ಪ್ರತಿಭಾ ಸಂಪನ್ನರಿಗೆ ಪ್ರೋತ್ಸಾಹ ಅಗತ್ಯ: ಪೂಜಾರಿ
ಶಾಲೆಗೆ ಬರುವ ಮಕ್ಕಳಲ್ಲಿ ಯಾವ ಪ್ರತಿಭೆ ಇರುತ್ತದೆ ಎಂಬುದು ಗೊತ್ತಿರುವುದಿಲ್ಲ
Team Udayavani, Sep 5, 2022, 6:35 PM IST
ಯಾದಗಿರಿ: ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿನ ಹಲವು ಶಾಲಾ ಮಕ್ಕಳಲ್ಲಿ ಪ್ರತಿಭಾ ಸಂಪನ್ನರಿದ್ದಾರೆ. ಅವರಿಗೆ ಪ್ರೋತ್ಸಾಹದ ಅಗತ್ಯವಿದ್ದು, ಪ್ರತಿಯೊಬ್ಬ ಸಾಮಾಜಿಕ ಕಾಳಜಿಯುಳ್ಳವರು ಪ್ರತಿಭಾ ಪೋಷಣೆ ಮಾಡಬೇಕು ಎಂದು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಪೂಜಾರಿ ಹೇಳಿದರು.
ಇಲ್ಲಿನ ದಿ| ತಿಮ್ಮಣ್ಣ ಹೆಡಗಿಮದ್ರಾ ಶಾಲೆ ಆವರಣದಲ್ಲಿ ಯಾದಗಿರಿ ಗ್ರಾಮೀಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಕ್ಕಳಿಗೆ ಇಂತಹ ವೇದಿಕೆಗಳು ಒದಗಿಸಿ ಕೊಟ್ಟಾಗ ಅವರಲ್ಲಿರುವ ಸೂಪ್ತ ಪ್ರತಿಭೆ ಬಹಿರಂಗಗೊಂಡು ಅವರ ಸಮಗ್ರ ವಿಕಾಸಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತರೆಡ್ಡಿ ಮಾತನಾಡಿ, ಶಾಲಾ ಹಂತದಲ್ಲಿಯೇ ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಅಭಿಪ್ರಾಯುಪಟ್ಟರು. ಶಾಲೆಗೆ ಬರುವ ಮಕ್ಕಳಲ್ಲಿ ಯಾವ ಪ್ರತಿಭೆ ಇರುತ್ತದೆ ಎಂಬುದು ಗೊತ್ತಿರುವುದಿಲ್ಲ. ಇಂತಹ ವೇದಿಕೆಗಳು ಸಿಕ್ಕಾಗ ಅದನ್ನು ಬಹಿರಂಗ ಪಡಿಸಲು ಸಾಧ್ಯವಾಗುತ್ತದೆ. ಶಿಕ್ಷಕರಿಗೂ ಈ ಕಾರ್ಯಕ್ರಮದಿಂದಾಗಿ ತಮ್ಮ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ಚಿಂತನೆಗೆ ಹಚ್ಚುತ್ತದೆ ಎಂದರು.
ಶಿಕ್ಷಣ ಸಂಯೋಜಕ ಶರಣಗೌಡ ಬಿರಾದಾರ, ಬಿಆರ್ಪಿ ಬಂದಪ್ಪ ಐರೆಡ್ಡಿ, ನೌಕರರ ಸಂಘದ ಮಹೇಶ ಪಾಟೀಲ್, ಶಿಕ್ಷಕರ ಸಂಘದ ವೆಂಕಟರೆಡ್ಡಿ, ರಮೇಶಕುಮಾರ ಇಟೆ, ಜಯಶ್ರೀ, ಶಾಲೆಯ ಮುಖ್ಯಗುರು ಜೈನ್, ಶಿಕ್ಷಕರಾದ ಶರಣಪ್ಪ ಹೆಡಗಿಮುದ್ರಿ, ಕೊಲಿವಾಡ ಶಾಲೆ ಶಿಕ್ಷಕಿ ಶ್ರೀದೇವಿ, ಸಿಆರ್ಪಿ ಗುಂಡೂರಾವ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ