ಲೋಕಲ್‌ ಫೈಟ್‌ಗೆ ಹೆಚ್ಚಿದ ಉಮೇದುವಾರಿಕೆ

ಗ್ರಾಮ ಪಂಚಾಯಿತಿ ಚುನಾವಣೆಗೆ ತೀವ್ರ ಪೈಪೋಟಿ

Team Udayavani, Dec 11, 2020, 5:37 PM IST

YG-TDY-1

ಯಾದಗಿರಿ: ಸದ್ಯ ಎದುರಾಗಿರುವ ಗ್ರಾಪಂ ಚುನಾವಣೆಗೆ ಗ್ರಾಮೀಣ ಭಾಗದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದೆ. ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿರುವ ಯುವ ಸಮೂಹ ಭಾರಿ ಉತ್ಸಾಹದಿಂದ ನಾಮಪತ್ರ ಸಲ್ಲಿಸುತ್ತಿರುವುದು ಕಂಡು ಬರುತ್ತಿದೆ.

ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಮೂರು ತಾಲೂಕುಗಳಲ್ಲಿ ಚುನಾವಣೆ ಜರುಗಲಿದ್ದು, ಶಹಾಪುರ ತಾಲೂಕಿನ 24 ಗ್ರಾಪಂಗಳ 495 ಸದಸ್ಯ ಸ್ಥಾನ, ಸುರಪುರ ತಾಲೂಕಿನ 21 ಗ್ರಾಪಂಗಳ 383 ಸ್ಥಾನ ಹಾಗೂ ಹುಣಸಗಿ ತಾಲೂಕಿನ 18 ಗ್ರಾಪಂಗಳ 369ಸ್ಥಾನ ಸೇರಿ 1247 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಪಂಚಾಯಿತಿಗಳಲ್ಲಿ ಈಗಾಗಲೇ ನಾಮಪತ್ರ ಸಲ್ಲಿಕೆನಡೆಯುತ್ತಿದ್ದು, ಶಹಾಪುರ ತಾಲೂಕಿನ ಚಟ್ನಳ್ಳಿಗ್ರಾಪಂ ಕಾರ್ಯಾಲಯ ಎದುರು ಆಕಾಂಕ್ಷಿಗಳು ಮತ್ತು ಬೆಂಬಲಿಗರು ಜಾತ್ರೆಯಂತೆ ನೆರೆದಿದ್ದು ಕಂಡು ಬಂತು.

ಈ ಬಾರಿ ವಿಶೇಷವಾಗಿ ಯುವ ಸಮೂಹವೇ ಚುನಾವಣೆ ಅಖಾಡಕ್ಕೆ ಹೆಚ್ಚಾಗಿ ಧುಮುಕಿರುವುದುಕಾಣಸಿಗುತ್ತಿದ್ದು, ಪಂಚಾಯಿತಿ ಫೈಟ್‌ ದಿನದಿಂದದಿನಕ್ಕೆ ಕಾವೇರುತ್ತಿದೆ. ಒಂದು ಸ್ಥಾನಕ್ಕೆ ಮೂವರಿಂದನಾಲ್ವರು ನಾಮಪತ್ರ ಸಲ್ಲಿಸುತ್ತಿದ್ದು ಬಹುತೇಕಹೊಸ ಮುಖಗಳು ಎಂಟ್ರಿ ಕೊಡುತ್ತಿರುವುದು ಇನ್ನುಮುಂದಾದರೂ ಗ್ರಾಮದ ಏಳ್ಗೆಯಾಗಲಿ ಎನ್ನುವ ಮಾತುಗಳು ಕೇಳಿಬರುತ್ತಿದೆ.

ನಾಮಪತ್ರ ಸಲ್ಲಿಸುತ್ತಿರುವ ಅಭ್ಯರ್ಥಿಗಳು ತನ್ನ ಸ್ವಂತ ವರ್ಚಸ್ಸಿನ ಮೇಲೆಯೇ ನಾಮಪತ್ರ ಸಲ್ಲಿಸುತ್ತಿದ್ದು, ಎಲ್ಲ ಜಾತಿ ಮತ ಪಡೆಯಲು ಜನರನ್ನುಓಲೈಸುವ ತಂತ್ರಗಾರಿಕೆ ಶುರು ಮಾಡಿದ್ದಾರೆ. ಈಗಲೇ ಬಹಿರಂಗವಾಗಿ ಜಾತಿ ಹೆಸರು ಬಳಸಿ ಇತರರ ಅಸಮಾಧಾನಕ್ಕೆ ಗುರಿಯಾಗದೇ ಒಳಗೊಳಗೆ ತಮ್ಮಜಾತಿಯ ಮತಗಳನ್ನು ಒಗ್ಗೂಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಭ್ಯರ್ಥಿಗಳು ಏನೆಲ್ಲ ಕಸರತ್ತು ನಡೆಸಿದರೂ ಅಂತಿಮವಾಗಿ ಮತದಾರರು ಯಾರಿಗೆಜೈ ಎನ್ನುವರೋ ಎನ್ನುವ ಉತ್ತರ ಸಿಗಲು ಮತದಾನದವರೆಗೆ ಕಾಯಲೆಬೇಕಿದೆ.

ನಾಮಪತ್ರ ಸಲ್ಲಿಕೆ :  ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಪಂ ಚುನಾವಣೆಗೆ ಅಭ್ಯರ್ಥಿಗಳಿಂದ ಡಿ.9ರವರೆಗೆವಿವಿಧ ಗ್ರಾಪಂಗಳಲ್ಲಿ ಒಟ್ಟು 102 ನಾಮಪತ್ರ ಸಲ್ಲಿಕೆಯಾಗಿತ್ತು. ಶಹಾಪುರ ತಾಲೂಕಿನಗ್ರಾಪಂಗಳಿಗೆ 11, ಸುರಪುರ ತಾಲೂಕಿನ ಗ್ರಾಪಂಗಳಿಗೆ 31 ಹಾಗೂ ಹುಣಸಗಿತಾಲೂಕಿನ ಗ್ರಾಪಂಗಳಿಗೆ 60 ಸೇರಿ ಒಟ್ಟು 102ಸಲ್ಲಿಕೆಯಾಗಿತ್ತು. ಡಿ.11 ನಾಮಪತ್ರ ಸಲ್ಲಿಕೆಗೆಕೊನೆ ದಿನವಾಗಿದ್ದು, ಇಂದೂ ಕೂಡ ಬಹಳಷ್ಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಮೊದಲ ಬಾರಿಗೆ ಗ್ರಾಪಂ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಗ್ರಾಮದಲ್ಲಿ ಸಮರ್ಪಕ ಅಭಿವೃದ್ಧಿ ಮಾಡುವ ಉದ್ದೇಶವಿದೆ. ಗ್ರಾಮದಲ್ಲಿಯೂ ಸಾಕಷ್ಟು ಪ್ರೋತ್ಸಾಹನೀಡುತ್ತಿದ್ದು ಮತದಾರರು ಆಶೀರ್ವದಿಸಿದರೆ ಸೇವೆಗೆ ಅನಕೂಲವಾಗಲಿದೆ.  –ಸಾಬಣ್ಣ ಭಜಂತ್ರಿ, ಚಟ್ನಳ್ಳಿ ಗ್ರಾಪಂ ಅಭ್ಯರ್ಥಿ

ಗ್ರಾಮಗಳ ಅಭಿವೃದ್ಧಿಗೆ ಹೊಸ ಆಲೋಚನೆಗಳಿರುವ ಯುವಕರನ್ನು ಆರಿಸಿತರಬೇಕಿದೆ. ಯುವ ಸಮೂಹ ಉತ್ಸುಕರಾಗಿಚುನಾವಣೆಗೆ ಸ್ಪರ್ಧಿಸುತ್ತಿದ್ದು ವಿದ್ಯಾವಂತರೂ ಇದ್ದಾರೆ. ಅವರು ಆರಿಸಿ ಬಂದರೆ ಗ್ರಾಮಗಳ ಅಭಿವೃದ್ಧಿಯಾಗುವ ನಿರೀಕ್ಷೆಯಿದೆ. –ಮಾನಪ್ಪ ಗೌಡ ದಳಪತಿ, ಮರಮಕಲ್‌

ಹಿಂದೆ ನಮ್ಮ ಕಾಲದಲ್ಲಿ ಮುಖಂಡರು ಯಾರ ಹೆಸರು ಹೇಳಿದರೆ ಅವರು ಆರಿಸಿ ಬರುತ್ತಿದ್ದೆವು. ಈಗ ಹುಡುಗರು ಎಲೆಕ್ಷನ್‌ಗೆ ನಿಂತಿದ್ದಾರೆ. ಇಂದಿನ ದಿನಮಾನಗಳೇ ಬೇರೆ. ಹಾಗಾಗಿ ಸನ್ನಿವೇಶಕ್ಕೆ ತಕ್ಕಂತೆ ಅವಕಾಶ ದೊರೆಯಬೇಕು. ಜನರಿಗೆ ಉಪಯೋಗವಾಗುವ ಕಾರ್ಯ ಮಾಡುವುದು ಅಗತ್ಯ. –ಸಾಬಣ್ಣ ಪೂಜಾರಿ, ಗ್ರಾಪಂ ಮಾಜಿ ಸದಸ್ಯ, ಚಟ್ನಳ್ಳಿ

 

-ಅನೀಲ ಬಸೂದೆ

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.