ಕಲಬುರಗಿ-ರಾಯಚೂರು ಸಂಪರ್ಕ ಕಡಿತ
Team Udayavani, Aug 18, 2020, 4:53 PM IST
ಶಹಾಪುರ: ನಾರಾಯಣಪುರದ ಬಸವಸಾಗರ ಜಲಾಶಯದಿಂದ 2.60 ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಟ್ಟ ಹಿನ್ನೆಲೆಯಲ್ಲಿ ತಾಲೂಕಿನ ಕೊಳ್ಳೂರ(ಎಂ) ಸೇತುವೆ ಮುಳಗಡೆಯಾಗಿದ್ದು, ಕಲಬುರಗಿ-ರಾಯಚೂರು ಸಂಪರ್ಕ ಕಡಿತಗೊಂಡಿದೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ತಹಶೀಲ್ದಾರ್ ಜಗನ್ನಾಥರಡ್ಡಿ, ನದಿ ತೀರದ ಜನತೆ ಎಚ್ಚರದಿಂದ ಇರಬೇಕು. ಜನರು ಸೇರಿದಂತೆ ಜಾನುವಾರುಗಳನ್ನು ನದಿ ತೀರಕ್ಕೆ ಬಿಡಬಾರದು ಎಂದು ತಿಳಿಸಿದರು. ಅಲ್ಲದೆ ಸ್ಥಳದಲ್ಲಿದ್ದ ಗ್ರಾಮಲೇಖ ಪಾಲಕರಿಗೆ ಪ್ರವಾಹದಿಂದ ಹಾನಿಗೊಳಗಾದ ಬೆಳೆ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದರು.
ಅಲ್ಲದೆ ಸೇತುವೆ ಬಳಿ ಯಾರೊಬ್ಬರು ಸುಳಿಯದಂತೆ ಎಚ್ಚರ ವಹಿಸಬೇಕು. ದಂಡೆಯಲ್ಲಿ ಪೊಲೀಸ್ ಕಾವಲು ಇರಲಿದೆ. ಅಧಿಕಾರಿಗಳು ತೀವ್ರ ನಿಗಾವಹಿಸಬೇಕು. ಮಹಾರಾಷ್ಟ್ರದಲ್ಲಿ ಸತತ ಮಳೆಯಾಗಿದ್ದರಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದರೂ ಬರಬಹುದು. ಹೀಗಾಗಿ ಕಂದಾಯ ಇಲಾಖೆ ಗ್ರಾಮಲೇಖಪಾಲಕರು ನೀರು ಹರಿಬಿಡುವ ಕುರಿತು ಕ್ಷಣ ಕ್ಷಣ ಮಾಹಿತಿ ಪಡೆದು ಗ್ರಾಮಗಳ ಜನರಿಗೆ ಎಚ್ಚರ ವಹಿಸಲು ಸೂಚಿಸುತ್ತಿರಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ