ಶಹಾಪುರ: ನಕಲಿ ಮದ್ಯ ಮಾರಾಟ, ಇಬ್ಬರ ಬಂಧನ; ಐವರು ಪರಾರಿ


Team Udayavani, May 15, 2022, 6:50 PM IST

ಶಹಾಪುರ: ನಕಲಿ ಮದ್ಯ ಮಾರಾಟ, ಇಬ್ಬರ ಬಂಧನ; ಐವರು ಪರಾರಿ

ಶಹಾಪುರ (ಯಾದಗಿರಿ): ನಗರದ ಲಕ್ಷ್ಮೀ ವೈನ್ಸ್ ಶಾಪ್ ನಲ್ಲಿ ನಕಲಿ ಮದ್ಯ ಮಾರಾಟ ಹಿನ್ನೆಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಒಟ್ಟು ಅಂದಾಜು 20 ಲಕ್ಷ ರೂ. ಮೌಲ್ಯದ ಮದ್ಯ ಸ್ಟಾಕ್ ಇದ್ದು, ಅದರಲ್ಲಿ 8.280 ಲೀಟರ್ ನಕಲಿ ಮಧ್ಯ ದೊರೆತಿದ್ದು, ಮದ್ಯ ಮಾರಾಟ ಅಂಗಡಿಗೆ ಬೀಗ ಜಡಿಯಲಾಗಿದೆ. ಅಲ್ಲದೆ ಲಕ್ಷ್ಮೀ ವೈನ್ಸ್ ಮಾಲೀಕ ಮುರುಳಿ ದಂಡು ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಅಬಕಾರಿ ಉಪ ನಿರೀಕ್ಷಕ ಸುರೇಶಕುಮಾರ ಮಳೇಕರ್ ತಿಳಿಸಿದ್ದಾರೆ.

ದೇವಿಂದ್ರಪ್ಪ ಮತ್ತು ಭೀಮಾಶಂಕರ ಇಬ್ಬರು ಬಂಧಿತ ಆರೋಪಿಗಳಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ ಅಬಕಾರಿ ಅಧಿಕಾರಿಗಳು, ಇನ್ನುಳಿದ ಐವರು ಆರೋಪಿಗಳು ಪರಾರಿಯಾಗಿದ್ದು ಅವರ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನುಳಿದ ಐವರು ಆರೋಪಿಗಳಾದ ಗೋಪಾಲ, ಬನಶಂಕರ, ಮೊಗಲಯ್ಯ, ಶರಣಪ್ಪ, ಮುರುಳಿ ದಂಡು ಇವರ ಪತ್ತೆಗಾಗಿ ತೀವ್ರ ಶೋಧ ನಡೆದಿದೆ ಎನ್ನಲಾಗಿದೆ.

ಟಂಟಂ ಆಟೋವೊಂದರಲ್ಲಿ ನಕಲಿ ಮದ್ಯ ಸಾಗಿಸುತ್ತಿರುವುದನ್ನು ಹಿಡಿದ ಅಧಿಕಾರಿಗಳು ಯಾವ ಬಾರ್ ನಿಂದ ಮದ್ಯ ಒಯ್ಯಲಾಗುತ್ತಿದೆ ಎಂಬುದನ್ನು ಆಟೋ ಚಾಲಕ ನನ್ನು ವಶಕ್ಕೆ ಪಡೆದು ಕೇಳಿದ್ದು, ಬಳಿಕ ನೇರವಾಗಿ ಲಕ್ಷ್ಮೀ ವೈನ್ಸ್ ಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳಿಗೆ ನಕಲಿ ಮದ್ಯ ದೊರೆತಿದೆ. ಕೂಡಲೇ ಅಧಿಕಾರಿಗಳು ಅಂಗಡಿಗೆ ಬೀಗ ಜಡೆದಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿ ಸಮರ್ಪಕ ತನಿಖೆ ಕೈಗೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಕಲಿ ಮದ್ಯ ಮಾರಾಟದ ದೂರು ಬಂದ ಹಿನ್ನೆಲೆ ಮೇ 12 ರಂದು ಸಂಜೆ ಅಬಕಾರಿ ಜಂಟಿ ಆಯುಕ್ತರು ಕಲ್ಬುರ್ಗಿ ಇವರ ನಿರ್ದೇಶನದ ಮೇರೆಗೆ ಅಬಕಾರಿ ಆಯುಕ್ತರಾದ ಮೋತಿಲಾಲ್ ಹಾಗೂ ಶಹಾಪುರ ಉಪ ವಿಭಾಗ ಅಬಕಾರಿ ಉಪ ಅಧೀಕ್ಷಕರಾದ ಶ್ರೀರಾಮ ರಾಠೋಡ ಮತ್ತು ಕಲ್ಬುರ್ಗಿ ಜಂಟಿ ಆಯುಕ್ತರ ಕಚೇರಿ (ಜಾರಿ ಮತ್ತು ತನಿಖೆ) ನಿರೀಕ್ಷಕರಾದ ಭಾರತಿ, ಅವರ ಮಾರ್ಗದರ್ಶನದಲ್ಲಿ ಯಾದಗಿರಿ ಅಬಕಾರಿ ಆಯುಕ್ತರ ಕಚೇರಿ ನಿರೀಕ್ಷಕ ಕೇದಾರನಾಥ ಪಾಟೀಲ್, ಶಹಾಪುರ ಅಬಕಾರಿ ನಿರೀಕ್ಷಕ ಧನರಾಜ, ಉಪ ನಿರೀಕ್ಷ ಸುರೇಶಕುಮಾರ ಮಳೆಕರ್ ಹಾಗೂ ಸಿಬ್ಬಂದಿ ದಾಳಿ ನಡೆಸುವ ಮೂಲಕ ಅಕ್ರಮವಾಗಿ ನಕಲಿ ಮದ್ಯ ಮಾರಾಟ ಮಾಡುತ್ತಿರುವದನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.