ಗ್ರಾಮಾಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ
Team Udayavani, Feb 3, 2019, 10:38 AM IST
ಹುಣಸಗಿ: ಕ್ಷೇತ್ರದಲ್ಲಿನ ಹಳ್ಳಿಗಳ ಅಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ. ಆದ್ದರಿಂದ ಸುರಪುರ ಶಾಸಕ ರಾಜುಗೌಡ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಿ ಸಿಸಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದುಯುವ ಮುಖಂಡ ಹಣಮಂತನಾಯಕ (ಬಬಲುಗೌಡ) ಹೇಳಿದರು.
ಕೊಡೇಕಲ್ ಜಿಪಂ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮಂಜೂರಾಗಿರುವ ಸಿಸಿ ರಸ್ತೆಗಳ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟಿಸಿ ಅವರು ಮಾತನಾಡಿದರು. ಕೇತ್ರದಲ್ಲಿ ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸಿಸಿ ರಸ್ತೆ, ಒಳಚರಂಡಿ, ದೇವಸ್ಥಾನಗಳ ಜೀಣೊರ್ದ್ಧಾರ ಸೇರಿದಂತೆ ಅನೇಕ ಕಾಮಗಾರಿಗಳು ಇವೆ ಎಂದು ಹೇಳಿದರು.
ಮಾಜಿ ಸಿಎಂ ಯಡಿಯೂರಪ್ಪ ಅವರು ರೈತರು, ಬಡವರು ಹಾಗೂ ಶೋಷಿತರನ್ನು ಮೇಲೆತ್ತಲು ಹಲವಾರು ಯೋಜನೆ ಜಾರಿಗೆ ತಂದಿದ್ದಾರೆ ಎಂದು ಹೇಳಿದರು. ಮೂಲಭೂತ ಸೌಲಭ್ಯಗಳಿಂದ ವಂಚಿತ ಗ್ರಾಮಗಳಿಗೆ ಹಲವಾರು ಯೋಜನೆ ಜಾರಿಗೆ ತಂದಿರುವುದಾಗಿ ಹೇಳಿದರು.
ತಾಲೂಕಿನಾದ್ಯಂತ ಪ್ರತಿ ಗ್ರಾಮಗಳಲ್ಲಿ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿ ನಡೆಯುತ್ತಲೇ ಇದೆ. ಆಸರೆ ಮನೆ, ಕುಡಿಯುವ ನೀರು, ರಸ್ತೆ, ಹೈನುಗಾರಿಕೆ, ಪಶುಸಂಗೋಪನೆ, ರೈತರ ಸಂಕಷ್ಟ ಕಾಲದಲ್ಲಿ ನೆರವಿಗೆ ಬರುವ ಕೃಷಿಹೊಂಡ ಸೇರಿದಂತೆ ರೈತರ ಸಮಸ್ಯೆಗಳಿಗೆ ಬಿಜೆಪಿ ಸರಕಾರ ಸ್ಪಂದಿಸಿ ಸಾಕಷ್ಟು ಯೋಜನೆ ಅನುಷ್ಠಾನಗೊಳಿಸಿದೆ ಎಂದು ಹೇಳಿದರು.
ಕೊಡೇಕಲ್ ಜಿಪಂ ಕ್ಷೇತ್ರದ ಗ್ರಾಮಗಳಾದ ಮಾರನಾಳ, ಮಾವಿನಗಿಡದ ತಾಂಡಾ,ಉಪ್ಪಲದಿನ್ನಿ ಮತ್ತು ರಾಯನಪಾಳೆ ಗ್ರಾಮಗಳಲ್ಲಿ ಮಂಜೂರಾಗಿರುವ ಸಿಸಿ ರಸ್ತೆಗಳಿಗೆ ಬಬಲುಗೌಡ ಭೂಮಿಪೂಜೆ ನೆರವೇರಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಅಮರಣ್ಣ ಹುಡೇದ, ಜಿಪಂ ಸದಸ್ಯರಾದ ನಾರಾಯಣ ನಾಯ್ಕ, ತಾಪಂ ಸದಸ್ಯ ಗೌಡಪ್ಪಗೌಡ ಪೋಲಿಸ್ಪಾಟೀಲ, ಲೋಕಪಯೋಗಿ ಇಲಾಖೆಯ ಎಸ್.ಜಿ. ಪಾಟೀಲ, ಮಲ್ಲು ನವಲಗುಡ್ಡ, ಶಾಂತಿಲಾಲ ರಾಠೊಡ, ರಾಚಪ್ಪಗೌಡ ಪೊಲೀಸ್ಪಾಟೀಲ, ಗುಂಡಪ್ಪ, ಕುಮಾರೆಪ್ಪ, ಫೀರಪ್ಪ ಜಾಧವ, ವಿಠuಲ ಚವ್ಹಾಣ, ಗುರು ರಾಠೊಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ