ಘಂಟಿಗೆ ಕಲ್ಯಾಣ ಕರ್ನಾಟಕ ಕಲಾರತ್ನ ಪ್ರಶಸಿ


Team Udayavani, Jan 29, 2018, 5:48 PM IST

yad-4.jpg

ಶಹಾಪುರ: ಗ್ರಾಮ ಎಂಬುವುದು ಒಂದು ಸಾಂಸ್ಥಿಕ ಸಂಸ್ಥೆ. ಮಾನವ ಸಂಸ್ಕೃತಿಯ ಪರಂಪರೆಯ ಎಲ್ಲ ಮೌಲ್ಯಗಳು ಗ್ರಾಮಗಳಲ್ಲಿ ಕಾಣುತ್ತೇವೆ. ಈ ಗ್ರಾಮಗಳು ಮಾನವ ಜನಾಂಗದ ತೊಟ್ಟಿಲುಗಳೆಂದು ಕರೆಯಲಾಗುತ್ತದೆ ಎಂದು ಕೃಷಿ ಮಹಾವಿದ್ಯಾಲಯ ಡೀನ್‌ ಡಾ| ಸುರೇಶ ಪಾಟೀಲ್‌ ಹೇಳಿದರು.

ಸಮೀಪದ ಭೀಮರಾಯನ ಗುಡಿಯ ಕೃಷಿ ಮಹಾವಿದ್ಯಾಲಯ ಕಾಲೇಜಿನಲ್ಲಿ ಪುಷ್ಪಾ ನಾಟ್ಯ ಸರಸ್ವತಿ ಕನ್ನಡ ಕಲಾ ಸಂಘ ಆಯೋಜಿಸಿದ್ದ “ಭಾವ ಸಂಗಮ’ ನಾಟಕ ಪ್ರದರ್ಶನ ಹಾಗೂ ಕಲ್ಯಾಣ ಕರ್ನಾಟಕ ಕಲಾರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸಂಶೋಧಕ, ಸಾಹಿತಿ ಡಿ.ಎನ್‌. ಅಕ್ಕಿ ಅವರು ರಚಿಸಿದ “ಭಾವ ಸಂಗಮ’ ನಾಟಕದಲ್ಲಿ ಹಳ್ಳಿಯ ಸೊಗಡು ಎಳೆ
ಎಳೆಯಾಗಿ ಚಿತ್ರಿಸಿದ್ದಾರೆ. ಇಡಿ ಹಳ್ಳಿ ಒಂದು ಕುಟುಂಬ ಎಂಬ ನಂಬಿಕೆಯ ಮೇಲೆ ಬೆಳೆದು ನಿಂತ ಸಮಾಜವಾಗಿದೆ.

ಆಧುನಿಕ ವ್ಯವಸ್ಥೆಯಲ್ಲಿ ಗ್ರಾಮ ಸಮಾಜದ ಎಲ್ಲ ಮಗ್ಗಲುಗಳಲ್ಲಿ ತುಂಬಾ ಪರಿವರ್ತನೆಗಳಾಗಿದ್ದರಿಂದ
ಗ್ರಾಮ ಸಮಾಜದಲ್ಲಿ ವಿವಿಧ ಜಾತಿ, ಜನಾಂಗ, ಧರ್ಮಗಳ ನಡುವೆ ಇರುವ ಭಾವನಾತ್ಮಕ ಸಂಬಂಧ ಕಡಿಮೆಯಾಗಿ ಆರ್ಥಿಕ ದೃಷ್ಟಿಕೋನ ಬೆಳೆದಿರುವುದು ಕಾಣಬಹುದು.

ಇಂತಹ ಗ್ರಾಮ ಸಮಾಜದ ಸಮಗ್ರ ಚಿತ್ರಣವನ್ನು ಸಾಹಿತಿ ಹಾಗೂ ಸಂಶೋಧಕ ಡಿ.ಎನ್‌. ಅಕ್ಕಿಯವರು ಅರ್ಥಪೂರ್ಣವಾಗಿ ರಚಿಸಿದ್ದಾರೆ ಎಂದರು. ಕಲ್ಯಾಣ ಕರ್ನಾಟಕ ಕಲಾ ರತ್ನ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ
ಹಿರಿಯ ರಂಗಕರ್ಮಿ ಶಂಕ್ರಯ್ಯ ಆರ್‌. ಘಂಟಿ, ಕಲೆ, ಸಾಹಿತ್ಯ, ಸಂಗೀತ, ನಾಟಕ ಮನುಷ್ಯನಿಗೆ ಉತ್ತಮ ಸಂಸ್ಕಾರ ನೀಡಿ ಒಳ್ಳೆಯ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದರು. 

ಹಿರಿಯ ರಂಗಕರ್ಮಿ ಸಿದ್ರಾಮ ಉಪ್ಪಿನ್‌ ಮಾತನಾಡಿ, ನಮ್ಮ ನಾಡಿನ ಸಂಸ್ಕೃತಿಯ ಪರಂಪರೆಯನ್ನು ಪ್ರತಿಬಿಂಬಿಸುವ ನಾಟಕ ಕಲೆಯು ಸಾಮೂಹಿಕ ಸಾಮಾಜಿಕ ಕಲೆಯಾಗಿ ಮಹತ್ವವನ್ನು ಪಡೆದಿದೆ ಎಂದರು.

ಈ ಸಂದರ್ಭದಲ್ಲಿ ಶರಣು ಬಿ. ಗದ್ದುಗೆ ಹಾಗೂ ಸಾಹಿತಿ ಡಿ.ಎನ್‌. ಅಕ್ಕಿಯವರಿಗೆ ಸನ್ಮಾನಿಸಿ ಗೌರವಿಸಲಾಯಿತು.
 ಚರಬಸವೇಶ್ವರ ಸಂಸ್ಥಾನ ಗದ್ದುಗೆಯ ಬಸವಯ್ಯ ಶರಣರು, ದೋರನಹಳ್ಳಿ ಹೀರೆಮಠದ ವೀರಮಹಾಂತ ಶಿವಾಚಾರ್ಯರು, ಸಿದ್ಧಾಶ್ರಮ ರಮಾನಂದ ಅವಧೂತರು, ದೋರನಹಳ್ಳಿಯ ಮಹಿಬೂಬ ಪಾಶಾ ಖಾದ್ರಿ, ಸಾಹಿತಿ
ಚಂದ್ರಕಾಂತ ಕರದಳ್ಳಿ, ರಂಗಕರ್ಮಿ ಎಲ್‌.ಬಿ.ಕೆ. ಆಲ್ದಾಳ, ಗುರುಬಸಯ್ಯ ಗದ್ದುಗೆ, ನಾಟಕ ನಿರ್ದೇಶಕ ಅಂಬ್ಲಿಪ್ಪ
ಕೊಲ್ಲೂರ, ರಂಗ ಕಲಾವಿದ ವಿನೋದ ಹೀರೆಮಠ, ಬೂದಯ್ಯ ಹೀರೆಮಠ, ವಸ್ತ್ರ ವಿನ್ಯಾಸಕ ಗೌಡಪ್ಪಗೌಡ ಹುಲಕಲ್‌ ಇದ್ದರು.

ಪುಷ್ಪಾ ನಾಟ್ಯ ಸರಸ್ವತಿ ಕನ್ನಡ ಕಲಾ ಸಂಘದ ಅಧ್ಯಕ್ಷ ರವಿ ಬಾಲಕೃಷ್ಣ ದೇಸಾಯಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಆನಂದ ಜೋಷಿ ಹಾಗೂ ಮಹೇಶ ಪತ್ತಾರ ನಿರೂಪಿಸಿದರು. ದೀಪಾ ನಾಯಕ ಪ್ರಾರ್ಥಿಸಿದರು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.