ಅಹೋರಾತ್ರಿ ಧರಣಿ ನಡುವೆ ರೈತ ಅಸ್ವಸ್ಥ: ಸ್ಥಳದಲ್ಲೇ ಚಿಕಿತ್ಸೆ

6ನೇ ದಿನ ಪೂರೈಸಿದ ರೈತರ ಪ್ರತಿಭಟನೆ, ಭೇಟಿ ನೀಡದ ಜಿಲ್ಲಾಧಿಕಾರಿ

Team Udayavani, Dec 14, 2019, 8:38 PM IST

dharani

ಯಾದಗಿರಿ: ವಡಗೇರಾ ತಾಲೂಕಿನ ಸಂಗಮ ಸೇತುವೆ ಮೇಲೆ ರೈತರು ಪರಿಹಾರಕ್ಕಾಗಿ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ 6ನೇ ದಿನ ಪೂರೈಸಿದ್ದು, ಅಧಿಕಾರಿಗಳ ಸ್ಪಂದನೆ ಸಿಗದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಧರಣಿ ನಿರತ ರೈತ ಮರೆಪ್ಪ ಮೇಸ್ತ್ರಿ ಧರಣಿ ಸ್ಥಳದಲ್ಲಿಯೇ ಅಸ್ವಸ್ಥರಾಗಿದ್ದು ವೈದ್ಯರು ಸ್ಥಳಕ್ಕಾಗಮಿಸಿ ಚಿಕಿತ್ಸೆ ನೀಡಿದ್ದಾರೆ.

ನ್ಯಾಯಯುತ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೂ ಜಿಲ್ಲಾಧಿಕಾರಿಗಳು ಕನಿಷ್ಠ ಸೌಜನ್ಯಕ್ಕಾದರೂ ಭೇಟಿ ನೀಡಿ ಸಮಸ್ಯೆ ಆಲಿಸಲು ಮುಂದಾಗಿಲ್ಲ. ನಮಗೆ ನ್ಯಾಯ ಒದಗಿಸಿ ಕೊಡುವ ಮನಸ್ಸು ಯಾರಿಗೂ ಇಲ್ಲವೇ ಎಂದು ರೈತರು ಗೋಳಿಟ್ಟಿದ್ದು ರೈತರ ಕಷ್ಟಕ್ಕೆ ಸ್ಪಂದಿಸಬೇಕಾದ ಸರ್ಕಾರಕ್ಕೆ ರೈತರ ಕೂಗು ಕೇಳದಂತಾಗಿದೆ.

ಶಕ್ತಿನಗರ ವಿದ್ಯುತ್ ಶಾಖೋತ್ಪನ್ನ ಕೇಂದ್ರಕ್ಕೆ ನೀರು ಸರಬರಾಜಿಗಾಗಿ ಕೃಷ್ಣಾ ನದಿಗೆ ಅಡ್ಡಲಾಗಿದೆ ಗುರ್ಜಾಪು- ಸಂಗಮ ಮಧ್ಯದಲ್ಲಿ ಸೇತುವೆಯನ್ನು ನಿರ್ಮಿಸಲಾಗಿದೆ. ವಿದ್ಯುತ್ ಕೇಂದ್ರಕ್ಕೆ ಬೇಕಾಗಿರುವ ನೀರುನ್ನು 195 ಗೇಟ್ ಹೊಂದಿರುವ ಬೃಹತ್ ಸೇತುವೆ ಮುಚ್ಚಿ ನೀರು ಸಂಗ್ರಹಿಸಲಾಗಿದೆ. ಆದರೇ ಇದರಿಂದಾಗಿ ಶಿವಪೂರ, ಗೋನಾಳ ಗ್ರಾಮದ ರೈತರ ಸುಮಾರು 70 ಎಕರೆಯಷ್ಟು ಜಮೀನುಗಳಿಗೆ ನೀರು ನುಗ್ಗುವುದರಿಂದ ಕಳೆದ ನಾಲ್ಕು ವರ್ಷಗಳಿಂದ ಜಮೀನಿಗೆ ತೆರಳಲು ಆಗದ ಪರಿಸ್ಥಿತಿ ಎದುರಾಗಿದೆ.

ರೈತರು ಸಾಕಷ್ಟು ಬಾರಿ ಅಧಿಕಾರಿಗಳಿಗೆ ಪರಿಹಾರ ನೀಡುವಂತೆ ಮನವಿ ಮಾಡಿಕೊಂಡರು ಸಮರ್ಪಕವಾಗಿ ಸ್ಪಂದಿಸದೆ ಹಾರಿಕೆ ಉತ್ತರ ನೀಡುತ್ತಿದ್ದರಿಂದ ಬೇಸತ್ತಿರುವ ರೈತರು ಕೊನೆಗೆ ಧರಣಿಯ ಹಾದಿ ಹಿಡಿಯುವಂತಾಗಿದೆ. ರೈತ ದೇಶದ ಬೆನ್ನೆಲುಬು ಎಂಬೂದು ಭಾಷಣಗಳಿಗೆ ಸೀಮಿತವಾಗಿದೆ. ರೈತರ ಪರ ಕಾಳಜಿಯಿರುವ ಯಾವೊಬ್ಬ ಅಧಿಕಾರಿಯೂ ಜಿಲ್ಲೆಯಲ್ಲಿಲ್ಲವೇ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿದ್ಯುತ್ ಉತ್ಪಾದನ ಕೇಂದ್ರ ಅಧಿಕಾರಿಗಳಿಗೆ ತಾವೇ ಜಮೀನು ಖರೀದಿಸಿ ಪರಿಹಾರ ನೀಡಿ ಇಲ್ಲ, ಕಳೆದ 3 ವರ್ಷದ ಬೆಳೆಯ ಪರಿಹಾರ ನೀಡುವುದು ಹಾಗೂ ಜಮೀನುಗಳಿಗೆ ತೆರಳುವುದಕ್ಕೆ ಸೂಕ್ತ ವ್ಯವಸ್ಥೆಯನ್ನಾದರೂ ಮಾಡಿಕೊಡುವಂತೆ ರೈತರು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಧರಣಿ ಆರಂಭಗೊAಡು 6 ದಿನವಾದರೂ ನಮಗೆ ಯಾರು ಸ್ಪಂದಿಸುತ್ತಿಲ್ಲ, ನಮಗೆ ನ್ಯಾಯ ಸಿಗುವವರಿಗೊ ನಾವು ಇಲ್ಲಿಂದ ಕದಲುವುದಿಲ್ಲ ಎನ್ನುತ್ತಾರೆ ರೈತರು.

ಆರ್‌ಟಿಪಿಎಸ್ ಅಧಿಕಾರಿಗಳು ಮೌಖಿಕವಾಗಿ ಧರಣಿ ನಿಲ್ಲಿಸಲು ಒತ್ತಡ ಹೇರುತ್ತಿದ್ದು 15 ದಿನಗಳ ನಂತರ ಪರಿಹಾರ ಧನ ನೀಡಲಾಗುವುದು ಎಂದು ಹೇಳುತ್ತಿದ್ದಾರೆ. ಆದರೇ ಲಿಖಿತ ರೂಪದಲ್ಲಿ ಭರವಸೆ ನೀಡಿದರೇ ಮಾತ್ರ ಧರಣಿ ಕೈಬಿಡುತ್ತೇವೆ ಎನ್ನುತ್ತಾರೆ ರೈತರು.

ಬಸವರಾಜ ಮಾಲಿ ಪಾಟೀಲ, ಶ್ರೀನಿವಾಸ ಕಲಾಲ್. ರಾಜಪ್ಪ ಗೌಡ ಮಾಲಿ ಪಾಟೀಲ್, ಗುರುರಾಜ್ ಸಾಹುಕಾರ, ಹಿರಣ್ಣ ಕಲಾಲ್ ಸೇರಿದಂತೆ ರೈತರು ಹಾಗೂ ಗ್ರಾಮಸ್ಥರು ಧರಣಿಯಲ್ಲಿ ಭಾಗವಹಿಸಿದ್ದಾರೆ.

ಶಾಸಕರಿಗಿಲ್ಲವೇ ಜವಾಬ್ದಾರಿ?: ಯಾದಗಿರಿ ಮತಕ್ಷೇತ್ರದ ವ್ಯಾಪ್ತಿಯ ರೈತರು ತಮಗಾಗಿರುವ ಅನ್ಯಾಯವನ್ನು ಖಂಡಿಸಿ, ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಧರಣಿ ಆರಂಭಿಸಿದ್ದು, ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ರೈತರ ಸಮಸ್ಯೆಯನ್ನು ಆಲಿಸಿ ಪರಿಹಾರ ಕಲ್ಪಿಸುವ ಕಾರ್ಯದಲ್ಲಿ ಕಾಳಜಿವಹಿಸಬೇಕಿತ್ತು. ಆದರೇ ಶಾಸಕರು ಸಹ ಈವರೆಗೆ ಸ್ಥಳಕ್ಕೆ ಭೇಟಿ ನೀಡಿ ರೈತರ ಕಷ್ಟ ಕೇಳುವ ಗೋಜಿಗೆ ಹೋಗಿಲ್ಲ ಎನ್ನುವ ಅಸಮಾಧಾನವೂ ಇಲ್ಲಿನ ರೈತರಲ್ಲಿದೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.