ರೈತರ ಸಮಸ್ಯೆಗೆ ಸ್ಪಂದಿಸದಿದ್ದರೆ ಹೋರಾಟ
Team Udayavani, Jan 10, 2019, 11:35 AM IST
ಶಹಾಪುರ: ರೈತರು ಮತ್ತು ಕಾರ್ಮಿಕರನ್ನು ಕಡೆಗಣಿಸಿದ ಪರಿಣಾಮ ಇತ್ತೀಚೆಗೆ ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿತು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇನ್ನೂ ಬುದ್ಧಿ ಕಲಿತಿಲ್ಲವೆಂದು ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಮುಖಂಡ ಮಲ್ಲಿಕಾರ್ಜುನ ಸತ್ಯಂಪೇಟೆ ಆಕ್ರೋಶ ವ್ಯಕ್ತಪಡಿಸಿದರು.
ಬುಧವಾರ ನಗರದಲ್ಲಿ ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಯಕರ್ತರು ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು, ರೈತ ಸಂಘಟನೆಗಳ ನೇತೃತ್ವದಲ್ಲಿ ಅಖೀಲ ಭಾರತ್ ಬಂದ್ ಕರೆ ಹಿನ್ನೆಲೆಯಲ್ಲಿ ನಡೆದ ಎರಡನೇ ದಿನ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಇಲ್ಲ. ರೈತರ ಸಾಲ ಮನ್ನಾ ಹೆಸರಲ್ಲಿ ಆಶ್ವಾಸನೆಗಳೇ ನಡೆದಿದ್ದು, ಕಾರ್ಮಿಕರ ರಕ್ಷಣೆಯನ್ನು ಮರೆತು ಬಿಟ್ಟಿದ್ದಾರೆ. ಬರುವ ದಿನಗಳಲ್ಲಿ ಕಾರ್ಮಿಕರ, ರೈತರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಹೋರಾಟ ಇನ್ನೂ ಹೆಚ್ಚಿನ ಸ್ವರೂಪ ಪಡೆಯಲಿದೆ ಎಂದರು.
ಎರಡನೇ ದಿನ ಪ್ರತಿಭಟನೆ ಬಿಸಿ ಸ್ವಲ್ಪ ಕಡಿಮೆಯಾಗಿತ್ತು ಎನ್ನಬಹುದು. ಎಂದಿನಂತೆ ಶಾಲಾ ಕಾಲೇಜು ಜರುಗಿದವು. ಅಂಗಡಿ ಮುಂಗಟ್ಟು ಸೇರಿದಂತೆ ಯಾವುದೇ ಸಂಚಾರ ಸುಗಮವಾಗಿತ್ತು.
ಈ ಸಂದರ್ಭದಲ್ಲಿ ಕ.ಪ್ರಾಂ.ಕೃ.ಕೂ. ಸಂಘ ಜಿಲ್ಲಾಧ್ಯಕ್ಷ ದಾವಲಸಾಬ ನದಾಫ್, ಅಂಗನವಾಡಿ ನೌಕರರ ಸಂಘ ಅಧ್ಯಕ್ಷ ಬಸಲಿಂಗಮ್ಮ ನಾಟೇಕಾರ, ಸಾರಿಗೆ ನೌಕರರ ಸಂಘ ಅಧ್ಯಕ್ಷ ಮಹಾದೇವಪ್ಪ ಪಾಟೀಲ, ಕಟ್ಟಡ ಕಾರ್ಮಿಕರ ಸಂಘ ಸಂಘಟನಾ ಕಾರ್ಯದರ್ಶಿ ಸೈದಪ್ಪ ಎಚ್.ಪಿ, ಮುಖಂಡ ಮಲ್ಲಯ್ಯ ಪೋಲಂಪಲ್ಲಿ, ಮಡಿವಾಳಮ್ಮ ಹೂಗಾರ, ಭೀಮರಡ್ಡಿ, ಕಟ್ಟಡ ಕಾರ್ಮಿಕರ ಸಂಘ ಮಹ್ಮದ್ ಯುಸೂಫ್, ತಾಲೂಕು ಅಧ್ಯಕ್ಷ ಸವಿತಾ ಪೂಜಾರಿ, ಯಮನಮ್ಮ ಕಸನ್, ಶಿವಾನಂದಸ್ವಾಮಿ ಗೋಗಿ, ದೇವಕ್ಕಿ, ಚಂದ್ರರಡ್ಡಿ ಇಬ್ರಾಹಿಂಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ