ಸೌಲಭ್ಯ ಕಲ್ಪಿಸಲು ಪ್ರಥಮ ಆದ್ಯತೆ
Team Udayavani, Feb 25, 2018, 5:37 PM IST
ಶಹಾಪುರ: ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದಿಂದ ಕನ್ಯಾಕೋಳೂರ ಗ್ರಾಮ ಸುತ್ತಲಿನ ಅಂದಾಜು 75 ಹೆಕ್ಟೇರ್ ಪ್ರದೇಶ ಜಮೀನಿಗೆ ನೀರಿನ ಸೌಲಭ್ಯ ದೊರೆಯಲಿದೆ ಎಂದು ಶಾಸಕ ಗುರು ಪಾಟೀಲ್ ಶಿರವಾಳ ಹೇಳಿದರು.
ತಾಲೂಕಿನ ಕನ್ಯಾಕೋಳೂರ ಗ್ರಾಮದ ಸರ್ವೇ ನಂ. 393ರ ಬಳಿ ಸೇತುವೆ ಬಾಂದಾರ ನಿರ್ಮಾಣ ಮತ್ತು ನಿಜಶರಣ
ಅಂಬಿಗರ ಚೌಡಯ್ಯನವರ ಭವನ, ಉರ್ದು ಶಾಲಾ ಕೋಣೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ
ಅವರು ಮಾತನಾಡಿದರು.ಚ ಅಂದಾಜು ಕನ್ಯಾಳೂರ ಗ್ರಾಮ ವ್ಯಾಪ್ತಿ ಜನರಿಗೆ ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳ ಮೂಲಕ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದಿಂದ ಈ ಭಾಗದ ರೈತಾಪಿ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಜಮೀನಿಗೆ ನೀರು ಸೇರಿದಂತೆ, ಈ ಭಾಗದ ಅಂತರಜಲ ಮಟ್ಟ ಹೆಚ್ಚಳವಾಗಲಿದೆ. ಅಂದಾಜು 185 ಎಕರೆ ಪ್ರದೇಶ ಜಮೀನಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಸೇತುವೆ ನಿರ್ಮಾಣದಿಂದ ಕನ್ಯಾಕೋಳೂರ, ಅನವಾರ ಹಯ್ನಾಳ (ಕೆ) ಗ್ರಾಮಗಳ ನಡುವೆ ಜನರ ಸಂಪರ್ಕ ಕಲ್ಪಿಸಲು ಈ ಸೇತುವೆ ನೆರವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಅಮಾತೆಪ್ಪ ಕಂದಕೂರ, ಮಲ್ಲಣ್ಣ ಮಡ್ಡಿ, ಲಾಲನಸಾಬ ಖುರೇಶಿ, ಅಯ್ಯಣ್ಣ ಕನ್ಯಾಕೋಳೂರ, ಅಂಬಣ್ಣ ನಾಟೇ ಕಾರ, ಮಂಜುನಾಥ, ರಾಚಣ್ಣ ಕರದಳ್ಳಿ, ಮಹಾದೇವಪ್ಪ ಜಗಶಟ್ಟಿ, ಮಹಾಂತಯ್ಯ ಸ್ವಾಮಿ, ಶಂಕರಗೌಡ, ಅಯ್ಯಣ್ಣ, ಬನ್ನಪ್ಪ ನಾಟೇಕಾರ, ಶಾಂತಪ್ಪ, ಶರಣಪ್ಪ ಶಿರವಾಳ, ಶರಣಬಸ್ಸಪ್ಪಗೌಡ, ರಾಜಶೇಖರ ಮಲ್ಹಾರ, ಸುರೇಶ ಹೊಸಮನಿ, ಮಲ್ಲಪ್ಪ ಬೇವಿನಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
MUST WATCH
ಹೊಸ ಸೇರ್ಪಡೆ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ