ಆಯುಷ್ ವೈದ್ಯರ ಬೇಡಿಕೆ ಈಡೇರಿಸಿ
Team Udayavani, May 22, 2020, 6:15 AM IST
ಯಾದಗಿರಿ: ಆಯುಷ್ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಆಯುಷ್ ಫೆಡರೇಷನ್ ಆಫ್ ಇಂಡಿಯಾ ಪದಾಧಿಕಾರಿ ಡಾ. ಆನಂದ ಕಿರಿಶ್ಯಾಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರನ್ನು ಭೇಟಿಯಾದ ವೈದ್ಯರ ನಿಯೋಗ, ಆಯುಷ್ ವೈದ್ಯರ ವೇತನ ಹೆಚ್ಚಳದ ಬೇಡಿಕೆಯೊಂದಿಗೆ ಕಪ್ಪು ಬಟ್ಟೆ ಧರಿಸಿ ಸೇವೆ ಸಲ್ಲಿಸುತ್ತಿದ್ದು, ಸರ್ಕಾರ ಸ್ಪಂದಿಸುತ್ತಿಲ್ಲ. ಇದರಿಂದ ಮೇ 23ರಿಂದ ಎಲ್ಲ ವಿಭಾಗದ ಗುತ್ತಿಗೆ ಆಯುಷ್ ವೈದ್ಯರು ಸೇವೆ ಸ್ಥಗಿತಗೊಳಿಸುತ್ತಿರುವುದಾಗಿ ಹೇಳಿದರು.
ಶಿಷ್ಯ ವೇತನ ಪಾವತಿಯಲ್ಲಿಯೂ ಆಯುಷ್ ಅಭ್ಯರ್ಥಿಗಳಿಗೆ ಕಡಿಮೆ ನೀಡುತ್ತಿದ್ದು, ಇದನ್ನು ವಿರೋಧಿ ಸಿಯೂ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಆಯುಷ್ ವೈದ್ಯರಿಗೆ ಷರತ್ತಿಗೆ ಒಳಪಟ್ಟು ಆಲೋಪಥಿ ಔಷಧಿ ಬಳಸಲು ಅನುಮತಿ ನೀಡುವುದು, ಕೋವಿಡ್-19 ಸಂದರ್ಭದಲ್ಲಿಯೂ ಆಯುಷ್ ವೈದ್ಯರು ಜ್ವರ ತಪಾಸಣೆ ಕೇಂದ್ರ, ಕ್ವಾರಂಟೈನ್ಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಸರ್ಕಾರಿ ಆಯುಷ್ ವೈದ್ಯರಿಗೆ ನೀಡಿರುವ ಆದೇಶ ಖಾಸಗಿ ವೈದ್ಯರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಡಾ. ಭಾಗರೆಡ್ಡಿ ಸೇರಿದಂತೆ ಇತರೆ ಆಯುಷ್ ವೈದ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ