ಪಪ್ಪಾಯಿ ಬೆಳೆಯಿಂದ ಹೆಚ್ಚು ಲಾಭ
•ಖರ್ಚು ವೆಚ್ಚಗಳ ಮಾಹಿತಿ •ಇಲಾಖೆ ಸೌಲಭ್ಯ ಪಡೆಯಲು ರೈತರಿಗೆ ಕರೆ
Team Udayavani, May 14, 2019, 5:37 PM IST
ಯಾದಗಿರಿ: ಪಪ್ಪಾಯಿ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಸಹ ಪ್ರಾಧ್ಯಾಪಕ ಡಾ| ಪ್ರಶಾಂತ ಮಾತನಾಡಿದರು.
ಯಾದಗಿರಿ: ಎಕರೆಗೆ ಟನ್ಗಳಷ್ಟು ಇಳುವರಿ ಕೊಡುವ ಏಕೈಕ ಬೆಳೆ ಪಪ್ಪಾಯಿಯಾಗಿದ್ದು, ಇದನ್ನು ಸಕಾಲಕ್ಕೆ ಫಲ ನೀಡುವಂತೆ ನಾಟಿ ಮಾಡುವ ಮೂಲಕ ಹೆಚ್ಚಿನ ಲಾಭ ಪಡೆಯಬಹುದು. ಈ ನಿಟ್ಟಿನಲ್ಲಿ ರೈತರು ಕಾಳಜಿ ವಹಿಸಬೇಕು ಎಂದು ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥ ಡಾ| ರೇವಣಪ್ಪ ಹೇಳಿದರು.
ಶಹಾಪೂರ ತಾಲೂಕಿನ ದೋರನಹಳ್ಳಿ ತಾಂಡದಲ್ಲಿ ದೇವರಾಜ ನಾಯಕ ತೋಟದಲ್ಲಿ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ವತಿಯಿಂದ ಹಮ್ಮಿಕೊಳ್ಳಲಾದ ಪಪ್ಪಾಯಿ ಕ್ಷೇತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತೋಟಗಾರಿಕೆ ಇಲಾಖೆ ಅಧಿಕಾರಿ ಸುರೇಶ ಮಾತನಾಡಿ, ತಮ್ಮ ಇಲಾಖೆಯಿಂದ ನೀಡುವ ಸೌಲತ್ತುಗಳ ಬಗ್ಗೆ ರೈತರಿಗೆ ತಿಳಿಸಿದರು.
ಪ್ರಗತಿಪರ ರೈತ ಶಾಂತಿಲಾಲ್ ರಾಠೊಡ ಮಾತನಾಡಿ, ಪಪಾಯ ಬೆಳೆಯಲು ಖರ್ಚು ವೆಚ್ಚಗಳ ಬಗ್ಗೆ ಮಾತನಾಡಿ, ತೋಟಗಾರಿಕೆ ಬೆಳೆ ಬೆಳೆಯಲು ರೈತರು ಮುಂದಾಗಬೇಕೆಂದು ವಿನಂತಿಸಿದರು.
ಸೂಗಪ್ಪ ಪಾಟೀಲ ಮಾತನಾಡಿ, ವಿಜ್ಞಾನಿಗಳ ಸಂಪರ್ಕ ಇಟ್ಟುಕೊಂಡು ನಾವು ಬೆಳೆ ಬೆಳೆದರೆ ಹೆಚ್ಚಿನ ಇಳುವರಿ ಹಾಗೂ ಮಾರುಕಟ್ಟೆ ಬೆಲೆ ಪಡೆಯಬಹುದೆಂದರು.
ತೋಟದ ಮಾಲೀಕ ದೇವರಾಜ ತನ್ನ ಅನುಭವ ವಿವರಿಸಿ, ಒಂದು ಎಕರೆಗೆ ಕನಿಷ್ಠ 1 ಲಕ್ಷವಾದರು ಲಾಭವಾಗುತ್ತದೆಂದು ಹೇಳಿದರು.
ತೋ.ವಿ.ಶಿ. ಘಟಕದ ಪ್ರಾಧ್ಯಾಪಕ ಡಾ| ಪ್ರಶಾಂತ ಮಾತನಾಡಿದರು. ಕೊನೆಯಲ್ಲಿ ರೈತರೊಂದಿಗೆ ಸಂವಾದ ನಡೆಸಲಾಯಿತು. ಸಂವಾದದಲ್ಲಿ ಆಸಕ್ತ ರೈತರು ತಮಗೆ ಅಗತ್ಯವಾದ ಮಾಹಿತಿ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ