ಹತ್ತಿ ಬಿಡಿಸಲು ರೈತರು ಹೈರಾಣ


Team Udayavani, Nov 12, 2019, 3:22 PM IST

yg-tdy-2

ಸೈದಾಪುರ: ಯಾದಗಿರಿ ತಾಲೂಕಿನ ಬಹುತೇಕ ಒಣ ಭೂಮಿ ಬೇಸಾಯದ ಜತೆ ನೀರಾವರಿ ಭೂಮಿಯಲ್ಲಿ ಹತ್ತಿ ಬೆಳೆದಿದ್ದು, ಉತ್ತಮ ಇಳುವರಿ ಬಂದಿರುವ ಕಾರಣ ಹತ್ತಿ ಬಿಡಿಸಲು ಕೃಷಿ ಕೂಲಿ ಕಾರ್ಮಿಕರಿಗೆ ಬೇಡಿಕೆ ಹೆಚ್ಚಾಗಿದೆ.

ಕೃಷಿ ಇಲಾಖೆ ಮಾಹಿತಿಯಂತೆ ತಾಲೂಕಿನ ಸುಮಾರು 32,990 ಹೆಕ್ಟೇರ್‌ ಭೂಮಿಯಲ್ಲಿ ರೈತರು ಹತ್ತಿ ಬಿತ್ತನೆ ಮಾಡಿದ್ದಾರೆ. ಈ ಬಾರಿ ಉತ್ತಮ ಇಳುವರಿ ಬಂದಿದೆ. ಒಂದು ಕ್ವಿಂಟಲ್‌ಗೆ 4,800ರಿಂದ 5,500 ರೂ. ಗೆ ಮಾರಾಟವಾಗುತ್ತಿದ್ದು, ರೈತರು ಅಷ್ಟೋ ಇಷ್ಟೋ ಸಂತೋಷಪಡುವಂತಾಗಿದೆ. ಆದರೆ ಹತ್ತಿ ಬಿಡಿಸಲು ಕೃಷಿ ಕೂಲಿ ಕಾರ್ಮಿಕರ ಕೊರತೆ ಎದುರಾಗಿದೆ. ವಿವಿಧ ಗ್ರಾಮಗಳಲ್ಲಿ ಸುತ್ತಾಡಿ ಕೇಳಿ, ಬೇಡಿ ಮತ್ತು ಬರುವ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಮಾಡಿ ಕರೆತರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮಾತ್ರವಲ್ಲದೇ ಪ್ರತಿ ಕಾರ್ಮಿಕರಿಗೆ ಒಂದು ದಿನಕ್ಕೆ 180ರಿಂದ 200 ರೂ. ವರೆಗೆ ಕೂಲಿ ಹಣ ನೀಡಲಾಗುತ್ತಿದೆ. ತಮ್ಮ ಗ್ರಾಮಗಳಿಂದ ಬಂದು ಹೋಗುವುದಕ್ಕೆ ಆಟೋ ವ್ಯವಸ್ಥೆ ಮಾಡಿದರೂ ಸಕಾಲದಲ್ಲಿ ಕೂಲಿ ಕಾರ್ಮಿಕರು ಸಿಗುತ್ತಿಲ್ಲ. ಹೀಗಾಗಿ ಹತ್ತಿ ಬೆಳೆ ಬೆಳೆದ ರೈತರು ಕೂಲಿ ಕಾರ್ಮಿಕರು ಬರುವ ಸಮಯ ಕಾಯ್ದು ಕುಳಿತುಕೊಳ್ಳುವುದು ಅನಿವಾರ್ಯವಾಗಿದೆ.

ಶಾಲೆ ಮಕ್ಕಳ ದುಡಿಮೆ: ಕೃಷಿ ಕಾರ್ಮಿಕರಿಗೆ ಬೇಡಿಕೆ ಹೆಚ್ಚಾಗಿದ್ದರಿಂದ ಬಹುತೇಕ ಗ್ರಾಮೀಣ ಭಾಗದ ಪಾಲಕರು ತಮ್ಮ ಮಕ್ಕಳನ್ನು ಹತ್ತಿ ಬಿಡಿಸಲು ಹೊಲಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ಕೆಲವರು ತಮ್ಮ ಮಕ್ಕಳನ್ನು ತಮ್ಮ ಹೊಲಕ್ಕೆ ಕರೆದುಕೊಂಡು ಹೋದರೆ, ಇನ್ನೂ ಕೆಲ ಬಡ ಕೃಷಿ ಕಾರ್ಮಿಕರು ಮಕ್ಕಳನ್ನು ಶಾಲೆಗೆ ಕಳುಹಿಸದೆ ಕೂಲಿಗಾಗಿ ತಮ್ಮ ಜತೆ ಕರೆದುಕೊಂಡು ಹೋಗುತ್ತಿದ್ದಾರೆ. ಇದರಿಂದಾಗಿ ಶಾಲೆಯಲ್ಲಿ ಮಕ್ಕಳ ಹಾಜರಾತಿ ಕಡಿಮೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಅರ್ಧ ವಾರ್ಷಿಕ ರಜೆ ಬಳಿಕ ಅ. 21ರಿಂದಶಾಲೆಗಳು ಪ್ರಾರಂಭವಾಗಿವೆ. ಆದರೆ ಇಂದಿನವರೆಗೂ ಬಹುತೇಕ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಶೇ. 30ರಷ್ಟು ಮಕ್ಕಳು ಗೈರು ಹಾಜರಾಗುತ್ತಿದ್ದಾರೆ. ಗೈರಾದ ಮಕ್ಕಳಿಗೆ ಪಾಠ ಹೇಗೆ ಹೇಳಿಕೊಡಬೇಕು ಎಂಬ ಚಿಂತೆ ಶಿಕ್ಷಕರನ್ನು ಕಾಡುತ್ತಿದ್ದರೆ, ಆನೆಕಾಲು ರೋಗ ನಿರೋಧಕ ಮಾತ್ರೆ ನುಂಗಿಸಲು ಆರೋಗ್ಯ ಇಲಾಖೆ ಸಿಬ್ದಂದಿಗು ಕೂಡ ತೆಲೆ ನೋವಾಗಿ ಪರಿಣಮಿಸಿದೆ.

ವಲಸೆ ಹೋದವರಿಗೆ ಬುಲಾವ್‌: ತಮ್ಮ ಕೃಷಿ ಭೂಮಿ ಬೇರೊಬ್ಬರಿಗೆ ಬಿಟ್ಟು ಉದ್ಯೋಗ ಅರಸಿ ಬೆಂಗಳೂರು ಮತ್ತು  ಮುಂಬೈಯತಂಹ ಮಹಾನಗರಗಳಿಗೆ ವಲಸೆ ಹೋಗಿದ್ದ ಜನರನ್ನು ಮರಳಿ ಕರೆಸಿಕೊಳ್ಳಲಾಗುತ್ತಿದೆ. ಹತ್ತಿ ಬಿಡಿಸಲು ಕೂಲಿ ಕಾರ್ಮಿಕರು ಸಕಾಲಕ್ಕೆ ಸಿಗದೇ ಇರುವ ಕಾರಣಕ್ಕೆ ವಲಸೆ ಹೋದವರಿಗೂ ಈಗ ಬುಲಾವ್‌ ನೀಡಲಾಗುತ್ತಿದೆ.

ವಾಹನ ಮೇಲೆ ಸಂಚಾರ: ಸೈದಾಪುರ ಸುತ್ತಮುತ್ತಲಿನ ಸುಮಾರು 25 ಗ್ರಾಮಗಳಿಗೆ ಗುರುಮಠಕಲ್‌ ಭಾಗದ ನಂದೇಪಲ್ಲಿ, ಮಾಧ್ವಾರ, ವಂಕಸಂಬ್ರ, ಕೊಂಕಲ್‌, ಜೇಗ್ರಾಂ, ಅನಪುರ ಸೇರಿದಂತೆ ತೆಲಂಗಾಣದ ಕೆಲ ಗ್ರಾಮಗಳ ಕೃಷಿ ಕಾರ್ಮಿಕರನ್ನು ಆಟೋ ಮತ್ತು ಜೀಪ್‌ನಲ್ಲಿ ಕರೆದುಕೊಂಡು ಬರಲಾಗುತ್ತಿದೆ. ಒಂದು ವೇಳೆ ಕಾರ್ಮಿಕರು ಹೆಚ್ಚಾದರೆ ವಾಹನದ ಮೇಲೆ ಕುಳಿತುಕೊಂಡು ಅಸುರಕ್ಷಿತವಾಗಿ ಪ್ರಯಾಣಿಸುತ್ತಿದ್ದಾರೆ.ಇದು ರೈತರು ಮತ್ತು ವಾಹನ ಚಾಲಕರಿಗೆ ಅನಿವಾರ್ಯವಾಗಿದೆ. ಕೆಲವೊಮ್ಮೆ ಪೊಲೀಸರ ಕಣ್ಣಿಗೆ ಬಿದ್ದು ದಂಡ ಹಾಕಿದ ಉದಾಹರಣೆ ಸಹ ಇದೆ.

 

-ಭೀಮಣ್ಣ ಬಿ. ವಡವಟ್‌

 

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.