ಕೆರೆ ಹೂಳು ಒಯ್ಯಲು ರೈತರ ನಿರಾಸಕ್ತಿ


Team Udayavani, Mar 15, 2019, 10:35 AM IST

yad-1.jpg

ಶಹಾಪುರ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಕೆರೆ ಹೂಳೆತ್ತುವ ಕಾರ್ಯಕ್ಕೆ ಆರಂಭದಲ್ಲಿಯೇ ವಿಘ್ನ ಎದುರಾಗಿವೆ. ಕೆರೆ ಒತ್ತುವರಿ ಮತ್ತು ರೈತರು ಮಣ್ಣು ತೆಗೆದುಕೊಂಡು ಹೋಗದಿರುವುದು ಸೇರಿದಂತೆ ಕೆಲವು ಕೆರೆ ಮಣ್ಣು ಸವಳು ಇದೆ ಎಂಬ ಕಾರಣ ಸೇರಿದಂತೆ ಹಲವು ವಿಘ್ನ ನಿವಾರಿಸುವಲ್ಲಿ ಶಹಾಪುರ ತಾಲೂಕು ಆಡಳಿತ ವಿಫಲವಾಗಿದೆ.

ತಾಲೂಕಿನ 51 ಕೆರೆ ಹೂಳೆತ್ತುವ ಕಾರ್ಯಕ್ಕೆ ಕಳೆದ ವಾರ ಅಷ್ಟೇ ಸ್ಥಳೀಯ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಾಲೂಕಿನ ಉಕ್ಕಿನಾಳ ಗ್ರಾಮದ ಕೆರೆಯಲ್ಲಿ ಚಾಲನೆ ನೀಡಿದ್ದರು. 

ಹೂಳೆತ್ತಲು ಜೆಸಿಬಿ ಯಂತ್ರಗಳನ್ನು ಯಾದಗಿರಿ ಜಿಲ್ಲೆಯ ಜೈನ್‌ ಸಂಘಟನೆ ಉಚಿತವಾಗಿ ನೀಡುತ್ತಿದೆ. ಜಿಲ್ಲಾಡಳಿತ ಯಂತ್ರಗಳಿಗೆ ಡೀಸೆಲ್‌ ಒದಗಿಸುವ ಕಾರ್ಯ ಮಾಡುತ್ತಿದೆ. ಅಲ್ಲದೆ ಕೆರೆ ಫಲವತ್ತಾದ ಹೂಳನ್ನು ರೈತರು ತಮ್ಮ ಜಮೀನಿಗೆ ಟ್ರ್ಯಾಕ್ಟರ್‌ ಮೂಲಕ ಹೊತ್ತೂಯ್ಯಲು ಗ್ರಾಮೀಣ ಭಾಗದಲ್ಲಿ ಡಂಗೂರ ಸಾರಿದೆ.

ಆದಾಗ್ಯು ಕೆರೆ ಹೂಳನ್ನು ಒಯ್ಯಲು ಇಲ್ಲಿನ ರೈತರು ನಿರಾಸಕ್ತಿ ತೋರುತ್ತಿದ್ದಾರೆ. ಅಲ್ಲದೆ ನಗರದ ಮಾವಿನ ಕೆರೆಯಲ್ಲೂ ಹೂಳೆತ್ತುವ ಕಾರ್ಯ ನಡೆದಿದೆ. ಹೂಳನ್ನು ತುಂಬಲು ಇಲ್ಲಿನ ಜೆಸಿಬಿ ಯಂತ್ರದ ಚಾಲಕ ಪ್ರತಿ ಟ್ರ್ಯಾಕ್ಟರ್‌ಗೆ 80 ರೂ. ಕೇಳುತ್ತಿದ್ದಾರೆ. ಮತ್ತು ಟ್ರ್ಯಾಕ್ಟರ್‌ ಬಾಡಿಗೆ ಹಣ ಬೇರೆ ನೀಡಬೇಕು. ಮೊದಲೇ ಬರದಿಂದ ತತ್ತರಿಸಿ ಹೋದ ನಾವುಗಳು ಎಲ್ಲಿಂದ ಇಷ್ಟೊಂದು ಹಣ ಭರಿಸಿ ಮಣ್ಣು ತೆಗೆದುಕೊಂಡು ಏನು ಮಾಡುವದಿದೆ ಎಂದು ರೈತ ಶರಣಪ್ಪ ಬೇಸರ ವ್ಯಕ್ತಪಡಿಸಿದ್ದಾನೆ.

ಅಲ್ಲದೆ ತಾಲೂಕಿನ ಉಕ್ಕಿನಾಳ, ಚಾಮನಾಳ ಮತ್ತು ನಡಿಹಾಳ ಗ್ರಾಮದ ಕೆರೆ ಹೂಳು ಚೆನ್ನಾಗಿ ಇರುವುದಿಲ್ಲ. ಸವಳು ಮಿಶ್ರಿತ ಮಣ್ಣಾಗಿರುವುದರಿಂದ ಇದನ್ನು ಯಾರೊಬ್ಬ ರೈತರು ಒಯ್ಯುತ್ತಿಲ್ಲ. ಕಾರಣ ಸವಳು ಮಣ್ಣು ಹೊಂದಿದ ಕೆರೆಗಳ ಹೂಳೆತ್ತುವ ಕಾರ್ಯ ಸ್ಥಗಿತಗೊಳಿಸಲಾಗುವುದು ಎಂದು ಸಂಬಂಧಿಸಿದ ಅಧಿಕಾರಿಗಳೊಬ್ಬರು ತಿಳಿಸಿದ್ದಾರೆ. ಅಲ್ಲದೆ ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಉಕ್ಕಿನಾಳ ಕೆರೆಯ ಹೂಳು ತೆಗೆದು ಕಾಲುವೆ ಮೂಲಕ ನೀರು ತುಂಬಿಸಲು 3 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಹೂಳನ್ನು ತೆಗೆದುಕೊಂಡು ಹೋಗದ ಕಾರಣ ಕಾಮಗಾರಿ ಸ್ಥಗಿತಗೊಳಿಸಲಾಗಿದೆ ಎಂದು ಹೆಸರು ಹೇಳಲಿಚ್ಚಿಸದ ನಿಗಮದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆರೆ ಒತ್ತುವರಿ ತೆರವುಗೊಳಿಸಲು ಮನವಿ ತಾಲೂಕಿನ 51 ಕೆರೆ ಹೂಳೆತ್ತುವ ಕಾರ್ಯ ಪ್ರಧಾನಿ ಮೋದಿ ಅವರ ಮಹತ್ವಕಾಂಕ್ಷೆ
ಯೋಜನೆಯಾಗಿದ್ದು, ಬಹುತೇಕ ಕೆರೆಗಳು ಒತ್ತುವರಿಯಾಗಿವೆ. ಆಯಾ ತಾಲೂಕು ಆಡಳಿತ ಕೆರೆಗಳ ಸರ್ವೇ ಮಾಡಿಸಿ ಒತ್ತುವರಿ ತೆರವುಗೊಳಿಸುವ ಮೂಲಕ ಕೆರೆ ಹೂಳೆತ್ತಲು ಅನುಕೂಲ ಕಲ್ಪಿಸಬೇಕೆಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಲ್ಲಯ್ಯ ನಾಯಕ ವನದುರ್ಗ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಭಾವಿ ವ್ಯಕ್ತಿಗಳಿಂದ ಕೆರೆಗಳ ಒತ್ತುವರಿಯಾಗಿದ್ದು, ಇಲ್ಲಿನ ಸಣ್ಣ ನೀರಾವರಿ ಹಾಗೂ ಜಿಲ್ಲಾ ಪಂಚಾಯಿತಿ ಇಲಾಖೆ ಅಧಿ ಕಾರಿಗಳು ಕೆರೆಯ ಸಮರ್ಪಕ ವಿಸ್ತೀರ್ಣ ಹಾಗೂ ಗಡಿ ಭಾಗ ಗುರುತಿಸಿಕೊಡಲು ಹಿಂದೇಟು ಹಾಕುತ್ತಿದ್ದಾರೆ. ಒತ್ತುವರಿ ಮಾಡಿ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಕೂಡಲೇ ಕೆರೆ ಸರ್ವೇ ಕಾರ್ಯ ನಡೆಸಬೇಕು.
 ಯಲ್ಲಯ್ಯ ನಾಯಕ, ರೈತ ಮುಖಂಡ

„ ಮಲ್ಲಿಕಾರ್ಜುನ ಮುದ್ನೂರ

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.