ಹಿಜಾಬ್ ವಿವಾದ: ಹೈಕೋರ್ಟ್ ಆದೇಶ ಪಾಲಿಸಲು ಸೂಚನೆ
Team Udayavani, Feb 15, 2022, 2:59 PM IST
ಸುರಪುರ: ಇಲ್ಲಿಯ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಿಜಾಬ್ಗ ಸಂಬಂಧಿಸಿದಂತೆ ತಾಲೂಕಿನ ಮೆಟ್ರಿಕ್ ಮತ್ತು ಮೆಟ್ರಿಕ್ ನಂತರದ ಶಾಲಾ-ಕಾಲೇಜುಗಳ ಪ್ರಾಂಶುಪಾಲರ ಮತ್ತು ಮುಖ್ಯಸ್ಥರ ಸಭೆ ಜರುಗಿತು.
ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನ್ಯಾಯಾಲಯದ ಅಂತಿಮ ಆದೇಶ ಹೊರಬರುವವರೆಗೆ ವಿದ್ಯಾರ್ಥಿಗಳು ಹಿಜಾಬ್, ಕೇಸರಿ ಶಾಲು ಸೇರಿ ಯಾವುದೇ ಧರ್ಮದ ಸಂಕೇತಗಳನ್ನು ಧರಿಸಿ ಶಾಲಾ-ಕಾಲೇಜಿಗೆ ಬರುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ನೀಡಿರುವುದರಿಂದ ಕಾಲೇಜುಗಳಲ್ಲಿ ಮುಖ್ಯಸ್ಥರು ಕಡ್ಡಾಯವಾಗಿ ಹೈಕೋರ್ಟ್ ಆದೇಶ ಪಾಲಿಸಬೇಕು ಎಂದರು.
ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ತಿಳಿ ಹೇಳಬೇಕು. ಒಪ್ಪದಿದ್ದರೆ ತಕ್ಷಣ ತಾಲೂಕಾಡಳಿತ ಮತ್ತು ಪೊಲೀಸ್ ಇಲಾಖೆ ಗಮನಕ್ಕೆ ತರಬೇಕು. ನಿರ್ಲಕ್ಷ್ಯ ವಹಿಸಿದರೆ ಅದಕ್ಕೆ ನೀವೇ ಜವಾಬ್ದಾರರು. ಇದಕ್ಕೆ ಪೋಷಕರು ಕೂಡ ನ್ಯಾಲಯದ ಆದೇಶ ಪಾಲಿಸಬೇಕು. ಒಟಾರೆಯಾಗಿ ತಾಲೂಕಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿಕೊಂಡು ಹೋಗಲು ಎಲ್ಲರು ಕೈಜೋಡಿಸಬೇಕು ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಡಿವೈಎಸ್ಪಿ ಡಾ| ದೇವರಾಜ್ ಮಾತನಾಡಿ, ಕಾನೂನು ಸುವ್ಯಸ್ಥೆಗೆ ಯಾರೊಬ್ಬರು ದಕ್ಕೆ ತರುವ ಪ್ರಯತ್ನ ಮಾಡಬಾರದು. ತಾಲೂಕಿನಲ್ಲಿ ಶಾಂತಿ ಕಾಪಾಡಬೇಕು. ಮಕ್ಕಳಿಗೆ ತಿಳಿಸಿ ಹೇಳುವ ಶಕ್ತಿ ಶಿಕ್ಷಕ ಮತ್ತು ಉಪನ್ಯಾಸಕರಿಗಿದೆ. ಕಾರಣ ಹೈಕೋರ್ಟ್ ಆದೇಶ ಪಾಲಿಸುವಂತೆ ತಿಳಿಸಬೇಕು. ಸಮಸ್ಯೆ ಕಂಡುಬಂದರೆ ಶಾಲಾ ಮುಖ್ಯಸ್ಥರು ಕೂಡಲೇ ತಮ್ಮನ್ನು ಸಂಪರ್ಕಿಸುವಂತೆ ತಿಳಿಸಿದರು. ವಿವಿಧ ಕಾಲೇಜುಗಳ ಪ್ರಾಂಶುಪಾಲರು ಮತ್ತು ಪ್ರಾಚಾರ್ಯರು ಮಾತನಾಡಿ, ಸಲಹೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ