ಉದಯವಾಣಿ ಶಿಕ್ಷಣ ಮಾರ್ಗದರ್ಶಿ ವಿತರಣೆ
Team Udayavani, Jun 21, 2022, 1:10 PM IST
ನಾರಾಯಣಪುರ: ಶಾಸಕ ರಾಜುಗೌಡ ಅಭಿಮಾನಿ ಬಳಗದ ಪ್ರಮುಖರಾದ ಗ್ರಾಪಂ ಮಾಜಿ ಅಧ್ಯಕ್ಷ ಶಿವಪ್ಪ ಬಿರಾದಾರ, ಗದ್ದೆಪ್ಪ ರೋಡಲಬಂಡಾ ಅವರು ಸರ್ಕಾರಿ ಪಪೂ ಕಾಲೇಜಿನ ಪ್ರೌಢಶಾಲೆ ವಿಭಾಗದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ “ಉದಯವಾಣಿ’ ಶಿಕ್ಷಣ ಮಾರ್ಗದರ್ಶಿ ಸಂಚಿಕೆ ವಿತರಿಸಿದರು.
ಇದೇ ವೇಳೆ ಉಪಪ್ರಾಚಾರ್ಯ ಶಂಕರ ಲಮಾಣಿ ಮಾತನಾಡಿ, “ಉದಯವಾಣಿ’ ದಿನಪತ್ರಿಕೆಯಲ್ಲಿ ಶಿಕ್ಷಣ ಮಾರ್ಗದರ್ಶಿ ಪ್ರಕಟವಾಗುತ್ತಿರುವುದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ತುಂಬ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಶಾಸಕ ರಾಜುಗೌಡ ಅಭಿಮಾನಿ ಬಳಗದ ವತಿಯಿಂದ 25 ವಿದ್ಯಾರ್ಥಿಗಳಿಗೆ ನಿತ್ಯ ಉಚಿತವಾಗಿ ಉದಯವಾಣಿ ದಿನಪತ್ರಿಕೆ ವಿತರಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.
ಗ್ರಾಪಂ ಮಾಜಿ ಅಧ್ಯಕ್ಷ ಶಿವಪ್ಪ ಬಿರಾದಾರ ಮಾತನಾಡಿ, ಶಾಸಕ ರಾಜುಗೌಡ ಅಭಿಮಾನಿ ಬಳಗದ ವತಿಯಿಂದ “ಉದಯವಾಣಿ’ ಶಿಕ್ಷಣ ಮಾರ್ಗದರ್ಶಿ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಮೂಲಕ ಶೈಕ್ಷಣಿಕ ಜ್ಞಾನ ಪಡೆಯಬೇಕು ಎಂದು ಹೇಳಿದರು. ಶಿಕ್ಷಕರಾದ ಸಂಗಣ್ಣ ಹಗರಗುಂಡ, ವೆಂಕಟೇಶ ದೇಸಾಯಿ, ಶ್ರೀಶೈಲ್, ಗದ್ದೆಪ್ಪ ರೋಡಲಬಂಡಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ