ಅನಿಷ್ಟ ಪದ್ಧತಿ ವಿರುದ್ಧ ಹೋರಾಡಿದ ಫುಲೆ
Team Udayavani, Jan 23, 2019, 11:17 AM IST
ಆಳಂದ: ಕೆಳವರ್ಗದ ಹೆಣ್ಣು ಮಕ್ಕಳಿಗೆ ಅಕ್ಷರದ ಅರಿವು ಮೂಡಿಸಿದ ಹಾಗೂ ವೈಚಾರಿಕ ಸಾತ್ವಿಕ ಪ್ರಜ್ಞೆ ಮೂಡಿಸಿದ ಸ್ವಾಮಿ ವಿವೇಕಾನಂದ ಹಾಗೂ ಸಾವಿತ್ರಿಬಾಯಿ ಫುಲೆ ತತ್ವಾದರ್ಶ ಅಳವಡಿಸಿಕೊಂಡು ಆಚರಣೆ ತರಬೇಕು ಎಂದು ಮಾದನಹಿಪ್ಪರಗಾದ ಪದವಿ ಕಾಲೇಜಿನ ಸಹ ಪ್ರಾದ್ಯಾಪಕ ಡಾ| ಕೈಲಾಸಬಾಬು ಹೊಸಮನಿ ಹೇಳಿದರು.
ನಿಂಬರಗಾ ಗ್ರಾಮದ ದೇವನಾಂಪ್ರಿಯ ಕಲಾ ಪದವಿ ಮಹಾವಿದ್ಯಾಲಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪೊಲೀಸ್ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಕ್ಷರಮಾತೆ ಸಾವಿತ್ರಿಬಾಯಿ ಫುಲೆ 188ನೇ ಮತ್ತು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಮತ್ತು ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತದಲ್ಲಿ ಮಹಿಳೆಯರಿಗೆ ಸಮರ್ಪಕವಾದ ಶಿಕ್ಷಣದ ವ್ಯವಸ್ಥೆ ಇಲ್ಲದ ಸಂದರ್ಭದಲ್ಲಿ ಫುಲೆಯವರು ಇತರ ಮಹಿಳೆಯರಿಗೆ ಶಿಕ್ಷಣ ಕಲಿಸಿದರು. ಸಮಾಜದಲ್ಲಿ ಅನಿಷ್ಟ ಪದ್ಧತಿಗಳಾದ ಬಾಲ್ಯ ವಿವಾಹ, ಸತಿ ಸಹಗಮನ, ಕೇಶಮಂಡನೆ ವಿರುದ್ಧ ಹೋರಾಟ ಮಾಡಿ ಮಹಿಳೆಯರಿಗಾಗಿ ಶಾಲೆ ತೆರೆದರು ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷೆ ಮಹಾದೇವಿ ಬಿಬ್ರಾಣಿ ಸಾವಿತ್ರಿಬಾಯಿ ಫುಲೆ ಮತ್ತು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.
ಸಂಸ್ಥೆಯ ಗೌರವಾಧ್ಯಕ್ಷ ಡಾ| ಸಂಜೀವಕುಮಾರ ನಿರ್ಮಲಕರ್ ಮಾತನಾಡಿ, ಮನುಷ್ಯನ ಜೀವನ ಬಹಳ ವೈಶಿಷ್ಟವಾದುದ್ದು. ಕೆಟ್ಟ ಮನೋವಿಕೃತಿಗೆ ಒಳಗಾಗದೆ ತಮ್ಮ ಜೀವನ ರೂಪಿಸಿಕೊಳ್ಳಬೇಕು. ಒಳ್ಳೆಯ ಶಿಕ್ಷಣ ಪಡೆದು ತಂದೆ-ತಾಯಿ, ಗುರುವಿನ ಹೆಸರು ತಂದು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಹೊರಹೊಮ್ಮಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅರುಣಕುಮಾರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಎಎಸ್ಐ ರಾಚಪ್ಪ, ದೇವನಾಂಪ್ರಿಯಾ ಕಲಾ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಸಂತೋಷ ಹೂಗಾರ,
ವಿಶ್ವನಾಥ ಪಾಟೀಲ, ಪರಶುರಾಮ ಶಿಂಧೆ, ಶರಣಗೌಡ ಪಾಟೀಲ, ಮಂಗಲಾ, ಭಾಗಪ್ಪ ಸಿಂಗೆ ಉಪಸ್ಥಿತರಿದ್ದರು. ಬಸವರಾಜ ಸ್ವಾಗತಿಸಿದರು ಮತ್ತು ಮಲ್ಲಿನಾಥ ನಾಟೀಕರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ