ಡಾ| ನರಸಣಗಿ ಜೀವನ ಚರಿತ್ರೆ ಗ್ರಂಥ ಬಿಡುಗಡೆ
ಪ್ರಸಿದ್ಧ ಶಸ್ತ್ರಚಿಕಿತ್ಸಕ ವೈದ್ಯರಾಗಿ ಸಹಸ್ರಾರು ರೋಗಿಗಳನ್ನು ಗುಣಪಡಿಸಿದ ಪುಣ್ಯಾತ್ಮ ಎಂದು ಸ್ಮರಿಸಿದರು.
Team Udayavani, Jul 19, 2021, 7:45 PM IST
ಯಾದಗಿರಿ: ವೈದ್ಯಕೀಯ ರಂಗದಲ್ಲಿ ಗಣನೀಯ ಸಾಧನೆ ಮಾಡಿದ ಡಾ| ಎಸ್.ಎಸ್. ನರಸಣಗಿಯವರು ಅಪರೂಪದ ವ್ಯಕ್ತಿತ್ವವುಳ್ಳವರಾಗಿದ್ದು, ಅವರ ಜೀವನ ಚರಿತ್ರೆ ಪುಸ್ತಕ ರೂಪದಲ್ಲಿ ಹೊರತಂದಿರುವುದು ಶ್ಲಾಘನೀಯ ಎಂದು ಅಬ್ಬೆತುಮಕೂರಿನ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಡಾ| ಗಂಗಾಧರ ಸ್ವಾಮಿಗಳು ಹೇಳಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ರವಿವಾರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಡಾ| ಎಸ್.ಎಸ್. ನರಸಣಗಿಯವರ ಜೀವನ ಚರಿತ್ರೆಯ ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಬಡವರ ಬಗ್ಗೆ ಅಪಾರ ಕಾಳಜಿಯುಳ್ಳವರಾಗಿದ್ದ ನರಸಣಗಿ, ಈ ಭಾಗದಲ್ಲಿ ಪ್ರಸಿದ್ಧ ಶಸ್ತ್ರಚಿಕಿತ್ಸಕ ವೈದ್ಯರಾಗಿ ಸಹಸ್ರಾರು ರೋಗಿಗಳನ್ನು ಗುಣಪಡಿಸಿದ ಪುಣ್ಯಾತ್ಮ ಎಂದು ಸ್ಮರಿಸಿದರು. ದಾಸಬಾಳ ಮಠದ ವೀರೇಶ್ವರ ಸ್ವಾಮಿಗಳು ಮಾತನಾಡಿದರು. ಗುರುಮಠಕಲ್ ಖಾಸಾಮಠದ ಪೀಠಾಧಿಪತಿ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿದರು.
ಹೆಡಗಿಮದ್ರಾ ಮಠದ ಪೀಠಾಧಿಪತಿ ಶಾಂತಚನ್ನಮಲ್ಲಿಕಾರ್ಜುನ ಪಂಡಿತಾರಾದ್ಯ ಶಿವಾಚಾರ್ಯರು ಮಾತನಾಡಿ, ಮೇಲಿನಿಂದ ಧುಮ್ಮಿಕ್ಕುವ ಜಲಧಾರೆಯನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಹಾಗೆಯೇ ಸಾಧನೆಯ ಪಥದಲ್ಲಿ ಸಾಗುವ ಸಾಧಕರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎನ್ನುವುದಕ್ಕೆ ಡಾ| ನರಸಣಗಿಯವರು ಸಾಕ್ಷಿಯಾಗಿದ್ದಾರೆ ಎಂದರು.
ಶಾಸಕ ವೆಂಕಟರೆಡ್ಡಿ ಮುದ್ನಾಳ್ ಮಾತನಾಡಿದರು. ಪ್ರಾಂಶುಪಾಲ ಡಾ| ಸುಭಾಶ್ಚಂದ್ರ ಕೌಲಗಿ ಗ್ರಂಥ ಪರಿಚಯಿಸಿದರು. ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಮುದ್ನಾಳ್ ಮಾತನಾಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ, ಡಾ| ಬಸವರಾಜ ನರಸಣಗಿ, ಕೃತಿಯ ಲೇಖಕ ಸಾಹಿತಿ ಗಿರಿರಾಜ ಹೊಸಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ