ಮನೆಗೆ ನಳ ಸಂಪರ್ಕ ಪಡೆಯಿರಿ


Team Udayavani, Dec 29, 2017, 3:31 PM IST

yad-1.jpg

ಯಾದಗಿರಿ: ನಗರಸಭೆ ಮೂಲಕ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನಗೊಳ್ಳುತ್ತಿವೆ. ಅದರಲ್ಲಿ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆ ಸಹ ಒಂದಾಗಿದೆ. ಈ ಯೋಜನೆಗೆ ಸುಮಾರು 50 ಕೋಟಿ ರೂ. ವ್ಯಯಿಸಲಾಗಿದೆ. ಆದ್ದರಿಂದ ಪ್ರತಿಯೊಂದು ಮನೆಗೆ ನಳ ಸಂಪರ್ಕ ಪಡೆಯಬೇಕು ಎಂದು ನಗರಸಭೆ ಪೌರಾಯುಕ್ತ
ಸಂಗಪ್ಪ ಉಪಾಸೆ ಹೇಳಿದರು.

ನಗರದ ವಾರ್ಡ್‌ ನಂ. 14ರ ಅಸರ್‌ ಮೋಹಲ್ಲಾದ ಮಿಲನ್‌ ಫಂಕ್ಷನ್‌ ಹಾಲ್‌ನಲ್ಲಿ ಕರ್ನಾಟಕ ನಗರ ಮೂಲಸೌಕರ್ಯ
ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ, ಉತ್ತರ ಕರ್ನಾಟಕ ನಗರ ವಲಯ ಬಂಡವಾಳ ಹೂಡಿಕೆ ಕಾರ್ಯಕ್ರಮ, ಯಾದಗಿರಿ ನಗರಸಭೆ ಹಾಗೂ ಕಲಬುರಗಿ ಗ್ರಾಮೀಣ ಮಹಿಳಾ ಅಭಿವೃದ್ಧಿ ಶಿಕ್ಷಣ ಸಂಸ್ಥೆ (ಗ್ರಾಮ್ಸ್‌), ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಮನೆ ನಳ ಸಂಪರ್ಕಗಳ ಪ್ರೇರಣೆ ಮಾಹಿತಿ, ಸಂವಹನ ಹಾಗೂ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೀರು ಸರಬರಾಜು ಹಾಗೂ ನೀರಿನ ದರದ ಕುರಿತು ಸಮುದಾಯಾದವರಿಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ
ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರು ನಗರಸಭೆ ಕಾರ್ಯಗಳು ನಮ್ಮ ಮನೆ ಕಾರ್ಯದಂತೆ
ಪ್ರೀತಿಯಿಂದ ಕಾಳಜಿ ಮಾಡಿದಾಗ ಮಾತ್ರ ನಗರ ಅಭಿವೃದ್ಧಿಯಾಗುತ್ತದೆ. ಅದರ ಜತೆಗೆ ನಗರಕ್ಕೂ ಕೂಡ
ಒಳ್ಳೆ ಹೆಸರು ಬರುತ್ತದೆ. ಇನ್ನೂ 6 ತಿಂಗಳಲ್ಲಿ ನಳ ಸಂಪರ್ಕ ಹೊಂದಿದ ಮನೆಗಳಿಗೆ ಶುದ್ಧವಾದ ಕುಡಿಯುವ ನೀರು
ಸರಬರಾಜು ಆಗುತ್ತದೆ ಎಂದು ಹೇಳಿದರು.

ಕೆಯುಐಡಿಎಫ್‌ಸಿ ಯೋಜನಾಧಿಕಾರಿ ಮಹೇಶಕುಮಾರ ಮಾತನಾಡಿ, ಕೆಯುಐಡಿಎಫ್‌ಸಿ- ಎನ್‌ಕೆಯುಎಸ್‌ಐಪಿ
ಯೋಜನೆ ಯಾದಗಿರಿ ನಗರಕ್ಕೆ ಬಂದಿರುವುದು ಸಂತೋಷದ ವಿಷಯ. ಕರ್ನಾಟಕದ 20,460 ಗ್ರಾಮಗಳಿಗೆ ಕುಡಿಯಲು ಯೋಗ್ಯವಲ್ಲದ ನೀರು ಪೂರೈಕೆಯಾಗುತ್ತಿದೆ. ಇದರಿಂದ ಹಲವಾರು ರೋಗಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಯಾದಗಿರಿ ನಗರದ ಪ್ರತಿಯೊಂದು ಕುಟುಂಬದವರು ಮನೆಗಳಿಗೆ ನಳ ಸಂಪರ್ಕ ಪಡೆದು ಅದಕ್ಕೆ ತಗಲುವ ಕರವನ್ನು ನಗರಸಭೆಗೆ ನೀಡಬೇಕು ಮತ್ತು ಮನೆ ನಳ ಸಂಪರ್ಕ ಪಡೆಯಲು ಕೆಯುಐಡಿ ಎಫ್‌ಸಿ-ಎನ್‌ಕೆಯುಎಸ್‌ಐಪಿ
ಕ್ಷೇತ್ರ ಮಟ್ಟದ ಸಿಬ್ಬಂದಿಗಳು ನಿಮ್ಮ ಮನೆಗೆ ಬಂದು ಅರ್ಜಿ ತುಂಬುವ ವಿಧಾನದ ಮಾಹಿತಿ ಸಹ ನೀಡುತ್ತಾರೆ ಎಂದು
ಹೇಳಿದರು.

ಯೋಜನಾ ಸಂಯೋಜಕರಾದ ದೇವೆಂದ್ರಪ್ಪ ಚಿಂತಕುಂಟಾ ಮಾತನಾಡಿ, ಯೋಜನೆ ಕುರಿತು ಸಮಗ್ರವಾದ ಮಾಹಿತಿ
ನೀಡುವುದರ ಜತೆಗೆ ಯೋಜನೆಗೆ ಸಂಬಂಧಿ ಸಿದ ಕೆಲವು ಕಿರು ಚಿತ್ರ ಸಹ ಪ್ರದರ್ಶಿಸಿದರು.

ನಗರಸಭೆ ಸದಸ್ಯರಾದ ತಸ್ಲಿಮ್‌ ಬಾನು ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಕಾರ್ಯಪಾಲಕ ಅಭಿಯಂತರ
ಅಶೋಕ ಚಟ್ಟರ್ಕಿ, ಸಮುದಾಯ ಸಂಘಟನಾಧಿಕಾರಿ ಬಸಪ್ಪ ತಳವಡಿ, ವಕೀಲರಾದ ಶಫಿ ಅಹ್ಮದ್‌, ಎಂ.ಡಿ.ಇಸ್ಮಾಯಿಲ್‌, ಮಹಿಳಾ ಸಂಘದ ಮುಖಂಡರಾದ ಸಂಗೀತಾ ಇದ್ದರು. ಸಾಬಮ್ಮ ಪ್ರಾರ್ಥಿಸಿದರು. ದೇವಮ್ಮ ಅಬ್ಬೇತುಮಕೂರು ನಿರೂಪಿಸಿದರು. ಸಮುದಾಯ ಸಂಘಟಿಕರಾದ ಅವ್ವಮ್ಮ ವಂದಿಸಿದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.