು ಸರಳವಾಗಿ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಜನರು ಬೇರೆ ಊರುಗಳಿಂದ ಆಗಮಿಸಿ ದೇವರ ದರ್ಶನಕ್ಕೆ ಮುಂದಾದರು.

108 ಕುರಿಮರಿ ವಶಕ್ಕೆ: ಜಾತ್ರೆ ರದ್ದುಗೊಂಡಿರುವ ಸಮರ್ಪಕ ಮಾಹಿತಿಯಿಲ್ಲದೇ ಇತರೆ ಭಾಗಗಳಿಂದ ಜನರು ಪಲ್ಲಕ್ಕಿ ಮೇಲೆ ಎಸೆಯಲು ತಂದಿದ್ದ 108 ಕುರಿ-ಆಡು ಮರಿಗಳನ್ನು ಜಿಲ್ಲಾಡಳಿತ ವಶ ಪಡಿಸಿಕೊಂಡಿದೆ. ಜಿಲ್ಲಾಡಳಿತ ಮೈಲಾಪುರದಲ್ಲಿ ಬುಧವಾರದಿಂದಲೇ 5 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಮುನ್ನೆಚ್ಚರಿಕೆಯಾಗಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿತ್ತು. ನಿರೀಕ್ಷೆಯಂತೆ ಭಕ್ತರು ತಂದ ಕುರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಶಕ್ಕೆ ಪಡೆದ ಕುರಿಗಳನ್ನು ಜ.15ರಂದು ಬೆಳಿಗ್ಗೆ 9 ಗಂಟೆಗೆ ನಗರದ ಪಶುಪಾಲನೆ ಮತ್ತು ಪಶು ವೈದ್ಯ ಇಲಾಖೆ ಆಸ್ಪತ್ರೆ ಆವರಣದಲ್ಲಿ ಹರಾಜು ಮೂಲಕ ಮಾರಾಟ ಮಾಡಲಾಗುವುದು ಎಂದು ಇಲಾಖೆ ಸಹಾಯಕ ನಿರ್ದೇಶಕ ಡಾ| ಶರಣಭೂಪಾಲರೆಡ್ಡಿ ನಾಯ್ಕಲ್‌ ಮಾಹಿತಿ ನೀಡಿದ್ದಾರೆ.

ಸಿದ್ದಲಿಂಗೇಶ್ವರ ನತ್ತ ನಡೆದ ಭಕ್ತರು
ಮಕರ ಸಂಕ್ರಾಂತಿ ನಿಮಿತ್ತ ಗುರುಮಠಕಲ್‌ ತಾಲೂಕಿನ ಚಿಂತನಹಳ್ಳಿಯ ಮಹಾತ್ಮ ಗವಿಸಿದ್ದಲಿಂಗೇಶ್ವರ ದೇವಸ್ಥಾನದ ಜಲಪಾತಕ್ಕೆ ವಿವಿಧ ಭಾಗಗಳಿಂದ ಭಕ್ತ ಸಮೂಹ ಆಗಮಿಸಿ ಪುಣ್ಯ ಸ್ನಾನ ಮಾಡಿ, ದೇವರ ದರ್ಶನ ಪಡೆದರು. ಕೊರೊನಾ ಭಯದಿಂದ ಮೈಲಾಪುರದ ಮಲ್ಲಯ್ಯನ ಜಾತ್ರೆ ರದ್ದಾಗಿರುವುದರಿಂದ ಮಲ್ಲಯ್ಯನನ್ನು ಬಿಟ್ಟು ಸಿದ್ಧಲಿಂಗೇಶ್ವರನತ್ತ ಭಕ್ತರು ಆಕರ್ಷಿತರಾಗಿದ್ದು ಕಂಡು ಬಂತು. ಭಕ್ತರು ತಮ್ಮ ಕುಟುಂಬದೊಂದಿಗೆ ಬೆಳಗ್ಗೆಯಿಂದಲೇ ಕ್ಷೇತ್ರಕ್ಕೆ ವಾಹನಗಳ ಮೂಲಕ ಆಗಮಿಸಿದ್ದರಿಂದ ಸಂಚಾರ ದಟ್ಟಣೆಯಾಗಿ ಜಲಪಾತಕ್ಕೆ ತೆರಳಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.