ಸುಳ್ಳು ಸುದ್ದಿಗೆ ಭಯ ಪಡಬೇಡಿ: ಎಸ್ಪಿ ಮಾರ್ಟಿನ್‌


Team Udayavani, May 19, 2018, 3:23 PM IST

yad-2.jpg

ಯಾದಗಿರಿ: ಜಿಲ್ಲೆಯಾದ್ಯಂತ ಮಕ್ಕಳನ್ನು ಕಳ್ಳತನ ಮಾಡುವ ತಂಡ ಬಂದಿದೆ ಎಂಬ ಸುದ್ದಿ ಹರಡಿ ಸಾರ್ವಜನಿಕರು ಭಯ ಪಡುವುದು ಕಂಡು ಬಂದಿದ್ದು, ಜಿಲ್ಲೆಯಲ್ಲಿ ಯಾವುದೇ ಮಕ್ಕಳನ್ನು ಕಳ್ಳತನ ಮಾಡುವ ತಂಡ ಎಲ್ಲಿಯೂ ಕಂಡು
ಬಂದಿಲ್ಲ ಎಂದು ಎಸ್ಪಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ತಿಳಿಸಿದ್ದಾರೆ.

ನೆರೆಯ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು,ಅಲ್ಲಿಯೂ ಸಹ
ಇಂತಹ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದ್ದರಿಂದ ಇದು ಸುಳ್ಳು ಸುದ್ದಿ ಹರಡಿಸಲಾಗುತ್ತಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. 

ಜಿಲ್ಲೆಯಾದ್ಯಂತ ಪೊಲೀಸ್‌ ಇಲಾಖೆ ವತಿಯಿಂದ ಎಲ್ಲಾ ರೀತಿಯ ಸೂಕ್ತ ಕ್ರಮ ಹಾಗೂ ಠಾಣಾ ವ್ಯಾಪ್ತಿಯಲ್ಲಿ ಗಸ್ತನ್ನು ಹಾಗೂ ಚೆಕ್‌ ಪೋಸ್ಟ್‌ ಕರ್ತವ್ಯವನ್ನು ನಿರ್ವಹಿಸಲಾಗುತ್ತಿದೆ. ಸಾರ್ವಜನಿಕರು ಸಾಮಾಜಿಕ ಜಾಲ ತಾಣದಲ್ಲಿ ಮಕ್ಕಳ ಅಪಹರಣದ ಬಗ್ಗೆ ಬರುವ ಮಾಹಿತಿಯನ್ನು ಮತ್ತು ಇಂತಹ ಯಾವುದೇ ಗಾಳಿ ಸುದ್ದಿಗಳಿಗೆ ಆಸ್ಪದ ನೀಡಬಾರದು ಎಂದು ಮನವಿ ಮಾಡಿದ್ದಾರೆ.

ಯಾವುದೇ ವ್ಯಕ್ತಿ ಮಕ್ಕಳ ಅಪಹರಣದ ಬಗ್ಗೆ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣವಾದ ವ್ಯಾಟ್ಸ್‌ಪ್‌ ಮತ್ತು ಫೇಸ್‌ಬುಕ್‌ಗಳಲ್ಲಿ ಹಬ್ಬಿಸಿದ್ದಲ್ಲಿ ಅಂತವರ ವಿರುದ್ಧ ಹಾಗೂ ಅಪರಚಿತರ ಮೇಲೆ ಹಲ್ಲೆ ನಡೆಸಿ ಕಾನೂನು ಕೈಗೆ ತೆಗೆದುಕೊಳ್ಳುವ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ. 

ಸಾರ್ವಜನಿಕರಲ್ಲಿ ಒಂದು ವೇಳೆ ಇಂತಹ ಘಟನೆ ಅಥವಾ ಯಾವುದೇ ಮಾಹಿತಿ ನಿಮ್ಮ ಗಮನಕ್ಕೆ ಬಂದಲ್ಲಿ ತಕ್ಷಣ ಸಂಬಂಧಪಟ್ಟ ಪೊಲೀಸ್‌ ಠಾಣೆಗಳಿಗೆ ಅಥವಾ ಜಿಲ್ಲಾ ಪೊಲೀಸ್‌ ನಿಯಂತ್ರಣ ಕೋಣೆ ದೂರವಾಣಿ ಸಂಖ್ಯೆ 08472-253736, ಮೊ.ನಂ. 9480803600ಗೆ ಸಂಪರ್ಕಿಸಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಗೃತಿ: ಜಿಲ್ಲೆಯಲ್ಲಿ ಮಕ್ಕಳ ಕಳ್ಳತನ ಮಾಡುವ ತಂಡ ಬಂದಿದೆ ಎಂಬ ಸುದ್ದಿ ಹರಡಿ ಸಾರ್ವಜನಿಕರು ಭಯಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಆಟೋ ಮೂಲಕ ಜಾಗೃತಿ ಮೂಡಿಸಲಾಯಿತು. ಜಿಲ್ಲೆಯಲ್ಲಿ ಯಾವುದೇ ಮಕ್ಕಳ ಕಳ್ಳತನ ಮಾಡುವ ತಂಡ ಬಂದಿಲ್ಲ. ಗಾಳಿ ಸುದ್ದಿಗೆ ಜನರು ಕಿವಿಗೂಡಬಾರದು. ಇನ್ನೂ ಕೂಲಿ ಕೆಲಸಕ್ಕಾಗಿ ಬಂದ ಅಪರಿಚಿತ ವ್ಯಕ್ತಿಗಳನ್ನು ಹಿಡಿದು ಅವರ ಮೇಲೆ ಹಲ್ಲೆ ನಡೆಸುವ ಮೂಲಕ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಇಂತಹ ಘಟನೆ ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪೊಲೀಸ್‌ ಇಲಾಖೆ ಎಚ್ಚರಿಸಿದೆ.

ನಗರದ ಹಳೆ ಬಸ್‌ ನಿಲ್ದಾಣ, ಸುಭಾಷ ವೃತ್ತ, ಶಾಸ್ತ್ರಿ ವೃತ್ತ, ಹೊಸ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ಗಾಂಧಿ ವೃತ್ತ ಸೇರಿದಂತೆ ಯರಗೋಳ, ರಾಮಸಮುದ್ರ, ವಡಗೇರಾ ಇನ್ನಿತರ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಸಿಪಿಐ ಮೌನೇಶ ಪಾಟೀಲ, ಪಿಐ ಜಯಶ್ರೀ, ಗ್ರಾಮೀಣ ಠಾಣೆ ಪಿಐ ಅಲೀಂ, ವಡಗೇರಾ ಪಿಎಸ್‌ಐ ಮಹಾದೇವ, ರವಿ ರಾಠೊಡ ಸೇರಿದಂತೆ ಇತರರು ಇದ್ದರು. 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.