ಆಧುನಿಕ ತಂತ್ರಜ್ಞಾನದಿಂದ ಹೆಚ್ಚಿನ ಲಾಭ ಪಡೆಯಿರಿ: ಕಂದಕೂರ
Team Udayavani, Jun 10, 2022, 3:26 PM IST
ಗುರುಮಠಕಲ್: ರೈತರು ಬೆಳೆದರೆ ಮಾತ್ರ ಜಗತ್ತು ಬದುಕಲು ಸಾಧ್ಯ. ಆದರೆ ರೈತರು ಮಾತ್ರ ಸಮಸ್ಯೆಗಳಲ್ಲಿರುವುದು ನೋವಿನ ಸಂಗತಿ. ಹೀಗಾಗಿ ರೈತರು ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಹೆಚ್ಚಿನ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕ ನಾಗನಗೌಡ ಕಂದಕೂರ ಹೇಳಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಜರುಗಿದ ಮುಂಗಾರು ಬಿತ್ತನೆ ಬೀಜ ವಿತರಣೆ, ಸಮಗ್ರ ಕೃಷಿ ಅಭಿಯಾನ ಹಾಗೂ ಜಲಾನಯನ ಯೋಜನೆಯಡಿ ಕೋಟಿ ವೃಕ್ಷಾಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮದು ಮಳೆಯಾಧಾರಿತ ಕೃಷಿ ಪ್ರದೇಶ. ಸರಿಯಾಗಿ ಮಳೆಯಾಗದಿದ್ದರೆ ಬೀಜ, ರಸಗೊಬ್ಬರ, ಕೃಷಿ ಚಟುವಟಿಕೆಗಳಿಗೆ ಮಾಡಿದ ಖರ್ಚು ಎಲ್ಲವೂ ನಷ್ಟವಾಗುತ್ತದೆ. ಬೀಜ, ಗೊಬ್ಬರ, ಖರೀದಿಸುವ ಕುರಿತು ಕೃಷಿ ಇಲಾಖೆಯವರು ರೈತರಿಗೆ ಅಗತ್ಯ ಮಾರ್ಗದರ್ಶನ ಹಾಗೂ ಸಹಾಯ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.
ಸಹಾಯಕ ಕೃಷಿ ನಿರ್ದೇಶಕ ಶ್ವೇತಾ ತಾಳೆಮರದ ಹಾಗೂ ಅರಣ್ಯ ಇಲಾಖೆ ಎಸಿಎಫ್ ಶಿವಶರಣಪ್ಪ ಅವರು ಮಾತನಾಡಿದರು. ಸಾಂಕೇತಿಕವಾಗಿ ವೇದಿಕೆಯ ಮೇಲೆ ರೈತರಿಗೆ ಶಾಸಕರು ಬಿತ್ತನೆ ಬೀಜ ಹಾಗೂ ಸಸಿಗಳನ್ನು ವಿತರಿಸಿದರು.
ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ಉಪಾಧ್ಯಕ್ಷೆ ಭೀಮಮ್ಮ ಮುಕುಡಿ, ಕೇದಾರನಾಥ ಹಿರೇಮಠ, ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ಅವುಂಟೆ, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಪ್ರಕಾಶ ನಿರೇಟಿ, ಎಪಿಎಂಸಿ ಮಾಜಿ ಜಿಲ್ಲಾಧ್ಯಕ್ಷ ಬಸಣ್ಣ ದೇವರಳ್ಳಿ, ಎಪಿಎಂಸಿ ಸದಸ್ಯ ಅನಂತಪ್ಪ ಯದ್ಲಾಪುರ, ಪುರಸಭೆ ಸದಸ್ಯ ಆಶನ್ನ ಬುದ್ದ, ಭೀಮಶಪ್ಪ ಗುಡಿಸೆ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…