ರೈತರ ಹೆಸರಲ್ಲಿ ವಂಚನೆ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Oct 10, 2018, 4:27 PM IST
ಯಾದಗಿರಿ: ತಾಲೂಕಿನ ನೀಲಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಉಮೇಶ ಕವಡಿ ಅಮಾಯಕ ರೈತರ ಹೆಸರಿನಲ್ಲಿ ವಂಚನೆ ಮಾಡಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ನೀಲಹಳ್ಳಿ ಗ್ರಾಮದ ರೈತರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ
ಸಹಕಾರಿ ಸಚಿವರಿಗೆ ಮನವಿ ಸಲ್ಲಿಸಿದರು.
ಕಳೆದ 1994ರಿಂದಲೂ ಉಮೇಶ ಕವಡಿ ಇಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ ಪುಡಾರಿಗಳು, ಪಟ್ಟಭದ್ರಹಿತಾಸಕ್ತಿಗಳನ್ನು ಕಟ್ಟಿಕೊಂಡು ಅಮಾಯಕ ರೈತರ ಹೆಸರಿನಲ್ಲಿ ಅವ್ಯವಹಾರ ಮಾಡುತ್ತ ಬಂದಿದ್ದಾರೆ ಎಂದು ರೈತರು ದೂರಿದ್ದಾರೆ.
ಸೆ. 05ರಂದು ಜರುಗಿದ ಸಂಘದ ಮಾಸಿಕ ಸಭೆಯಲ್ಲಿ ಸದಸ್ಯರು ವಿಚಾರಿಸಿದಾಗ, ಸಂಘದಲ್ಲಿ ಸತ್ತವರ ಹೆಸರನ್ನು ನಮೂದಿಸಿ ತಾನೇ ಹಣವನ್ನು ಎತ್ತಿ ಹಾಕಿದ್ದಾನೆ. ಇದನ್ನು ಕೇಳಿದರೆ ನಾನೇ ಹಣ ತೆಗೆದುಕೊಂಡಿದ್ದೇನೆ ಏನು ಮಾಡಿಕೊಳ್ಳುತ್ತೀರಿ ಮಾಡಿಕೊಳ್ಳಿ ಎಂದು ನಿರ್ದೇಶಕ ಬಸವರಾಜಪ್ಪ ಗೌಡಗೇರಿಗೆ ಉಡಾಫೆ ಉತ್ತರ ನೀಡಿ,
ನನಗೇನು ಅಂಜಿಕೆ ಇಲ್ಲ, ಏನು ಮಾಡಿಕೊಳ್ಳುತ್ತೀರಿ ಮಾಡಿಕೊಳ್ಳಿ ಹೋಗಿ ಎಂದು ಗದರಿಸಿ ಅವಾಜ್ ಹಾಕಿದ್ದಾನೆಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖೀಸಲಾಗಿದೆ.
ಈಗಾಗಲೇ ಸಂಬಂಧಪಟ್ಟ ಅಧಿಕಾರಿಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಘಟನೆ ಬಗ್ಗೆ ತನಿಖಾ ತಂಡ ರಚಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹಂತ ಹಂತವಾಗಿ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಟೋಕರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಕೆ. ಮುದ್ನಾಳ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಬಸವರಾಜ ನಾಯಕ, ಸದಾಶಿವರಡ್ಡಿ ಪಾಟೀಲ, ಸಾಬಣ್ಣ ಎಸ್, ನರಸಪ್ಪ, ಬಸವರಾಜ, ಮಲ್ಲಪ್ಪ,
ಭೀಮರಾಯ, ಸಿದ್ರಾಮಪ್ಪ, ಶಿವಶಂಕರ ಎಸ್. ಬಾಗ್ಲಿ, ಮುದ್ದಣ್ಣಗೌಡ, ಕಾಶಪ್ಪ, ಸಾಬಣ್ಣ ಆರ್, ಶ್ರೀನಿವಾಸ ನಾಯಕ,
ತಿಪ್ಪಣ್ಣ, ಯಂಕಪ್ಪ, ಸೂಗಪ್ಪ, ಖತಲಪ್ಪ ಸೇರಿದಂತೆ ಅನೇಕ ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ