ರೈತರ ಸಾಲ ಮನ್ನಾ: ಜೆಡಿಎಸ್ ಸಂಭ್ರಮ
Team Udayavani, Jul 6, 2018, 3:53 PM IST
ಸುರಪುರ: ರೈತರ ಸಾಲ ಮನ್ನಾ ಮಾಡಿರುವ ಸರಕಾರದ ಕ್ರಮ ಸ್ವಾಗತಿಸಿ ಜೆಡಿಎಸ್ ಕಾರ್ಯಕರ್ತರು ಗುರುವಾರ
ನಗರದ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಪಕ್ಷದ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ್ ಮಾತನಾಡಿ, ಚುನಾವಣಾ ಪೂರ್ವದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ 34 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿರುವುದು ಸಂತಸ ತಂದಿದೆ ಎಂದರು.
ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಮಲ್ಲಯ್ಯ ಕಮತಗಿ ಮಾತನಾಡಿ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ
ಅವರು ಸಾಲ ಮನ್ನಾದೊಂದಿಗೆ ವಯೋವೃದ್ಧರ ಪಿಂಚಣಿಯನ್ನು 6 ನೂರರಿಂದ ಸಾವಿರಕ್ಕೆ ಹೆಚ್ಚಿಸಿದ್ದಾರೆ.
ಮತ್ತು ಗರ್ಭಿಣಿಯರಿಗೆ ಪ್ರತಿ ತಿಂಗಳು ಸಾವಿರದಂತೆ 6 ತಿಂಗಳವರೆಗೆ ಆರ್ಥಿಕ ನೆರವು ನೀಡಿದ್ದಾರೆ ಎಂದು
ತಿಳಿಸಿದರು.
ಪಕ್ಷದ ತಾಲೂಕು ಘಟಕದ ಕಾರ್ಯದರ್ಶಿ ವೆಂಕಟೇಶ ಭಕ್ರಿ ಮಾತನಾಡಿ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚಿಸಿ 25
ಕೋಟಿ ರೂ. ಮತ್ತು ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ರಚಿಸಿ 10 ಕೋಟಿ ರೂ. ಅನುದಾನ ಮೀಸಲಿರಿಸಿರವುದು
ಸ್ವಾಗತರ್ಹವಾಗಿದೆ ಎಂದರು. ಈ ಸಂದರ್ಭದಲ್ಲಿ ತಿಪ್ಪಣ್ಣ ಪಾಟೀಲ, ಸಂಗಣ್ಣ ಬಾಕ್ಲಿ, ಶೌಕತ್ ಅಲಿ, ಹಣಮಂತ್ರಾಯ ಜಹಾಗೀರದಾರ, ಇಸ್ಮಾಯಿಲ್, ಶಖಾವತ್ ಹುಸೇನ ವನದುರ್ಗ, ಅನ್ಸರ್ ಲಾವೋರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ