ಉಭಯ ಸರ್ಕಾರಗಳಿಂದ ರೈತರ ಶೋಷಣೆ
ಖಾಸಗೀಕರಣದ ನೆಪದಲ್ಲಿ ಸರ್ಕಾರಿ ಒಡೆತನದ ಇಲಾಖೆಗಳನ್ನು ಮಾರಾಟ ಮಡುತ್ತಿದೆ.
Team Udayavani, Oct 5, 2021, 6:10 PM IST
ಯಾದಗಿರಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನ್ನದಾತರಿಗೆ ನಿರಂತರವಾಗಿ ಶೋಷಣೆ ಮಾಡುತ್ತಲೇ ಬರುತ್ತಿರುವ ಕಾರಣ ಇಂದು ದೇಶದಲ್ಲಿ ಲಕ್ಷಾಂತರ ರೈತರು ಆತ್ಮಹತ್ಯೆ ಹಾದಿ ತುಳಿಯುತ್ತಿದ್ದಾರೆ. ನೀತಿ, ನಿರೂಪಣೆ ಮಾಡುವ ಜನಪ್ರತಿನಿಧಿಗಳು ಉತ್ತರದಾಯಿಗಳಾಗಿದ್ದಾರೆ. ಅನ್ನದಾತನ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೊಳಿಸಿ, ಇಲ್ಲವೆ ಖುರ್ಚಿ ಬಿಟ್ಟು ಕೆಳಗಿಳಿಯಿರಿ ಎಂದು ರೈತ ಸೇನೆ ರಾಜ್ಯ ಉಪಾಧ್ಯಕ್ಷ ಲಕ್ಷ್ಮಿಕಾಂತ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.
ರೈತರ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳ ಅಮೃತ ಮಹೋತ್ಸವ ಶುಭ ಗಳಿಗೆಯಲ್ಲಿ ನಾವಿದ್ದರೂ ಸಹ ಇಂದು ದೇಶಕ್ಕೆ ಅಲ್ಲದೆ ಇಡೀ ವಿಶ್ವಕ್ಕೆ ಅನ್ನ ಹಾಕುತ್ತಿರುವ ಭಾರತ ದೇಶದ ಅನ್ನದಾತ ಅನೇಕ ಸಂಕಷ್ಟಗಳ ಸುಳಿಯಲ್ಲಿ ಸಿಲುಕಿದ್ದಾನೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಜಾರಿಗೊಳಿಸಿದ ಮೂರು ಕೃಷಿ ಕಾಯ್ದೆಗಳು ಭವಿಷ್ಯದಲ್ಲಿ ರೈತರಿಗೆ ಮರಣ ಶಾಸನವಾಗುವುದರಲ್ಲಿ ಸಂದೇಹವಿಲ್ಲ. ಕೇಂದ್ರ ಸರ್ಕಾರ ಇಂದು ಖಾಸಗೀಕರಣದ ನೆಪದಲ್ಲಿ ಸರ್ಕಾರಿ ಒಡೆತನದ ಇಲಾಖೆಗಳನ್ನು ಮಾರಾಟ ಮಡುತ್ತಿದೆ. ಇದೇನಾ ಅಚ್ಚೆದಿನ್?. ವಿದ್ಯುತ್ ಮಸೂದೆ, ಎಪಿಎಂಸಿ ಮಸೂದೆಗಳನ್ನು ಜಾರಿಗೆ ತಂದು ಎಪಿಎಂಸಿಗಳಲ್ಲಿ ಶ್ರೀಮಂತ ದಲ್ಲಾಳಿಗಳ ಮುಂದೆ ರೈತರು ಮಂಡೆಯೂರಿ ಕುಳಿತುಕೊಳ್ಳುವ ಸಂದರ್ಭ ಸೃಷ್ಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಕಡೆಚೂರು- ಬಾಡಿಯಾಳ ಸಮೀಪ ಅಂತಾರಾಷ್ಟಿಯ ಡ್ರಗ್ ಪಾರ್ಕ್ ನಿರ್ಮಾಣದ ನೆಪದಲ್ಲಿ 1500 ಎಕರೆ ರೈತರ ಭೂಸ್ವಾ ಧೀನಕ್ಕೆ ಸರ್ಕಾರ ಮುಂದಾಗಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ದೂರಿದರು. ತುಮಕೂರು ಕೋರ್ ಗ್ರೀನ್ ಶುಗರ್ ಕಾರ್ಖಾನೆ ಬಾಕಿ ಉಳಿಸಿಕೊಂಡ ಕಬ್ಬಿನ ಪಾವತಿ ರೈತರಿಗೆ ಕೂಡಲೇ ನೀಡಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರದ ಜತೆಯಲ್ಲಿ ಆತನ ಸುಸ್ತಿ ಸಾಲವನ್ನು ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಕೋಟೆಕಾನಿ, ಜಿಲ್ಲಾಧ್ಯಕ್ಷ ಮಹಾವೀರ ಲಿಂಗೇರಿ, ಕಲ್ಯಾಣ ಕರ್ನಾಟಕ ಅಧ್ಯಕ್ಷ ಭೀಮರೆಡ್ಡಿ ಯರಗೋಳ, ವೆಂಕಟೇಶ ಮಿಲಿó, ಅನಿಲ, ಯಲ್ಲಪ್ಪ, ಕಾಶಿರಾಜ, ಅಮೃತರಾವ ಕೊಟಿಕಾನಿ, ಶ್ರೀನಿವಾಸ ಚಾಮನಳ್ಳಿ, ಸುಭಾಷ ನಡುವಿನಕೇರಿ, ಅಶೋಕ ಯಕ್ಷಿಂತಿ, ನಾಗರಾಜ ಗುಂಡಕನಾಳ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್