ಉತ್ತಮ ಪರಿಸರ ನಿರ್ಮಾಣ ಮಾಡಿ: ನ್ಯಾ| ಭಾಮಿನಿ
Team Udayavani, Jun 6, 2020, 6:31 AM IST
ಶಹಾಪುರ: ಬರಿ ಸಸಿ ನೆಟ್ಟರೆ ಸಾಲದು. ಅದರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಪರಿಸರ ಕೃಷಿ ಕರಳುಬಳ್ಳಿ ಸಂಬಂಧ ಹೊಂದಿದೆ. ಕೃಷಿ ಕಾಯಕ ಜತೆಗೆ ಉತ್ತಮ ಪರಿಸರ ನಿರ್ಮಾಣ ಮಾಡಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶೆ ಭಾಮಿನಿ ಹೇಳಿದರು.
ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘ ಮತ್ತು ತಾಲೂಕು ಕಾನೂನು ಸೇವಾ ಸಮಿತಿ, ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶುಕ್ರವಾರ ನಡೆದ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ನ್ಯಾಯಾಲಯದ ಆವರಣದಲ್ಲಿ ವಕೀಲರು ಸುಮಾರು 120ಕ್ಕೂ ಹೆಚ್ಚು ಮರ ಬೆಳೆಸಿದ್ದಾರೆ. ಇದರಂತೆ ಇನ್ನುಳಿದ ಇಲಾಖೆಗಳ ಸಿಬ್ಬಂದಿ ಸಹ ಮರ ಬೆಳೆಸುವ ಕಾರ್ಯದಲ್ಲಿ ಮಗ್ನವಾಗಲಿ ಎಂದು ಕರೆ ನೀಡಿದರು.
ಉಪ ವಲಯ ಅರಣ್ಯ ಅಧಿಕಾರಿ ಐ.ಬಿ. ಹೂಗಾರ ಮಾತನಾಡಿ, ಪ್ರಸಕ್ತ ವರ್ಷ ನಗರ ಹಸಿರೀಕರಣ ಯೋಜನೆ ಅಡಿ ಮೂರು ಹೆಕ್ಷೇರ್ನಲ್ಲಿ 900 ಸಸಿ ನೆಡುವ ಗುರಿ ಹೊಂದಲಾಗಿದೆ. ಅಲ್ಲದೆ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ ಅಡಿ ರೈತರಿಗೆ ಶ್ರೀಗಂಧ, ಹೆಬ್ಬೇವು, ನೆರಳೆ, ಲಿಂಬು ಸಸಿ ವಿತರಿಸಲಾಗುವುದು. ರೈತರು ಹೆಸರು ನೋಂದಾಯಿಸಿಕೊಂಡು ಸಸಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಕಾಡಪ್ಪ ಹುಕ್ಕೇರಿ, ಸರ್ಕಾರಿ ಅಭಿಯೋಜಕಿ ದಿವ್ಯಾರಾಣಿ ನಾಯಕ, ವಕೀಲರ ಸಂಘದ ಅಧ್ಯಕ್ಷ ಎಂ.ಎಸ್. ರಾಂಪುರೆ, ಕಾರ್ಯದರ್ಶಿ ಸಂದೀಪ ದೇಸಾಯಿ, ಹಿರಿಯ ವಕೀಲರಾದ ಭಾಸ್ಕರರಾವ ಮುಡಬೂಳ, ಎಸ್. ಶೇಖರ, ಚಂದ್ರಶೇಖರ ದೇಸಾಯಿ, ಸಯ್ಯದ ಇಬ್ರಾಹಿಂಸಾಬ್ ಜಮಾದಾರ, ಆರ್.ಎಂ. ಹೊನ್ನಾರಡ್ಡಿ, ಸಾಲೋಮನ್ ಆಲ್ಫ್ರೇಡ್, ಯೂಸೂಫ್ ಸಿದ್ದಕಿ, ರಮೇಶ ಸೇಡಂಕರ್, ಲಕ್ಷ್ಮೀನಾರಾಯಣ ಕುಲಕರ್ಣಿ, ಗುರುರಾಜ ದೇಶಪಾಂಡೆ, ಶ್ರೀಮಂತ ಕಂಚಿ, ಹಯ್ನಾಳಪ್ಪ ಹೊಸ್ಮನಿ, ದೇವರಾಜ ಚೆಟ್ಟಿ, ದೇವಿಂದ್ರಪ್ಪ ಟಣಕೆದಾರ, ಸಿದ್ದು ಪಸ್ಪೂಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ