ಹಮಾಲರ ಮನೆಗೆ ಶೀಘ್ರ ಕಾಯಕಲ್ಪ: ರಾಜುಗೌಡ
Team Udayavani, Aug 24, 2020, 4:01 PM IST
ಸುರಪುರ: ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಅಧ್ಯಕ್ಷ, ಶಾಸಕ ನರಸಿಂಹ ನಾಯಕ ರಾಜುಗೌಡ ಅವರು ಎಸ್. ಎಚ್. ಖಾನಾಪುರ ಎಪಿಎಂಸಿಗೆ ಇತ್ತೀಚೆಗೆ ಭೇಟಿ ನೀಡಿದರು.
ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊದಲ ಬಾರಿಗೆ ಕಚೇರಿಗೆ ಭೇಟಿ ನೀಡಿದ ಶಾಸಕರಿಗೆ ಎಪಿಎಂಸಿ ಸಿಬ್ಬಂದಿ ಸನ್ಮಾನಿಸಿದರು. ಮಾರುಕಟ್ಟೆಯ ಕುಂದು ಕೊರತೆ ಹಾಗೂ ಕೆಲ ಅಭಿವೃದ್ಧಿ ಕಾರ್ಯಗಳ ಕುರಿತು ಎಪಿಎಂಸಿ ಅಧ್ಯಕ್ಷ ದೇವಣ್ಣ ಮಗಲದಿನ್ನಿ ಮತ್ತು ಕಾರ್ಯದರ್ಶಿ ಸುರೇಶ ಬಾಬು ಅವರೊಂದಿಗೆ ಚರ್ಚಿಸಿದರು. ಹಮಾಲರ ಶ್ರಮಿಕ ಭವನಕ್ಕೆ ತಡಗೋಡೆ (ಕಾಂಪೌಂಡ) ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು ಶೀಘ್ರ ಟೆಂಡರ್ ಕರೆಯುವಂತೆ ಸೂಚಿಸಿದರು.
ಶ್ರಮಿಕ ಭವನದ ನಿವೇಶನದಲ್ಲಿ ವರ್ತಕರು ಅನಧಿಕೃತವಾಗಿ ಮಳಿಗೆ ನಿರ್ಮಿಸಿಕೊಂಡಿದ್ದಾರೆ. ತೆರವುಗೊಳಿಸಿದ ಕಾಂಪೌಂಡ್ ನಿರ್ಮಿಸಬೇಕು ಹಾಗೂ 186 ಹಮಾಲರ ಮನೆಗಳು ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿವೆ ಎಂದು ಹಮಾಲರು ಶಾಸಕರ ಗಮನಕ್ಕೆ ತಂದರು.
ತಕ್ಷಣವೇ ಹಮಾಲರ ಮನೆಗಳಿಗೆ ಭೇಟಿ ನೀಡಿದ ಶಾಸಕರು, ಅಂದಾಜು 20-25 ವರ್ಷಗಳ ಹಿಂದೆ 4 ಎಕರೆ ನಿವೇಶನದಲ್ಲಿ 186 ಜನ ಹಮಾಲರಿಗೆ ಮನೆ ಮಂಜೂರಾಗಿದ್ದು, ಎಲ್ಲರಿಗೂ ಹಕ್ಕು ಪತ್ರ ನೀಡಲಾಗಿದೆ. ಆದರೆ ಮನೆ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಯಾರೂ ಇತ್ತ ಗಮನಹರಿಸಿಲ್ಲ. ಈಗ 3 ನೂರು ಜನ ಹಮಾಲರಿದ್ದೇವೆ ಎಂದು ಹಮಾಲರ ಸಂಘದ ಮುಖಂಡ ದಶರಥ ದೊರೆ ಶಾಸಕರಿಗೆ ಮಾಹಿತಿ ನೀಡಿದರು. ಮಾರುಕಟ್ಟೆ ಕಾರ್ಯದರ್ಶಿ ಸುರೇಶ ಬಾಬು ಅವರಿಂದ ಮನೆಗಳ ಕುರಿತು ಮಾಹಿತಿ ಪಡೆದ ಶಾಸಕರು, ಹಮಾಲರ ಪಟ್ಟಿ ಕೊಡಿ ಕಾರ್ಮಿಕ ಸಚಿವರೊಂದಿಗೆ ಚರ್ಚಿಸುತ್ತೇನೆ ಇದೆಲ್ಲವನ್ನು ತೆಗೆದು ಹೊಸದಾಗಿ ಅಪಾರ್ಟ್ಮೆಂಟ್ ಮಾದರಿಯಲ್ಲಿ ನಿರ್ಮಿಸಿ ಎಲ್ಲರಿಗೂ ಮನೆ ಒದಗಿಸಿ ಕೊಡುವುದಾಗಿ ಶಾಸಕರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್