ಯೋಗ ದಿಂದ ಆರೋಗ್ಯವೃದ್ಧಿ


Team Udayavani, Dec 29, 2017, 3:53 PM IST

yad-4.jpg

ವಡಗೇರಾ: ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸಿರಬೇಕಾದರೆ ನಿತ್ಯ ಯೋಗ ಮಾಡಬೇಕು. ಯಾರು ಯೋಗ ಮಾಡುತ್ತಾರೆ ಅವರಿಗೆ ರೋಗ ಇರುವುದಿಲ್ಲ ಎಂದು ಯಾದಗಿರಿ ಮತಕ್ಷೇತ್ರದ ಶಾಸಕ ಡಾ| ಎ. ಬಿ. ಮಾಲಕರಡ್ಡಿ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಲಬುರಗಿಯ ಎಚ್‌.ಸಿ.ಜಿ ಕ್ಯಾನ್ಸರ್‌ ಆಸ್ಪತ್ರೆ ಹಾಗೂ ಕಲಬುರಗಿಯ
ಸಂಗಮೇಶ್ವರ ಮಹಿಳಾ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಉಚಿತ ಕ್ಯಾನ್ಸರ್‌ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮಾಂತರ ಪ್ರದೇಶದಲ್ಲಿ ಮಹಿಳೆಯರಿಗೆ ಕ್ಯಾನ್ಸರ್‌ ರೋಗದ ಬಗ್ಗೆ ಹೆಚ್ಚಿನ ಮಾಹಿತಿ ಇರುವುದಿಲ್ಲ. ಇಂತಹ
ಶಿಬಿರಗಳಿಂದ ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಅನುಕೂಲವಾಗುತ್ತದೆ ಎಂದು ಹೇಳಿದರು.

40 ವರ್ಷ ದಾಟಿರುವ ಪ್ರತಿಯೊಬ್ಬರು ವೈದ್ಯರನ್ನು ಸಂಪರ್ಕಿಸಬೇಕು. ಯಾವುದಾದರೂ ರೋಗ ಇದ್ದರೆ ಅದನ್ನು
ಪ್ರಥಮ ಹಂತದಲ್ಲಿಯೆ ನಿಯಂತ್ರಣಕ್ಕೆ ತರಲು ಸಾಧ್ಯ. ಅದಕ್ಕಾಗಿ ವೈದ್ಯರನ್ನು ಗೌರವದಿಂದ ಕಾಣಬೇಕು. ಆಗ ವೈದ್ಯರು ಉತ್ಸಾಹದಿಂದ ರೋಗ ತಪಾಸಣೆ ಮಾಡಿ ಅದಕ್ಕೆ ತಕ್ಕಂತೆ ಔಷಧ ಕೊಟ್ಟು ರೋಗಿ ಜೀವ ಕಾಪಾಡಲು ಶಕ್ತಿ ಮೀರಿ ಶ್ರಮಿಸುತ್ತಾರೆ ಎಂದು ಹೇಳಿದರು. ಡಿಎಚ್‌ಒ ಡಾ| ನರಸಿಂಹಲು ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಆಂಗ್ಲ ಭಾಷೆಯ ಮೂರು ಎ ಅಕ್ಷರಗಳು ಬಹಳ ಮುಖ್ಯವಾದ ಪಾತ್ರ ವಹಿಸುತ್ತವೆ. ಅ ಎಂದರೆ ಆಶಾ, ಆರೋಗ್ಯ, ಅಂಗನವಾಡಿ ಕಾರ್ಯಕರ್ತರು. ಇವರು ಆರೋಗ್ಯ ಇಲಾಖೆಯ ಮೂರು ಸ್ಥಂಬಗಳು. ಇವರು ಮನೆ ಬಾಗಿಲಿಗೆ ಬಂದಾಗ ಆತ್ಮೀಯತೆಯಿಂದ ಕಂಡು ತಮ್ಮ ಸಮಸ್ಯೆ ಹೇಳಿಕೊಂಡರೆ ಅದಕ್ಕೆ ಪರಿಹಾರ ಸಿಗುತ್ತದೆ ಎಂದು ಹೇಳಿದರು.

ಸ್ನೆಹ ಕ್ಲೀನಿಕ್‌ ಹಾಗೂ ಸುರಕ್ಷಾ ಆರೋಗ್ಯ ಟ್ರಸ್ಟ್‌ ವತಿಯಿಂದ ಉಚಿತವಾಗಿ ಸ್ತ್ರೀರೋಗ ತಪಾಸಣೆ ಮಾಡಲಾಗುವುದು. ಜನರ ಆರೋಗ್ಯ ಕಾಪಾಡಲು ಜಿಲ್ಲೆಯ ಶಹಾಪುರ ಮತ್ತು ಯಾದಗಿರಿ ಸೇರಿ 109 ಜನ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇವರು ಸಮುದಾಯ ಮತ್ತು ಆರೋಗ್ಯ ಇಲಾಖೆ ಮಧ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಹೇಳಿದರು. 

ತಡವಾಗಿ ಮದುವೆಯಾಗುವುದು, ಮದುವೆ ನಂತರ ಎರಡು ವರ್ಷದವರೆಗೆ ಮಗು ಪಡೆಯಬಾರದು. ಹಾಗೆಯೆ ಮೊದಲ ಮಗು ಮತ್ತು ಎರಡನೇ ಮಗುವಿಗೂ ಕನಿಷ್ಠ ಪಕ್ಷ ಮೂರು ವರ್ಷಗಳ ಅಂತರವಿರಬೇಕು. 

ಆಗ ಮಾತ್ರ ಜನಸಂಖ್ಯೆ ತಡೆಗಟ್ಟಲು ಸಾಧ್ಯವಾಗಬಹುದು ಎಂದು ನುಡಿದರು. ಕಲಬುರಗಿಯ ಸಂಗಮೇಶ್ವರ ಮಹಿಳಾ
ಮಂಡಳಿ ಉಪಾಧ್ಯಕ್ಷೆ ಡಾ| ಮಹಾದೇವಿ ಮಾಲಕರಡ್ಡಿ, ಜಿಪಂ ಸದಸ್ಯರಾದ ಅಶೋಕರಡ್ಡಿ ಗೋನಾಲ, ಗಿರಿಜಮ್ಮ
ಸದಾಶಿವಪ್ಪಗೌಡ ರೋಟ್ನಡಗಿ, ಗ್ರಾಪಂ ಅಧ್ಯಕ್ಷ ಗೋಪಾಲ ವಿ. ನಾಯಕ ಚವ್ಹಾಣ, ತಾಪಂ ಮಾಜಿ ಅಧ್ಯಕ್ಷ ಬಸವರಾಜಪ್ಪಗೌಡ ಪಾಲೀಪಾಟೀಲ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ನಿರ್ದೇಶಕ ಬಸವರಾಜ ಸೊನ್ನದ, ಕಾಡಾ ಮಾಜಿ ಅಧ್ಯಕ್ಷ ಶ್ರೀನಿವಾರಡ್ಡಿ ಕಂದಕೂರ, ಯೂಥ್‌ ಅಧ್ಯಕ್ಷ ಮಲ್ಲು ಶಿವಪುರ, ಮಕ್ಕಳ ತಜ್ಞರಾದ ಸುಭಾಷ ಕರಣಗಿ, ಸಮುದಾಯ ಆರೋಗ್ಯ ಕೇಂದ್ರದ ಡಾ| ಜಗನ್ನಾಥರಡ್ಡಿ, ಡಾ| ರಮೇಶ ಗುತ್ತೇದಾರ, ಡಾ| ಸವಿತಾ,
ಡಾ| ಪರಿಮಳ, ಆರೋಗ್ಯ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ರಾಜೇಶ್ವರಿ ಸ್ವಾಗತಿಸಿದರು. ಆರೋಗ್ಯ ಸಹಾಯಕ ಶಶಿಕಾಂತ ಕಾರ್ಯಕ್ರಮ ನಿರೂಪಿಸಿದರು. ಮಾಣಿಕರಡ್ಡಿ ಕುರಕುಂದಿ ಅಭಿನಂದಿಸಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.