ನೀರು ನಿರ್ವಹಣೆಯಲ್ಲಿ ರೈತರ ಸಹಭಾಗಿತ್ವ ಅಗತ್ಯ; ಶರಣಪ್ಪ
ನೀರಿನ ಬಳಕೆಯ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯವಾಗಬೇಕಿದೆ
Team Udayavani, Jan 21, 2021, 6:21 PM IST
ಶಹಾಪುರ: ನೀರು ಬಳಕೆದಾರ ಸಂಘಗಳ ಪದಾಧಿಕಾರಿಗಳು, ಸದಸ್ಯರು ನೀರು ಬಳಕೆ ಕುರಿತು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಇದರಲ್ಲಿ ರೈತರ ಸಹಭಾಗಿತ್ವ ಅಗತ್ಯವಿದ್ದು, ರೈತರು ನೀರು ನಿರ್ವಹಣೆ ಕುರಿತು ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಚರ್ಚಿಸಿ ಸೂಕ್ತ ಮಾಹಿತಿ ಪಡೆದುಕೊಳ್ಳಬೇಕು ಎಂದು ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ ತಿಳಿಸಿದರು.
ಭೀಮರಾಯನ ಗುಡಿಯ ಕೃಷಿ ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆದ ಕೃಷ್ಣಾ ಕಾಡಾ (ಸಹಕಾರ ವಿಭಾಗ) ಭೀಮರಾಯನ ಗುಡಿವತಿಯಿಂದ ನಡೆದ ನೀರು ಬಳಕೆದಾರರ ಸಹಕಾರ ಸಂಘಗಳ ಪದಾಧಿಕಾರಿ ಹಾಗೂ ಸದಸ್ಯರಿಗೆ ನೀರು ನಿರ್ವಹಣೆ ಹಾಗೂ ಪುನಶ್ಚೇತನ ಕುರಿತ ಕಾರ್ಯಾಗಾರ ಉದ್ಘಾಟನೆ ಮತ್ತು ಬಳಕೆದಾರರ ಸಂಘಗಳಿಗೆ ತಲಾ ಒಂದು ಲಕ್ಷ ರೂ.ಚಕ್ ವಿತರಿಸಿ ಅವರು ಮಾತನಾಡಿದರು.
ನೀರಿನ ಬಳಕೆಯ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯವಾಗಬೇಕಿದೆ. ನೀರು ಬಳಕೆ ಕುರಿತು ಸಂಬಂಧಿಸಿದ ಅಧಿಕಾರಿ ಇಲಾಖೆಯೊಂದಿಗೆ ಒಡಂಬಡಿಕೆ ಮತ್ತು ನೀರಿನ ಹಂಚಿಕೆಯಲ್ಲಿ ಸಮಾನತೆ ತರುವ ಕಾರ್ಯ ಸೇರಿದಂತೆ ಭೂಮಿ ಮತ್ತು ನೀರಿನ ಉತ್ಪಾದಕತೆ ಹೆಚ್ಚಿಸಬೇಕಿದೆ. ಆ ನಿಟ್ಟಿನಲ್ಲಿ ಬಳಕೆದಾರರ ಸಂಘ ಮತ್ತು ರೈತರಿಗೆ ಬೇಕಾದ ಸವಲತ್ತುಗಳನ್ನು ಕಲ್ಪಿಸುವ ಯೋಜನೆಗಳನ್ನು ರೂಪಿಸಲಾಗುವುದು. ಅದಕ್ಕೆ ಬೇಕಾದ ಸಮರ್ಪಕ ಕೆಲಸವನ್ನು ನಾನು ಸರ್ಕಾರದ ಜೊತೆ ಸಂಬಂಧಿಸಿದ ಇಲಾಖೆಯ ಮುಖ್ಯಕಾರ್ಯದರ್ಶಿಗಳ ಜತೆ ಮಾತುಕತೆ ನಡೆಸಿ ರೈತರಿಗೆ ಅನುಕೂಲ ಕಲ್ಪಿಸುವ ಕಾರ್ಯ ಯೋಜನೆ ರೂಪಿಸಲಾಗುವುದು ಎಂದರು.
ಬಳಕೆದಾರರ ಸಂಘದ ಕಚೇರಿ ಹಾಗೂ ಗೋದಾಮು ನಿರ್ಮಾಣಕ್ಕೆ ಇಲಾಖೆಯಿಂದ 7.30 ಲಕ್ಷ ರೂ. ನಿಗದಿಪಡಿಸಲಾಗಿದ್ದು, ಅದರಲ್ಲಿ ಸಂಘವು ಪ್ರತಿಶತ 20ರಂತೆ 1.46 ಲಕ್ಷ ರೂ. ಸಾಲ ಕೊಡಬೇಕಾಗುವುದು. ಅಲ್ಲದೆ ಮೂಲ ಸೌಕರ್ಯ ಒದಗಿಸಲು 3 ಲಕ್ಷ ರೂ.ವರೆಗೆ ಅನುದಾನ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು. ಸದ್ಯ ಶಹಾಪುರ, ಸುರಪುರ, ಜೇವರ್ಗಿ, ಸಿಂದಗಿ, ಇಂಡಿ ವ್ಯಾಪ್ತಿಯ 83 ನೀರು ಬಳಕೆದಾರರ ಸಂಘಗಳಿಗೆ ತಲಾ ಒಂದು ಲಕ್ಷ ರೂ. ಚೆಕ್ ವಿತರಿಸಲಾಗಿದೆ.
ಬಳಕೆದಾರರ ಸಂಘಗಳ ಪದಾಧಿ ಕಾರಿಗಳು ಸದಸ್ಯರು ಜಾಗೃತರಾಗಿ ಕಾರ್ಯ ನಿರ್ವಹಿಸುವ ಮೂಲಕ ಪ್ರಗತಿಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೃಷ್ಣಾ ಕಾಡಾ ಆಡಳಿತಾಧಿಕಾರಿ ಶರಣಪ್ಪ ಬೆಣೂರ, ಕಾಡಾ ಮುಖ್ಯ ಲೆಕ್ಕಾಧಿಕಾರಿ ರಾಜಕುಮಾರ, ಕೃಷ್ಣಾ ಕಾಡಾ ಸಹಕಾರ ಸಂಘಗಳ
ಸಹಾಯಕ ನಿಬಂಧಕ ಮಹ್ಮದ್ ತಾಹೇರ ಹುಸೇನ್, ನೀರು ಬಳಕೆದಾರರ ಮಹಾ ಮಂಡಳ ಅಧ್ಯಕ್ಷ ರಂಗಣ್ಣ ಡೆಂಗಿ, ಕಾಡಾ ನಿರ್ದೇಶಕ ಬಾಗೇಶ ಓತಿನಮಡು
ಇದ್ದರು. ಕಾರ್ಯಗಾರದಲ್ಲಿ ಬಳಕೆದಾರರ ಸಂಘದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ