ಶಹಾಪುರದಲ್ಲಿ ಧಾರಾಕಾರ ಮಳೆ
Team Udayavani, Jun 10, 2018, 3:02 PM IST
ಹಾಪುರ: ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಶನಿವಾರ ಸಂಜೆ 4ರ ಸುಮಾರಿಗೆ ಧಾರಾಕಾರ ಮಳೆ ಸುರಿದಿದ್ದು, ಅಲ್ಲಲ್ಲಿ ನೀರು ನಿಂತ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.
ನಗರದ ಮಾರುತಿ ರಸ್ತೆ, ಬಸವೇಶ್ವರ ವೃತ್ತ ಸೇರಿದಂತೆ ಮೋಚಿಗಡ್ಡದಿಂದ ಗಂಗಾನಗರಕ್ಕೆ ತೆರಳುವ ರಸ್ತೆ ಮಳೆ ನೀರಿನಿಂದ ತುಂಬಿ ಹರಿಯಿತು. ಇದರಿಂದ ಸಂಚಾರಕ್ಕೆ ತೊಂದರೆ ಉಂಟಾಯಿತು. ಸಂಜೆ ಹೊತ್ತಿಗೆ ಮಳೆಯಾಗಿದ್ದರಿಂದ ಶಾಲಾ ಮಕ್ಕಳು, ವಾಹನ ಸವಾರರು ಸಾಕಷ್ಟು ಪರದಾಡುವಂತಾಯಿತು. ರಸ್ತೆ ಮೇಲೆ ಒಂದು
ಅಡಿ ಎತ್ತರ ನೀರು ಹರಿದಿದ್ದರಿಂದ ವಾಹನ ಸಂಚಾರ ಸೇರಿದಂತೆ ನಾಗರಿಕರ ಸಂಚಾರಕ್ಕೆ ತೊಂದರೆಯಾಯಿತು.
ನಗರದ ಪ್ರಮುಖ ರಸ್ತೆ ಬದಿಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆ ಮೇಲೆ ಹೊಲಸು ತ್ಯಾಜ್ಯ ಹರಿಯಿತು. ವ್ಯಾಪಾರಸ್ಥರು, ಬೀದಿ ಬದಿ ವ್ಯಾಪಾರಿಗಳು ಧಾರಾಕಾರ ಮಳೆಗೆ ಪರದಾಡಿದರು. ಹಣ್ಣು, ಹೂ, ತರಕಾರಿ ಮಳೆಗೆ ನೆನೆದ ಪರಿಣಾಮ ವ್ಯಾಪಾರಸ್ಥರು ಕಡಿಮೆ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸುವಂತಾಯಿತು. ತರಕಾರಿ ಮಾರ್ಕೆಟ್ನಲ್ಲಿ ಹೊಲಸು ತ್ಯಾಜ್ಯದ ನೀರು ಸಂಗ್ರಹಗೊಂಡಿದ್ದು, ಖರೀದಿಸಿಲು ಗ್ರಾಹಕರು ಹಿಂದೇಟು ಹಾಕಿದರು. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದವು. ಅಂಗಡಿದಾರರು ತಮ್ಮ ಪರಿಕರಗಳನ್ನು ಮಳೆ ನೀರಿನಿಂದ ರಕ್ಷಿಸಿಕೊಳ್ಳಲು ಪರದಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ