ಸರಕಾರದ ಪ್ಯಾಕೇಜ್ ಗಳು, ಪರಿಹಾರ ಘೋಷಣೆಗೆ ಮಾತ್ರನಾ ಎಂದ ಶಾಸಕ ಶರಣಬಸ್ಸಪ್ಪ ದರ್ಶನಾಪುರ


Team Udayavani, May 16, 2020, 4:00 PM IST

ಸರಕಾರದ ಪ್ಯಾಕೇಜ್ ಗಳು, ಪರಿಹಾರ ಘೋಷಣೆಗೆ ಮಾತ್ರನಾ ಎಂದ ಶಾಸಕ ಶರಣಬಸ್ಸಪ್ಪ ದರ್ಶನಾಪುರ

ಯಾದಗಿರಿ: ಲಾಕ್ ಡೌನ್ ಹಿನ್ನೆಲೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದ್ದು ಜಿಲ್ಲೆಯ ಎಷ್ಟು ಜನರಿಗೆ ಲಾಭ ಸಿಕ್ಕಿದೆ? ಪಟ್ಟಿ ಏನಾದರೂ ಇದೆಯಾ ಎಂದು ಶಹಾಪುರ ಶಾಸಕ ಶರಣಬಸ್ಸಪ್ಪ ದರ್ಶನಾಪುರ ಸಭೆಯಲ್ಲಿ ಪ್ರಶ್ನಿಸಿದರು

ಯಾದಗಿರಿ ಜಿ.ಪಂ. ಸಭಾಂಗಣದಲ್ಲಿ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಶಾಸಕರು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಪರಿಹಾರ ಘೋಷಣೆ ಕೇವಲ ಟಿವಿಯಲ್ಲಿ ನೋಡಿ ಖುಷಿ ಪಡುವಂತಾಗಿದೆ, ಎಷ್ಟು ಕ್ಷೌರಿಕರು, ತೋಟಗಾರಿಗೆ ಬೆಳೆದ ರೈತರು, ಟ್ಯಾಕ್ಸಿ ಚಾಲಕರಿಗೆ ಲಾಭವಾಗಲಿದೆ ಎಂದರು.

ಆಡಳಿತ ಪಕ್ಷದ ಶಾಸಕ ನರಸಿಂಹ ನಾಯಕ್ ಸರ್ಕಾರದ ಧೋರಣೆಯನ್ನು ಖಂಡಿಸಿದರು.

ಜಿಲ್ಲೆಯಲ್ಲಿ ಕಾರ್ಮಿಕ ಅಧಿಕಾರಿಗಳೇ ಇಲ್ಲ. ಕನಿಷ್ಟ ತಾಲೂಕಿಗೆ ಒಬ್ಬರಾದರು ಇರಬೇಕು ಎಂದರು. ಇದರಿಂದ ಫಲಾನುಭವಿಗಳು ಲಾಭ ಪಡೆಯಲು ಕಷ್ಟವಾಗುತ್ತಿದೆ‌ ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವಂತ ಪರಿಸ್ಥಿತಿಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರು.

ಸರ್ಕಾರದ ಮಟ್ಟದಲ್ಲಿ ಜಿಲ್ಲೆಯ ಸಮಸ್ಯೆಯ ಕುರಿತು ಬೆಳಕು ಚೆಲ್ಲಿ, ತಾನು ಆಡಳಿತ ಪಕ್ಷದ ಶಾಸಕನಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ತರಿವುದು ತನಗೂ ಇಷ್ಟವಿಲ್ಲ ಎಂದು ಸಚಿವರೆದುರು ಬೇಸರದ ಮಾತುಗಳನ್ನಾಡಿದರು.

ಬೇರೆ ಜಿಲ್ಲೆಯಿಂದ ಕಾರ್ಮಿಕರನ್ನು ಕರೆತರಲು ಸರ್ಕಾರ  ಉಚಿತ ಬಸ್ ವ್ಯವಸ್ಥೆ ಮಾಡಿತ್ತು ಆದರೆ ಯಾದಗಿರಿ ಜಿಲ್ಲೆಯಲ್ಲಿ ಕೇವಲ 15 ಬಸ್ ಉಚಿತ ಸೇವೆ ನೀಡಿದ್ದು 18 ಬಸ್ ಗಳಿಗೆ ತಾನು ಸ್ವತಾ ದುಡ್ಡು ಪಾವತಿಸಿ ಕಾರ್ಮಿಕರನ್ನು ಕರೆಯಿಸಿದ್ದೇನೆ ಎಂದರು.

ಮೊದಲೇ ಜನರ ಬಳಿ ದುಡ್ಡಿಲ್ಲ ಈ ಸಂದರ್ಭದಲ್ಲಿ ದುಪ್ಪಟ್ಟು ದುಡ್ಡು ಪಡೆಯುವುದು ಸರಿಯಲ್ಲ ಸಾರಿಗೆ ಇಲಾಖೆ ಮಾನವೀಯತೆ ತೋರಬೇಕು,ಅದು ಸರ್ಕಾರದ ಅಂಗ ಇದರಿಂದ ಸರ್ಕಾರಕ್ಕು ಒಳ್ಳೆಯ ಹೆಸರು ಬರಲ್ಲ ಎಂದರು.

ವಿಜಯಪುರದ ಇಂಡಿಯಿಂದ ಸುರಪುರಕ್ಕೆ ಉಚಿತ ಬಸ್ ಬರಲು ತಯಾರಿರಲಿಲ್ಲ .ತಾನು ಸ್ವತಃ 18 ಸಾವಿರ ಪಾವತಿಸಿದ ಬಳಿಕ ಬಸ್ ಬಿಡಲಾಯಿತು ಎಂದು ಸಚಿವರ ಗಮನಕ್ಕೆ ತಂದರು

ಇಂತಹದ್ದರಿಂದ ಸರ್ಕಾರಗಳು ಘೋಷಿಸಿರುವ ನೆರವು ಪ್ಯಾಕೇಜ್ ಗಳು ಹೊಳೆಯಲ್ಲಿ ಹುಣಸೆಹಣ್ಣು ತೊಳೆದಂತಾಗುತ್ತದೆ ಎಂದು ಸಚಿವರೆದುರು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಮಾತನಾಡಿ, 363 ಉಚಿತ ಬಸ್ ಗಳ ಮೂಲಕ ಬೆಂಗಳೂರಿನಿಂದ ಕಾರ್ಮಿಕರು ಜಿಲ್ಲೆಗೆ ಆಗಮಿಸಿದ್ದು, ಜಿಲ್ಲೆಯಲ್ಲಿ 72 ಉಚಿತ ಬಸ್ ಸಂಚಾರವಾಗಿದೆ ಹಾಗೂ ಕಲಬುರಗಿಯಿಂದ 17 ಬಸ್ ಗಳು ಜಿಲ್ಲೆಗೆ ಬಂದಿದ್ದು ಸರ್ಕಾರದ ನಿರ್ದೇಶನದಂತೆ ಉಚಿತ ಸಾರಿಗೆ ವ್ಯವಸ್ಥೆ ಯಾಗಿದೆ ಎಂದು ಸ್ಪಷ್ಟನೆ ನೀಡಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.