ಭಗವದ್ಗೀತೆ ಸರ್ವಧರ್ಮ ಸಮನ್ವಯದ ವಿಶ್ವಕೋಶ
Team Udayavani, Aug 15, 2017, 4:42 PM IST
ಶಹಾಪುರ: ಶ್ರೀಕೃಷ್ಣ ಪರಮಾತ್ಮನ ಶ್ರೀಮುಖದಿಂದ ಹೊರಟ ಪರಮ ರಹಸ್ಯಮಯ ಭಗವದ್ಗೀತೆ ಸರ್ವಧರ್ಮ ಸಮನ್ವಯದ ವಿಶ್ವಕೋಶವಾಗಿದೆ ಎಂದು ಶಿಕ್ಷಕ ಲಕ್ಷ್ಮಣ ಲಾಳಸೇರಿ ಹೇಳಿದರು. ತಾಲೂಕು ಆಡಳಿತದಿಂದ ನಗರಸಭೆ ಆವರಣದಲ್ಲಿ ಆಯೋಜಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕುರಿತು ಉಪನ್ಯಾಸ ನೀಡಿದ ಅವರು, ಸ್ವತಃ ಕೃಷ್ಣನು ಅರ್ಜುನನ್ನು ನಿಮಿತ್ತವಾಗಿಸಿ ಮನುಕುಲಕ್ಕೆ
ಉಪದೇಶ ನೀಡಿದ್ದು, ಪರಮ ಶಾಂತಿಗಾಗಿ ಗೀತೆಯ ಅಧ್ಯಯನ ಅವಶ್ಯಕವಾಗಿದೆ. ಬದುಕಿಗೆ ಶಾಶ್ವತ ಸುಖ ಸಿಗಬೇಕಾದರೆ ಪ್ರತಿಯೊಬ್ಬರು ಗೀತೆಯನ್ನು ಪಠಿಸಬೇಕು ಎಂದರು. ಸುದೀಪ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಾಯಬಣ್ಣ ಪುರೆಲ ಮಾತನಾಡಿ, ಯಾದವ ಸಮಾಜ ಪ್ರತಿಯೊಂದು ರಂಗದಲ್ಲಿ ಸಂಘಟಿತರಾಗಬೇಕು. ಶಿಕ್ಷಣ ನಮ್ಮೆಲ್ಲರ ಮೂಲ ಮಂತ್ರವಾಗಬೇಕು ಎಂದರು. ಯಾದವ ಸಮಾಜದ ತಾಲೂಕು ಅಧ್ಯಕ್ಷ ನಾರಾಯಣ ಯಾದವ, ಹಿರಿಯ ಮುಖಂಡ ಮಹಾದೇವಪ್ಪ ಸಾಲಿಮನಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ ಸೋಮಶೇಖರ ಹಾಗರಗುಂಡಿಗಿ, ಸಣ್ಣನಿಂಗಣ್ಣ ನಾಯೋಡಿ, ನಾಗಪ್ಪ ತಹಶೀಲ್ದಾರ, ನಗರ
ಯೋಜನಾ ಅಧ್ಯಕ್ಷ ಸಲೀಂ ಸಂಗ್ರಾಮ, ರಾಜುಗೌಡ ಉಕ್ಕಿನಾಳ, ಶರಣಗೌಡ ಮುದ್ನಾಳ, ವಿಠಲ್, ಮಾಳಪ್ಪ ಯಾದವ ಸೇರಿದಂತೆ
ಯಾದವ ಸಮಾಜದ ಹಲವಾರು ಮುಖಂಡರು ಭಾಗವಹಿಸಿದ್ದರು. ಸೂರ್ಯಕಾಂತ ಕಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ಯಾದವ ಸಮಾಜದ ಇಬ್ಬರು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮಕ್ಕೂ ಮುಂಚೆ ಸಿ.ಬಿ. ಕಮಾನದಿಂದ ನಗರಸಭೆ ವರೆಗೂ ಶ್ರೀಕೃಷ್ಣನ ಭಾವಚಿತ್ರದ ಭವ್ಯ ಮೆರವಣಿಗೆ ಜರುಗಿತು. ಮಕ್ಕಳು ಶ್ರೀಕೃಷ್ಣ ರಾಧೆ ವೇಷಧರಿಸಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ