ನಿರ್ಲಕ್ಷ್ಯಾವಹಿಸಿದರೆ ಶಿಸ್ತು ಕ್ರಮ


Team Udayavani, Aug 14, 2018, 1:58 PM IST

yad-1.jpg

ಯಾದಗಿರಿ: ಮುಖ್ಯಮಂತ್ರಿ ಅವರ ಜನತಾ ದರ್ಶನ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ್‌ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾಲಿಕ ಬರ ಪರಿಸ್ಥಿತಿ ಹಾಗೂ ಮುಖ್ಯಮಂತ್ರಿ
ಅವರು ಕೈಗೊಳ್ಳಲಿರುವ ಸಾರ್ವಜನಿಕ ಕುಂದುಕೊರತೆ ದೂರುಗಳ ವೀಡಿಯೊ ಸಂವಾದ ಕುರಿತ ಪೂರ್ವಭಾವಿ ಚರ್ಚಾ ಸಭೆಯಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಅವರು ಆಗಸ್ಟ್‌ 17ರಂದು ಸಾರ್ವಜನಿಕ ಕುಂದುಕೊರತೆ ದೂರುಗಳ ಬಗ್ಗೆ ವೀಡಿಯೊ ಸಂವಾದ ನಡೆಸುವರು. ಅರ್ಜಿಗಳ ವಿಲೇವಾರಿಗೆ ಅನಗತ್ಯವಾಗಿ ವಿಳಂಬ ಮಾಡುವ ಅಧಿಕಾರಿಗಳು ನೇರ ಹೊಣೆಗಾರರಾಗಿ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿ, ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಏಪ್ರಿಲ್‌ 1ರಿಂದ ಇಲ್ಲಿಯವರೆಗೆ 6 ಅರ್ಜಿಗಳು ಬಂದಿದ್ದು, 2 ಪರಿಹರಿಸಲಾಗಿದೆ. 4 ತಿರಸ್ಕೃತವಾಗಿವೆ. ಹುಣಸಗಿ ಗ್ರಾಮದ ಅಮರಪ್ಪ ಅವರು ಸಲ್ಲಿಸಿದ್ದ ತಮ್ಮ 12 ಗುಂಟೆ ಜಮೀನು ಸರ್ವೇ ಮಾಡುವ ಅರ್ಜಿ ಮತ್ತು ಇದೇ ಗ್ರಾಮದ ಶಿವಕುಮಾರ ಅವರು ಸಲ್ಲಿಸಿದ್ದ 1.20 ಎಕರೆ ಹೊಲವನ್ನು ಕೆಬಿಜೆಎನ್‌ ಎಲ್‌ನಲ್ಲಿ ಉಳಿಸಿಕೊಳ್ಳುವಂತೆ ಕೋರಿದ ಅರ್ಜಿಗೆ ಸಂಬಂಧಿಸಿದಂತೆ ಮಾನ್ಯ ಸಿವಿಲ್‌ ನ್ಯಾಯಾಲಯವು ಕೋರ್ಟ್‌ ಕಮಿಷನ್‌ ನೇಮಕ ಮಾಡಿರುವುದರಿಂದ ಭೂದಾಖಲೆಗಳ ಇಲಾಖೆಯ ಉಪ ನಿರ್ದೇಶಕರು ಕೂಡಲೇ ಸರ್ವೇ ಮಾಡಿ ನ್ಯಾಯಾಲಯದ ಆದೇಶದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ವಿವರಿಸಿದರು.

ಸುರಪುರ ತಾಲೂಕಿನ ಸಿದ್ದಪ್ಪ ಎಂಬುವವರು ಟ್ರ್ಯಾಕ್ಟರ್‌ ಖರೀದಿಗಾಗಿ ತಂದೆ ಮಾಡಿದ ಸಾಲವನ್ನು ಮನ್ನಾ ಮಾಡಬೇಕೆಂದು 2 ಅರ್ಜಿಗಳನ್ನು ಸಲ್ಲಿಸಿದ್ದರು. ಇದಕ್ಕೆ ಲೀಡ್‌ ಬ್ಯಾಂಕ್‌ ಮತ್ತು ಸುರಪುರ ಕೆನರಾ ಬ್ಯಾಂಕ್‌ ವ್ಯವಸ್ಥಾಪಕರು ಬ್ಯಾಂಕಿನ ನಿಯಮಾವಳಿಗಳಡಿ ಇಂತಹ ಸಾಲ ಮನ್ನಾ ಮಾಡಲು ಅವಕಾಶ ಇಲ್ಲ ಎಂದು ವರದಿ ನೀಡಿರುವ ಪ್ರಯುಕ್ತ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದರು.

ಕೋಟಗೇರಾ ಗ್ರಾಮದ ಮೀನಾಕ್ಷಿ ಗಂಡ ಯೇಸುರಾಜ ಎಂಬುವವರು ಅಂಗನವಾಡಿ ಕಾರ್ಯಕರ್ತೆ ಹುದ್ದೆ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದರು. ಮೆರಿಟ್‌ ಇಲ್ಲದ ಕಾರಣ ಅರ್ಜಿ ತಿರಸ್ಕರಿಸಲಾಗಿದೆ. ಇನ್ನೊಂದು ನಾರಾಯಣಪುರ
ಗ್ರಾಪಂನಲ್ಲಿ ಒಂದನ್ನು ಬ್ಯಾಕ್‌ಲಾಗ್‌ ಅಂಗವಿಕಲ ಹುದ್ದೆ ಎಂದು ಪರಿಗಣಿಸಿ ಹುದ್ದೆ ನೀಡಲು ಅರ್ಜಿ ಬಂದಿತ್ತು. ಆದರೆ,
ಸರಕಾರದ ಮಟ್ಟದಲ್ಲಿ ಈ ಹುದ್ದೆಗಳನ್ನು ತಡೆ ಹಿಡಿದಿರುವ ಪ್ರಯುಕ್ತ ಅರ್ಜಿ ತಿರಸ್ಕೃತವಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಸಂತರಾವ್‌ ವಿ. ಕುಲಕರ್ಣಿ ಮಾತನಾಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕಾರ್ಯಾಲಯಕ್ಕೆ 3 ಅರ್ಜಿಗಳು ಬಂದಿವೆ. ಇವುಗಳಲ್ಲಿ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದಿಂದ ಆಶ್ರಯ ಮನೆಗಾಗಿ 2 ಅರ್ಜಿ, ಅರಕೇರಾ (ಕೆ) ಗ್ರಾಮದ ಅಂಗನವಾಡಿ ಕಟ್ಟಡದ ಪಕ್ಕದಲ್ಲಿ ಗುಂಡಿ ಇದ್ದು, ಅದನ್ನು ಮುಚ್ಚಿ ಆವರಣ ಗೋಡೆ ನಿರ್ಮಿಸುವಂತೆ ಕೋರಿ 1 ಅರ್ಜಿ ಬಂದಿದೆ ಎಂದು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು
ಹಾಜರಿದ್ದರು.  

ಟಾಪ್ ನ್ಯೂಸ್

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.