ಬಸವಸಾಗರ ಜಲಾಶಯ ಭರ್ತಿ:ನದಿ ಪಾತ್ರಕ್ಕೆ ನೀರು ಹರಿವು


Team Udayavani, Sep 1, 2017, 4:41 PM IST

yad-3.jpg

ನಾರಾಯಣಪುರ: ಬಸವಸಾಗರ ಜಲಾಶಯ ಸಂಪೂರ್ಣ ಭರ್ತಿ ಆಗಿದ್ದು, ಹೆಚ್ಚುವರಿಯಾಗಿ
ಬರುತ್ತಿರುವ ಹಿನ್ನೀರನ್ನು ಗುರುವಾರ ಬೆಳಗ್ಗೆಯಿಂದ ಜಲಾಶಯದ ಮುಖ್ಯ ಕ್ರಸ್ಟ್‌ಗೇಟ್‌ಗಳಿಂದ ಹಾಗೂ
ಜಲ ವಿದ್ಯುತ್‌ ಸ್ಥಾವರ ಮೂಲಕ 21 ಸಾವಿರ ಕ್ಯೂಸೆಕ್‌ ನಷ್ಟು ನೀರನ್ನು ಕೃಷ್ಣಾ ನದಿ ಪಾತ್ರಕ್ಕೆ ಹರಿಬಿಡಲಾಗುತ್ತಿದೆ ಎಂದು ಅಣೆಕಟ್ಟು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಕೆಲ ಜಿಲ್ಲೆಗಳಲ್ಲಿ ಕಳದೆರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು,
ಆಲಮಟ್ಟಿ ಲಾಲ್‌ ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹೆಚ್ಚುವರಿ ಬರುತ್ತಿರುವ
ನೀರನ್ನು ಇಲ್ಲಿನ ಬಸವಸಾಗರಕ್ಕೆ ಹರಿಬಿಟ್ಟಿದ್ದರಿಂದ ಜಲಾಶಯದ ಗರಿಷ್ಠ ಮಟ್ಟವಾದ 492.23 ಮೀಟರ್‌ ನಷ್ಟು ತಲಪುವ ಮೂಲಕ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಹೆಚ್ಚುವರಿಯಾಗಿ
ಜಲಾಶಯಕ್ಕೆ ಹರಿದು ಬರುತ್ತಿರುವ ಹಿನ್ನೀರನ್ನು ಅಣೆಕಟ್ಟಿನ 3 ಮುಖ್ಯ ಕ್ರಸ್ಟಗೇಟ್‌ ಮೇಲೆತ್ತುವ
ಮೂಲಕ 15 ಸಾವಿರ ಕ್ಯೂಸೆಕ್‌ ಹಾಗೂ ಜಲಾಶಯಕ್ಕೆ ಹೊಂದಿಕೊಂಡಿರುವ ಮುರಡೇಶ್ವರ ಜಲ ವಿದ್ಯುತ್‌ ಸ್ಥಾವರ ಮೂಲಕ 6 ಸಾವಿರ ಕ್ಯೂಸೆಕ್‌ನಷ್ಟು ಒಟ್ಟಾರೆ 21 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿ ಪಾತ್ರಕ್ಕೆ ಹರಿಬಿಡಲಾಗಿದೆ ಎಂದು ಅಣೆಕಟ್ಟು ಉಪವಿಭಾಗದ ಅಧಿಕಾರಿ ಪತ್ರಿಕೆಗೆ ತಿಳಿಸಿದ್ದಾರೆ.

ಪ್ರಸ್ತುತ ಜಲಾಶಯದ ನೀರಿನ ಮಟ್ಟ 492.23 ಮೀಟರ್‌ ತಲುಪಿದೆ. 33.2 ಟಿಎಂಸಿಯಷ್ಟು ನೀರು
ಸಂಗ್ರವಿದೆ. ಒಳಹರಿವು 30 ಸಾವಿರ ಕ್ಯೂಸೆಕ್‌ ಇದೆ. ಒಂದೊಮ್ಮೆ ಜಲಾಶಯಕ್ಕೆ ನೀರಿನ ಒಳಹರಿವು
ಸ್ಥಗಿತಗೊಂಡರೆ ನದಿ ಪಾತ್ರಕ್ಕೆ ನೀರು ಹರಿಸುವದನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಒಟ್ಟು ಹೊರಹರಿವು ಕ್ರಸ್ಟ್‌ಗೇಟ್‌ ಹಾಗೂ ಜಲ ವಿದ್ಯುತ್‌ ಸ್ಥಾವರ ಮೂಲಕ 21 ಸಾವಿರ ಕ್ಯೂಸೆಕ್‌
ಇದ್ದು ಹಾಗೂ ಕೃಷ್ಣಾ ಅಚ್ಚಕಟ್ಟು ಜಮೀನುಗಳಿಗೆ ನೀರಾವರಿಗಾಗಿ ಎಡದಂಡೆ ಮುಖ್ಯ ಕಾಲುವೆಗೆ
5 ಸಾವಿರ, ಬಲದಂಡೆ ಮುಖ್ಯ ಕಾಲುವೆಗೆ 2600 ಕ್ಯೂಸೆಕ್‌, ಆರ್‌.ಎಲ್‌.ಎಸ್‌ 350 ಕ್ಯೂಸೆಕ್‌ನಷ್ಟು ನೀರನ್ನು ಕಾಲುವೆ ಜಾಲಗಳಿಗೆ ಹರಿಸಲಾಗುತ್ತಿದೆ ಎಂದು ಕೃಭಾಜನನಿ ಮೂಲಗಳಿಂದ ತಿಳಿದು ಬಂದಿದೆ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.