ಹೆಲ್ಮೆಟ್ ವಿತರಣೆ ಶ್ಲಾಘನೀಯ
Team Udayavani, Jan 4, 2018, 5:16 PM IST
ಶಹಾಪುರ: ಪ್ರತಿಯೊಬ್ಬ ಬೈಕ್ ಸವಾರ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ತೊಟ್ಟು ಬೈಕ್ ನಡೆಸುವುದರಿಂದ ಅಪಘಾತ ಸಂದರ್ಭದಲ್ಲಿ ನಿಮ್ಮ ಜೀವ ರಕ್ಷಣೆಗೆ ಇದು ಸಹಕಾರಿಯಾಗಲಿದೆ ಎಂದು ನಗರ ಠಾಣೆ ಸಿಪಿಐ ನಾಗರಾಜ ಹೇಳಿದರು. ಭೀಮರಾಯನ ಗುಡಿ ಹತ್ತಿರದ ಶ್ರೀಮಣಿಕಂಠ ಕಾಟನ್ ಜಿನ್ನಿಂಗ್ ಇಂಡಸ್ಟ್ರೀಜ್ ವತಿಯಿಂದ ಆಯೋಜಿಸಿದ್ದ ಉಚಿತ ಹೆಲ್ಮೆಟ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮಾನವನಾಗಿ ಜನ್ಮವೆತ್ತ ಮೇಲೆ ಒಂದಿಲ್ಲೊಂದು ದಿನ ಸಾವು ನಿಶ್ಚಿತ. ಆದರೆ ಸಾವನ್ನು ನಮ್ಮ ಕೈಯಾರ ಬರಮಾಡಿಕೊಳ್ಳುವುದಕ್ಕಿಂತ ಆದಷ್ಟು ಎಚ್ಚರವಹಿಸಬೇಕು ಎಂದರು.
ಮಣಿಕಂಠ ಕಾಟನ್ ಮಿಲ್ ಮಾಲೀಕರು ಮತ್ತು ಅವರ ಸಹೋದರ ಹೆಲ್ಮೆಟ್ ಉಚಿತವಾಗಿ ನೀಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯವಾಗಿದೆ. ಉತ್ತಮ ಕಾರ್ಯಕ್ಕೆ ನಾಗರಿಕರು ಕೈಲಾದ ಸಹಾಯ ಸಹಕಾರ ನೀಡಬೇಕು. ಅಪಘಾತ ಸಂದರ್ಭದಲ್ಲಿ ಜೀವ ಕಳೆದುಕೊಂಡ ಎಷ್ಟೋ ಕುಟುಂಬಗಳು ಇಂದು ಬೀದಿಪಾಲಾಗಿವೆ. ಸಾಕಷ್ಟು ನಿದರ್ಶನಗಳು ನಿಮ್ಮ ಕಣ್ಮುಂದಿವೆ. ಆದ್ದರಿಂದ ಹೆಲ್ಮೆಟ್ ಧರಿಸಿ ಜೀವ ಉಳಿಸಿ ಎಂದು ಮನವಿ ಮಾಡಿದರು. ಗ್ರಾಮೀಣ ಸಿಪಿಐ ಮಹ್ಮದ್ ಸಿರಾಜ್ ಮಾತನಾಡಿ, ಹೆಲ್ಮೆಟ್ ನಿಮ್ಮ ಜೀವ ರಕ್ಷಕ. ಇದನ್ನು ಸಮರ್ಪಕವಾಗಿ ಬಳಸಬೇಕು. ಅಭಿವೃದ್ಧಿ ಹೊಂದಿದ ನಗರ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಹೆಲ್ಮೆಟ್ ಬಳಸುತ್ತಾರೆ. ಕೆಲವು ನಗರ ಪ್ರದೇಶದಲ್ಲಿ ಇಂದಿಗೂ ಹೆಲ್ಮೆಟ್ ಬಳಕೆ ಆಗುತ್ತಿಲ್ಲ ಎಂದು ತಿಳಿಸಿದರು.
ಮಣಿಕಂಠ ಕಾಟನ್ ಜಿನ್ನಿಂಗ್ ಮಿಲ್ ವತಿಯಿಂದ ಉಚಿತ ಹೆಲ್ಮೆಟ್ ವಿತರಣೆ ಉತ್ತಮ ಕಾರ್ಯವಾಗಿದ್ದು, ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಅಗತ್ಯವಿದೆ. ಹೆಲ್ಮೆಟ್ ಪಡೆದುಕೊಂಡ ಪ್ರತಿಯೊಬ್ಬರು ಹತ್ತು ಜನಕ್ಕೆ ಈ ಕುರಿತು ಹೆಲ್ಮೆಟ್ ಪಡೆದುಕೊಳ್ಳುವಂತೆ ಸೂಚಿಸಬೇಕು ಎಂದು ಕರೆ ನೀಡಿದರು. ಕಾಟನ್ ಮಿಲ್ ಮಾಲೀಕ ಬಿ.ಎ. ಬಸವರಾಜ ಅಧ್ಯಕ್ಷತೆ ವಹಿಸಿದ್ದರು. ಭೀ. ಗುಡಿ ಪಿಎಸ್ಐ ತಿಪ್ಪಣ್ಣ ರಾಠೊಡ, ಪಿಎಸ್ಐ ಜಯಶ್ರೀ ಉಪಸ್ಥಿತರಿದ್ದರು. ಗುರು ಮಣಿಕಂಠ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್