ವಿವಿಧ ಬೇಡಿಕೆ ಈಡೇರಿಕೆಗೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ
Team Udayavani, May 5, 2022, 4:33 PM IST
ಲಿಂಗಸುಗೂರು: ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
60 ವರ್ಷದ ಬಿಸಿಯೂಟ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸುವಾಗ ನಿವೃತ್ತಿ ವೇತನ ಅಥವಾ ಇಡಿಗಂಟು ನೀಡಿ ಬಿಡುಗಡೆ ಮಾಡಬೇಕು. ಮಾ. 31, 2022ಕ್ಕೆ ಬಿಸಿಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರಡಿಸಿರುವ ಸುತ್ತೋಲೆಯನ್ನು ಬದಲಾಯಿಸಿ 2022 ಏ.10ಕ್ಕೆ ಮರು ಆದೇಶ ನಿಡಬೇಕು. ಬಜೆಟ್ನಲ್ಲಿ ಬಿಸಿಯೂಟ ನೌಕರರಿಗೆ ಹೆಚ್ಚಳ ಮಾಡಿದ 1000 ರೂ. ವೇತನವನ್ನು ಜನವರಿ 2022ರಿಂದ ಅನ್ವಯಿಸಿ ಜಾರಿ ಮಾಡಬೇಕು. ಬಿಸಿಯೂಟ ಯೋಜನೆ ಕಾಯಂ ಮಾಡಬೇಕು. ಕಾಯಂ ಮಾಡುವ ತನಕ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಸಹಕಾರ್ಯದರ್ಶಿ ಮಹ್ಮದ್ ಹನೀಫ್, ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಅಕ್ಷರ ದಾಸೋಹ ನೌಕರರ ಸಂಘಟನೆಯ ನಾಗರತ್ನ ಸಂತೆಕೆಲ್ಲೂರು, ವೆಂಕಟೇಶ ಮೇದಿನಾಪೂರ, ಕಮಲಾಬಾಯಿ ಮುದಗಲ್, ರೇಣುಕಾ ಸಂತೆಕೆಲ್ಲೂರು, ಬಾಬಾ ಜಾನಿ, ಆಂಜನೇಯ ನಾಗಲಾಪೂರು, ವೆಂಕಟೇಶ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ