ಗುರುಮಠಕಲ್ ಸರಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಕೂರ್ಮಾರಾವ್ ಗರಂ
Team Udayavani, Jun 16, 2020, 1:01 PM IST
ಗುರುಮಠಕಲ್: ಪಟ್ಟಣದ ಸರಕಾರಿ ಆಸ್ಪತ್ರೆ ಅವ್ಯವಸ್ಥೆ ಕಂಡು ಜಿಲ್ಲಾಧಿಕಾರಿ ಕೂರ್ಮಾರಾವ್ ಗರಂ ಆದರು. ಕಂದಕೂರು ಗ್ರಾಮದ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿದರು. ಬಳಿಕ ಪಟ್ಟಣದ ಸರಕಾರಿ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ ಇದೊಂದು ಭೂತ ಬಂಗಾಲೆಯಾಗಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ವಿರುದ್ಧ ಗರಂ ಆದರು.
ಬೃಹತ್ ಕಟ್ಟಡ ಹೊಂದಿರುವ ಆಸ್ಪತ್ರೆಯನ್ನು ಉತ್ತಮವಾಗಿ ನಿರ್ವಹಣೆ ಮಾಡುವುದರಲ್ಲಿ ವಿಫಲವಾಗಿದ್ದೀರಿ. ಕೊಠಡಿಗಳು ಸಹ ಸ್ವತ್ಛವಾಗಿಲ್ಲ. ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗಿದ್ದ ಆಸ್ಪತ್ರೆ ಜನರಿಗೆ ಭಯ ಉಂಟುಮಾಡಬಾರದು. ಇನ್ನು ಮುಂದೆ ಸುಧಾರಣೆಗೆ ಒತ್ತು ನೀಡಬೇಕು ಎಂದು ಸೂಚಿಸಿದರು. ತಹಶೀಲ್ದಾರ್ ಸಂಗಮೇಶ ಜಿಡಗಿ, ಪಿಎಸ್ಐ ಶೀಲಾದೇವಿ, ಪುರಸಭೆ ಮುಖ್ಯಾಧಿಕಾರಿ ಜೀವನಕುಮಾರ ಕಟ್ಟಿಮನಿ, ತಾಲೂಕು ಆರೋಗ್ಯ ಅಧಿಕಾರಿ ಹಣ್ಮಿರೆಡ್ಡಿ, ಡಾ| ವರಶಿವಪ್ರಸಾದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್