ಗುರುಮಠಕಲ್‌ ಪುರಸಭೆ ಗದ್ದುಗೆ ಯಾರಿಗೆ?


Team Udayavani, Nov 2, 2020, 4:49 PM IST

yg-tdy-2

ಯಾದಗಿರಿ: ಕಾಂಗ್ರೆಸ್‌ ಭದ್ರಕೋಟೆಯನ್ನುಛಿದ್ರಗೊಳಿಸಿದ ಗುರುಮಠಕಲ್‌ ಮತಕ್ಷೇತ್ರವನ್ನು ತನ್ನ ತೆಕ್ಕೆಗೆ ಪಡೆದಿರುವ ಜೆಡಿಎಸ್‌ಗೆ ಗುರುಮಠಕಲ್‌ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯೂವಶವಾದಿತೇ?. ಇದೀಗ ಜೆಡಿಎಸ್‌ ಮತ್ತು ಕಾಂಗ್ರೆಸ್‌ಗೆ ಗದ್ದುಗೆ ಹಿಡಿಯುವುದು ಪ್ರತಿಷ್ಠೆಯ ಮಾತಾಗಿದೆ.

ಗುರುಮಠಕಲ್‌ ಪುರಸಭೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ನ.2ರಂದು ದಿನಾಂಕ ನಿಗದಿಯಾಗಿದ್ದು, ಕಾಂಗ್ರೆಸ್‌ನ ಮೂವರು ಸದಸ್ಯರು ಕೆಲವು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೇಅಜ್ಞಾತವಾಸದಲ್ಲಿದ್ದು, ರಾಜಕೀಯವಾಗಿ ಸಾಕಷ್ಟು ಸಂಚಲನ ಮೂಡಿಸಿದೆ.

23 ಸದಸ್ಯರ ಬಲ ಹೊಂದಿರುವ ಪುರಸಭೆಯಲ್ಲಿ ಕಾಂಗ್ರೆಸ್‌ 12 ಸದಸ್ಯರ ಬಲ ಹೊಂದಿದ್ದರೆ, ಜೆಡಿಎಸ್‌ 8, ಬಿಜೆಪಿ 2 ಹಾಗೂ ಒಬ್ಬ ಪಕ್ಷೇತರ ಸದಸ್ಯರಿದ್ದಾರೆ.ಪ್ರಸ್ತುತ ದಳಪತಿಗಳ ಬಳಿ 8 ಸದಸ್ಯರು ಮತ್ತು ಶಾಸಕರ ಮತ ಸೇರಿ 9ಕ್ಕೆ ಏರಿಕೆಯಾಗಲಿದ್ದು, ಪ್ರಮುಖವಾಗಿ ಕಾಂಗ್ರೆಸ್‌ 12 ಸದಸ್ಯರಲ್ಲಿ ಅಶೋಕ ಕಲಾಲ್‌, ಆಶನ್ನ ಬುದ್ಧ ಹಾಗೂ ಪವಿತ್ರ ಮನ್ನೆ ಅಜ್ಞಾತ ಸ್ಥಳಕ್ಕೆ ತೆರಳಿರುವುದು ಕಾಂಗ್ರೆಸ್‌ಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಈಗಾಗಲೇ ಕಾಂಗ್ರೆಸ್‌ ಎಲ್ಲಾ ಸದಸ್ಯರಿಗೆ ವಿಪ್‌ ಜಾರಿಗೊಳಿಸಿ ಪಕ್ಷದ ಅಧಿಕೃತ ಅಭ್ಯರ್ಥಿ ಪರ ಮತ ಚಲಾಯಿಸದಿದ್ದರೆ ಸೂಕ್ತ ಕ್ರಮದ ಎಚ್ಚರಿಕೆಯೂ ನೀಡಿದೆ. ರಾಜಕೀಯದಲ್ಲಿ ಯಾವಾಗ ಏನಾಗುತ್ತದೆ ಎನ್ನುವುದು ಹೇಳಲಾಗಲ್ಲ ಎನ್ನುವಂತೆ ಒಂದು ವೇಳೆ ಮೂವರು ಸದಸ್ಯರು ಜೆಡಿಎಸ್‌ಗೆ ಬೆಂಬಲಿಸಿದರೆ ಅಧ್ಯಕ್ಷ ಗಾದಿಗೆ ಬೇಕಿರುವ 12ರ ಬಲ ಸಿಕ್ಕು ಗದ್ದುಗೆ ತನ್ನದಾಗಿಸುವ ತಂತ್ರಗಾರಿಕೆ ಹೂಡಲಾಗಿದೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಸದ್ದು ಮಾಡಿದೆ.

ಪಕ್ಷೇತರ ಒಬ್ಬ ಸದಸ್ಯರು ಈಗಾಗಲೇ ತೆನೆಹೊತ್ತ ಮಹಿಳೆಯತ್ತ ವಾಲಿರುವ ಮಾಹಿತಿ ಲಭ್ಯವಾಗಿದ್ದು,ಯಾದಗಿರಿ ನಗರಸಭೆಯಲ್ಲಿ ಬಿಜೆಪಿಗೆ ಜೆಡಿಎಸ್‌ನ ಇಬ್ಬರು ಸದಸ್ಯರು ಬಾಹ್ಯ ಬೆಂಬಲ ನೀಡಿದಂತೆ ಗುರುಮಠಕಲ್‌ನಲ್ಲಿ ಬಿಜೆಪಿಯ ಇಬ್ಬರು ಸದಸ್ಯರು ಜೆಡಿಎಸ್‌ಗೆ ಬೆಂಬಲ ನೀಡಲಿದ್ದಾರೆ ಎನ್ನುವ ಅಂಶವೂ ತೀವ್ರ ಚರ್ಚೆಯಲ್ಲಿದೆ. ಹೀಗಾದಲ್ಲಿ ಜೆಡಿಎಸ್‌ ಅಧಿಕಾರಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕಾಂಗ್ರೆಸ್‌, ಜೆಡಿಎಸ್‌ ನಮ್ಮ ಸಿದ್ಧಾಂತದವಿರೋಧಿ  ಪಕ್ಷಗಳು ಹಾಗಾಗಿ ಗುರುಮಠಕಲ್‌ನಲ್ಲಿ ಪಕ್ಷದ ಇಬ್ಬರು ಸದಸ್ಯರು ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಯಾದಗಿರಿ ಜೆಡಿಎಸ್‌ನವರಿಗೆ ನಾವು ಬೆಂಬಲ ಕೇಳಿರಲಿಲ್ಲಹಾಗಾಗಿ ಗುರುಮಠಕಲ್‌ನಲ್ಲಿ ಜೆಡಿಎಸ್‌ಗೆ ಬಿಜೆಪಿಯ ಬೆಂಬಲ ನೀಡಲ್ಲ.  -ಡಾ.ಶರಣ ಭೂಪಾಲರೆಡ್ಡಿ ನಾಯ್ಕಲ್‌, ಬಿಜೆಪಿ ಜಿಲ್ಲಾಧ್ಯಕ್ಷರು, ಯಾದಗಿರಿ.

ಪಕ್ಷದ ಮೂವರು ಸದಸ್ಯರು ಸಂಪರ್ಕಕ್ಕೆ ಸಿಕ್ಕಿಲ್ಲ. ಈಗಾಗಲೇ ವಿಪ್‌ ಜಾರಿಗೊಳಿಸಲಾಗಿದೆ. ನಮ್ಮ ಅಧಿ ಕೃತ ಅಭ್ಯರ್ಥಿ ಮೈನೋದ್ದೀನ್‌ ಪರ ಮತ ಚಲಾಯಿಸಲು ಸೂಚಿಸಲಾಗಿದೆ. ಆದೇಶ ಉಲ್ಲಂಘಿಸಿ ವಿರೋಧ ಮತ ಚಲಾಯಿಸಿದಲ್ಲಿ ಅಥವಾ ದೂರ ಉಳಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. – ಮಹಿಪಾಲರೆಡ್ಡಿ ಹತ್ತಿಕುಣಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು.

 

-ಅನೀಲ ಬಸೂದೆ

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.