30ಕ್ಕೆ ಗಡಿ ಹಳ್ಳಿ ಹಬ್ಬ, ಸಂಗೀತ ಸಂಜೆ ಕಾರ್ಯಕ್ರಮ
Team Udayavani, Oct 21, 2021, 4:54 PM IST
ಔರಾದ: ತಾಲೂಕಿನ ಚೊಂಡಿಮುಖೇಡ್ ಗ್ರಾಮದಲ್ಲಿ ಅ.30ರಂದು ಬೆಳಗ್ಗೆ 9ಗಂಟೆಗೆ ಗಡಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿದರಿ, ಬೀದರ ಜಿಲ್ಲಾ ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ “ಗಡಿ ಹಳ್ಳಿ ಹಬ್ಬ’ ಹಾಗೂ ಸಂಜೆ 4ಕ್ಕೆ ಬೀದರನ ರಂಗಮಂದಿರದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು, ಸಾಹಿತಿಗಳು ಸೇರಿದಂತೆ ಅನೇಕರು ಕಾರ್ಯಕ್ರಮದ ರೂಪುರೇಷೆಗಳ ಕುರಿತು ಸಮಾಲೋಚನೆ ನಡೆಸಿದರು.
ಗಡಿ ಗ್ರಾಮ ಚೊಂಡಿಮುಖೇಡದಲ್ಲಿ ಬೆಳಿಗ್ಗೆ 9ಕ್ಕೆ ಹಳ್ಳಿ ಹಬ್ಬ ಕಾರ್ಯಕ್ರಮ ಆಯೋಜಿಸಿದರೆ ಸಂಜೆ ಬೀದರನ ರಂಗ ಮಂದಿರದಲ್ಲಿ ಗಾನ ಕೋಗಿಲೆ ಲತಾ ಮಂಗೇಶ್ಕರ್ ಹಾಗೂ ಆಶಾ ಭೋಸ್ಲೆ ಅವರ ಗೌರವಾರ್ಥ ಸಂಗೀತ ಸಂಜೆ ಕಾರ್ಯಕ್ರಮ ನೆರವೇರಿಸಲು ಚರ್ಚಿಸಲಾಯಿತು.
ಇದನ್ನೂ ಓದಿ: ಅಕ್ರಮವಾಗಿ ಕೋಣಗಳ ಸಾಗಾಟ: ಲಾರಿ, ಕಾರು ಸಮೇತ ಆರೋಪಿಗಳ ಬಂಧನ
ಚೊಂಡಿಮುಖೇಡ್ನ ಪಂಡಿತರಾವ್ ಪಾಟೀಲ ಮಾತನಾಸಸಡಿ, ಸಮಾರಂಭದ ಆಯೋಜನೆ ಸಂತಸ ತಂದಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಗಡಿ ಭಾಗದಲ್ಲಿ ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲ ಸೌಲಭ್ಯಗಳು ಸಾರ್ವಜನಿಕರಿಗೆ ದೊರೆಯುವಂತೆ ಕಾಳಜಿ ವಹಿಸಬೇಕು ಎಂದರು.
ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಸುರೇಶ ಚೆನ್ನಶೆಟ್ಟಿ, ಡಾ| ರಾಜಕುಮಾರ ಹೆಬ್ಟಾಳೆ, ಯುವ ಮುಖಂಡ ಪ್ರದೀಪ ಕುಮಾರ ರಕ್ಷಾಳೆ ಮಾತನಾಡಿದರು. ರಾಮದಾಸ ಅಠವಾಲೆ, ನರೇಂದ್ರ, ಅಜೀತ್ ಪಾಟೀಲ, ಡಾ| ವೈಜಿನಾಥ ಬುಟ್ಟೆ, ತಾಪಂ ಇಒ ಮಾಣಿಕರಾವ ಪಾಟೀಲ, ಶಿವಾನಂದ ಔರಾದೆ, ಶಿವಕುಮಾರ ಘಾಟೆ, ಜಗನ್ನಾಥ ಮೂಲಗೆ, ನಾಗಶೆಟ್ಟಿ ಧರಂಪೂರ್, ಸಂಜೀವಕುಮಾರ ಜುಮ್ಮಾ, ಬಸವರಾಜ ಶಟಕಾರ, ವೀರೇಶ ಅಲಮಾಜೆ, ಸಂಗಮೇಶ ಬೆಲ್ದಾಳ, ಶಾಲಿವಾನ ಸಿದಬಟ್ಟೆ, ಬಿಎಂ ಅಮರವಾಡಿ, ದೇವಿದಾಸ ಜೋಶಿ, ವಿ.ಎಸ್ ಉಪ್ಪಿನ್, ಉಮಾಕಾಂತ ಮಹಾಜನ, ಶಿವಶರಣಪ್ಪ ವಲ್ಲೆಪೂರೆ, ಬಸವರಾಜ ರುದನೂರ್, ಪರಮೇಶ ವಿಳಸಪೂರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ