3ನೇ ದಿನಕ್ಕೆ ಕಾಲಿಟ್ಟ ಹೋರಾಟ
Team Udayavani, Dec 31, 2017, 2:33 PM IST
ಯಾದಗಿರಿ: ಅಂಬೇಡ್ಕರ್ ಆವಾಸ ಯೋಜನೆಯಡಿ ಮನೆ ನಿರ್ಮಾಣಕ್ಕೆ ನಿವೇಶನ ಮಂಜೂರಿಗೆ ಸರಕಾರದ ಸ್ಪಷ್ಟ ನಿರ್ದೇಶನ ಇದ್ದರೂ ನಿರ್ಲಕ್ಷ್ಯ ತೋರುತ್ತಿರುವ ಜಿಪಂ ಆಡಳಿತದ ಧೋರಣೆ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ ನಡೆಸುತ್ತಿರುವ ಧರಣಿ ಶನಿವಾರ 3ನೇ ದಿನಕ್ಕೆ ಕಾಲಿರಿಸಿದೆ.
ಕೆಪಿಆರ್ಎಸ್ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕಾರ ನೇತೃತ್ವದಲ್ಲಿ ನಗರದ ಜಿಪಂ ಕಚೇರಿ ಎದುರು ನಡೆಯುತ್ತಿರುವ ಅರ್ನಿದಿಷ್ಟ ಧರಣಿಯಲ್ಲಿ ಕಾರ್ಯಕರ್ತರು ಜಿಪಂ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಮಿತಿ ನಿವೇಶನಗಳನ್ನು ಮಂಜೂರು ಮಾಡಲು ಗ್ರಾಪಂ ನಡುವಳಿಕೆ ಪಾಸ್ ಮಾಡಲು ಒತ್ತಾಯಿಸಿದರು.
ಸರಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದು, ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತೆ ಸುರಪುರದಲ್ಲಿ ಅಧಿಕಾರಿಗಳು ವರ್ತಿಸುತ್ತಿದ್ದು, ನಿವೇಶನಕ್ಕೆ ಅರ್ಜಿ ಸಲ್ಲಿಸಿದ ಎಲ್ಲ ಎಸ್ಸಿ ಎಸ್ಟಿ ಫಲಾನುಭವಿಗಳಿಗೆ ವಿತರಣೆ ಮಾಡಬೇಕೆಂಬ ನಿಯಮ ಇದ್ದರೂ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಸುರಪುರ ತಾಲೂಕು ಅಧ್ಯಕ್ಷ ಧರ್ಮಣ್ಣ ದೊರಿ, ಮುಖಂಡರಾದ ರಾಮಯ್ಯ ಭೋವಿ, ಚಂದ್ರಾಮ ಗೌಡ, ಸಿದ್ದಲಿಂಗಯ್ಯ ವಗ್ಗಾ, ಶಿವರಾಜ ದೊರಿ, ತಂಗಮ್ಮ, ಹಣಮಂತಿ, ಚೆನ್ನಮ್ಮ, ಶಿವಕಾಂತಮ್ಮ, ಯಲ್ಲಮ್ಮ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!